ಸಂಜಯ್ ಸಿಂಗ್ ಗಂಗ್ವಾರ್  
ದೇಶ

ದನದ ಕೊಟ್ಟಿಗೆಯಲ್ಲಿ ಮಲಗಿದರೆ ಕ್ಯಾನ್ಸರ್ ಗುಣವಾಗುತ್ತದೆ: ಉತ್ತರ ಪ್ರದೇಶ ಸಚಿವ ಗಂಗ್ವಾರ್

ಕ್ಯಾನ್ಸರ್ ರೋಗಿಯು ದನದ ಕೊಟ್ಟಿಗೆಯನ್ನು ಶುಚಿಗೊಳಿಸಿ, ಅಲ್ಲಿ ಮಲಗಿದರೆ ಕ್ಯಾನ್ಸರ್ ಕೂಡ ವಾಸಿಯಾಗುತ್ತದೆ. ನೀವು ಹಸುವಿನ ಬೆರಣಿ ಸುಟ್ಟರೆ, ಸೊಳ್ಳೆಗಳ ಸಮಸ್ಯೆಯಿಂದ ನಿಮಗೆ ಮುಕ್ತಿ ಸಿಗುತ್ತದೆ. ಆದ್ದರಿಂದ ಪಶುಸಂಗೋಪನೆ ಎಲ್ಲವೂ ಒಂದು ರೀತಿಯಲ್ಲಿ ಉಪಯುಕ್ತವಾಗಿದೆ.

ಲಕ್ನೋ: ಕ್ಯಾನ್ಸರ್‌ ರೋಗಿಗಳು ದನದ ಕೊಟ್ಟಿಗೆ ಸ್ವಚ್ಛಗೊಳಿಸಿ ಅಲ್ಲಿ ಮಲಗುವುದರಿಂದ ಕ್ಯಾನ್ಸರ್‌ ರೋಗ ಗುಣಮುಖವಾಗುತ್ತದೆ ಎಂದು ಉತ್ತರ ಪ್ರದೇಶದ ಸಚಿವ ಸಂಜಯ್ ಸಿಂಗ್ ಗಂಗ್ವಾರ್ ಹೇಳಿಕೆ ನೀಡಿದ್ದಾರೆ.

ಕಬ್ಬು ಬೆಳೆ ಅಭಿವೃದ್ಧಿಯ ಸಚಿವ ಗಂಗ್ವಾರ್, ಭಾನುವಾರ ತಮ್ಮ ಕ್ಷೇತ್ರವಾದ ಪಿಲಿಭಿತ್‌ನ ಪಕಾಡಿಯಾ ನೌಗಾವಾನ್‌ನಲ್ಲಿ ಗೋಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತಾ ಈ ಹೇಳಿಕೆ ನೀಡಿದರು. ಕ್ಯಾನ್ಸರ್ ರೋಗಿಯು ದನದ ಕೊಟ್ಟಿಗೆಯನ್ನು ಶುಚಿಗೊಳಿಸಿ, ಅಲ್ಲಿ ಮಲಗಿದರೆ ಕ್ಯಾನ್ಸರ್ ಕೂಡ ವಾಸಿಯಾಗುತ್ತದೆ. ನೀವು ಹಸುವಿನ ಬೆರಣಿ ಸುಟ್ಟರೆ, ಸೊಳ್ಳೆಗಳ ಸಮಸ್ಯೆಯಿಂದ ನಿಮಗೆ ಮುಕ್ತಿ ಸಿಗುತ್ತದೆ. ಆದ್ದರಿಂದ ಪಶುಸಂಗೋಪನೆ ಎಲ್ಲವೂ ಒಂದು ರೀತಿಯಲ್ಲಿ ಉಪಯುಕ್ತವಾಗಿದೆ ಎಂದು ಸಚಿವರು ಪ್ರತಿಪಾದಿಸಿದ್ದಾರೆ.

ಅಧಿಕ ರಕ್ತದೊತ್ತಡದ ರೋಗಿಗಳಿದ್ದರೆ ಕೇಳಿ. ಇಲ್ಲಿ ಹಸುಗಳಿವೆ. ನೀವು ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಹಸುಗಳ ಸೇವೆ ಮಾಡುವುದರಿಂದ ಔಷಧವನ್ನು ಅರ್ಧ ಪ್ರಮಾಣಕ್ಕೆ ಇಳಿಸಬಹುದು. ಒಬ್ಬ ವ್ಯಕ್ತಿ ರಕ್ತದೊತ್ತಡಕ್ಕೆ ಔಷಧಿಯಾಗಿ 20 ಮಿ.ಗ್ರಾಂ ಡೋಸ್ ತೆಗೆದುಕೊಳ್ಳುತ್ತಿದ್ದರೆ, ಹಸುಗಳ ಸೇವೆಯಿಂದ 10 ದಿನಗಳಲ್ಲಿ 10 ಮಿ.ಗ್ರಾಂಗೆ ಔಷಧಿ ಪ್ರಮಾಣ ಇಳಿಯುತ್ತದೆ ಎಂದು ಅವರು ಹೇಳಿದ್ದಾರೆ. ಗೋಶಾಲೆಗಳೊಂದಿಗೆ ಜನರನ್ನು ಸಂಪರ್ಕಿಸುವುದು ನಮ್ಮ ಪ್ರಯತ್ನ. ಜನ ತಮ್ಮ ವಿವಾಹ ವಾರ್ಷಿಕೋತ್ಸವ ಹಾಗೂ ಮಕ್ಕಳ ಜನ್ಮದಿನವನ್ನು ಗೋಶಾಲೆಯಲ್ಲಿ ಆಚರಿಸಬೇಕು. ಹಾಗೂ ಗೋಶಾಲೆಗೆ ಮೇವನ್ನು ದಾನ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Southern Zonal Council meet: ಜಲ ವಿವಾದಗಳ ಕುರಿತು ಮಾತುಕತೆಗೆ ಅಮಿತ್ ಶಾ ಕರೆಗೆ ರಾಜ್ಯಗಳ ಬೆಂಬಲ

ಕೇಂದ್ರದಿಂದ ಮಹತ್ವದ ನಿರ್ಧಾರ: ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠ ಸ್ಥಾಪನೆ

J&K ಭಾರತದ ಅವಿಭಾಜ್ಯ ಅಂಗ: ಅಮೆರಿಕ ರಾಯಭಾರಿಗೆ ಪಾಕ್ ಸಮನ್ಸ್; ಅದು ಅವರ ವಿಷಯ- ಸಿಎಂ ಒಮರ್ ಅಬ್ದುಲ್ಲಾ

ತಂದೆ ಮನೆಗೆ ಹೋಗೋದಿದ್ರೆ ಕದ್ದುಮುಚ್ಚಿ ಹೋಗ್ಬೇಕಿತ್ತ?: ಮೇಘ ನಾಯರ್ ಮೊದಲ ಪ್ರತಿಕ್ರಿಯೆ ಬೆನ್ನಲ್ಲೇ ನೆಟ್ಟಿಗರ ಪ್ರಶ್ನೆ

Delimitation ಬೇಡ್ವೇ ಬೇಡ ಎನ್ನುತ್ತಿದ್ದ ತಮಿಳುನಾಡು ಸಿಎಂ ವಿಜಯ್ ನಿಲುವಲ್ಲಿ ದಿಢೀರ್ ಬದಲಾವಣೆ: ಅಮಿತ್ ಶಾ ಜೊತೆಗಿನ ಸಭೆಯಲ್ಲಿ ಹೇಳಿದ್ದೇನು?