ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಹೊಸ ಸರ್ಕಾರ ರಚನೆಗೂ ಮುನ್ನ ರಾಷ್ಟ್ರಪತಿ ಆಳ್ವಿಕೆ ರದ್ದು!

ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ ಅಕ್ಟೋಬರ್ 31, 2019 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರ ಪತಿ ಆಳ್ವಿಕೆಯನ್ನು ಹೇರಲಾಗಿತ್ತು.

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ ಹಿಂಪಡೆಯಲಾಗಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 31, 2019ರ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಮರು ಸಂಘಟನೆ ಕಾಯ್ದೆಯ ಸೆಕ್ಷನ್ 54ರಡಿ ಮುಖ್ಯಮಂತ್ರಿ ನೇಮಕಕ್ಕೂ ಮುನ್ನಾ ತಕ್ಷಣವೇ ಹಿಂತೆಗೆದುಕೊಳ್ಳಲಾಗುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.

ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ ಅಕ್ಟೋಬರ್ 31, 2019 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರ ಪತಿ ಆಳ್ವಿಕೆಯನ್ನು ಹೇರಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ