ಸಾಂದರ್ಭಿಕ ಚಿತ್ರ 
ದೇಶ

ದೀಪಾವಳಿ: ಪಟಾಕಿ ಮಾರಾಟ, ಬಳಕೆಗೆ ದೆಹಲಿ ಸರ್ಕಾರ ನಿಷೇಧ!

ಇದು ಜನವರಿ 1ರವರೆಗೂ ಜಾರಿಯಲ್ಲಿರುತ್ತದೆ. ಈ ಘೋಷಣೆ ಮಾಡಿದ ದೆಹಲಿ ಪರಿಸರ ಸಚಿವ ಗೋಪಾಲ್ ರೈ, ರಾಷ್ಟ್ರ ರಾಜಧಾನಿಯನ್ನು ವಾಯು ಮಾಲಿನ್ಯ ಮುಕ್ತ ನಗರವನ್ನಾಗಿಸಲು ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ನವದೆಹಲಿ: ಚಳಿಗಾಲ ಸಮೀಪಿಸುತ್ತಿದ್ದಂತೆ ಮಾಲಿನ್ಯದ ಮಟ್ಟ ಹೆಚ್ಚಾಗುವ ನಿರೀಕ್ಷೆಯಲ್ಲಿ ದೆಹಲಿ ಸರ್ಕಾರ ಸೋಮವಾರ ನಗರದಾದ್ಯಂತ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಿದೆ.

ಇದು ಜನವರಿ 1ರವರೆಗೂ ಜಾರಿಯಲ್ಲಿರುತ್ತದೆ. ಈ ಘೋಷಣೆ ಮಾಡಿದ ದೆಹಲಿ ಪರಿಸರ ಸಚಿವ ಗೋಪಾಲ್ ರೈ, ರಾಷ್ಟ್ರ ರಾಜಧಾನಿಯನ್ನು ವಾಯು ಮಾಲಿನ್ಯ ಮುಕ್ತ ನಗರವನ್ನಾಗಿಸಲು ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರೈ, ಚಳಿಗಾಲದಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ಹಿನ್ನೆಲೆಯಲ್ಲಿ ಇಂದಿನಿಂದ ಜನವರಿ 1 ರವರೆಗೆ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲೆ ನಿಷೇಧ ಹೇರಲಾಗಿದೆ. ಇದರ ಬಗ್ಗೆ ಸರ್ಕಾರ ಸೂಚನೆಗಳನ್ನು ನೀಡಿದೆ. ಎಲ್ಲಾ ದೆಹಲಿ ಜನರಲ್ಲಿ ಸಹಕಾರವನ್ನು ಕೋರುತ್ತೇವೆ. ನಿಷೇಧ ಆದೇಶ ಪರಿಣಾಮಕಾರಿಯಾಗಿ ಅನುಷ್ಠಾನದ ಖಾತ್ರಿಗಾಗಿ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಸೂಚನೆಗಳನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.

ಆನ್‌ಲೈನ್‌ನಲ್ಲಿ ಮಾರಾಟವಾಗುವ ಪಟಾಕಿಗಳು ಸೇರಿದಂತೆ ಎಲ್ಲಾ ರೀತಿಯ ಪಟಾಕಿಗಳಿಗೆ ನಿಷೇಧ ಅನ್ವಯಿಸುತ್ತದೆ. ದೆಹಲಿ ಪೋಲೀಸರು ನಿಷೇಧ ಜಾರಿ ಕಾರ್ಯ ನಿರ್ವಹಿಸಲಿದ್ದು, ದೈನಂದಿನ ಕ್ರಿಯೆಯ ವರದಿಗಳನ್ನು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಗೆ ಸಲ್ಲಿಸಬೇಕಾಗುತ್ತದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT