ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್  online desk
ದೇಶ

ಈಗ EVM ಬ್ಯಾಟರಿ ಬಗ್ಗೆಯೂ ಕಾಂಗ್ರೆಸ್ ಆರೋಪ: ಚುನಾವಣಾ ಆಯುಕ್ತ ಹೇಳಿದ್ದೇನೆಂದರೆ...

"ಈಗ ನಾವು ಮುಂದೆ ಏನಾಗಬಹುದು ಎಂದು ಯೋಚಿಸುತ್ತಿದ್ದೇವೆ, ನಮಗೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಆದರೆ ಖಂಡಿತವಾಗಿಯೂ ಹೊಸ ಆರೋಪ ಬರುತ್ತದೆ" ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ EVM ಬ್ಯಾಟರಿ, ಹ್ಯಾಕಿಂಗ್ ಕುರಿತ ಕಾಂಗ್ರೆಸ್ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ದಿನಾಂಕ ಘೋಷಿಸಲು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಹರ್ಯಾಣ ವಿಧಾನಸಭಾ ಚುನಾವಣೆ ಮತ ಎಣಿಕೆಯ ವೇಳೆ ಬ್ಯಾಟರಿ ಸಾಮರ್ಥ್ಯ ವ್ಯತ್ಯಯ ಹೊಂದಿದ್ದ ಬೇರೆ ಬೇರೆ ಇವಿಎಂ ಗಳು ಬೇರೆ ಬೇರೆ ರೀತಿಯಲ್ಲಿ ಫಲಿತಾಂಶಗಳನ್ನು ನೀಡುತ್ತಿದ್ದವು, ಆದ್ದರಿಂದ ಇವಿಎಂಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಕಾಂಗ್ರೆಸ್ ನ ಈ ಆರೋಪಗಳನ್ನು ಸಿಇಸಿ ರಾಜೀವ್ ಕುಮಾರ್ ತಿರಸ್ಕರಿಸಿದ್ದಾರೆ. ಫಲಿತಾಂಶಗಳ ಮೇಲೆ ಪರಿಣಾಮ ಬೀರುವ ಬ್ಯಾಟರಿ ಸಾಮರ್ಥ್ಯದ ಸಮಸ್ಯೆಯನ್ನು ಉಲ್ಲೇಖಿಸಿದ CEC ಹ್ಯಾಕಿಂಗ್‌ ಗೆ ಸಂಬಂಧಿಸಿದಂತೆ ಹಿಂದೆ ಆರೋಪಗಳನ್ನು ಮಾಡಲಾಗಿತ್ತು "ಆದರೆ ಬ್ಯಾಟರಿಗೆ ಸಂಬಂಧಿಸಿದಂತೆ ಇದು ಮೊದಲ ಬಾರಿಗೆ ಬಂದಿದೆ" ಎಂದು ಹೇಳಿದರು.

"ಈಗ ನಾವು ಮುಂದೆ ಏನಾಗಬಹುದು ಎಂದು ಯೋಚಿಸುತ್ತಿದ್ದೇವೆ, ನಮಗೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಆದರೆ ಖಂಡಿತವಾಗಿಯೂ ಹೊಸ ಆರೋಪ ಬರುತ್ತದೆ" ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ಮತದಾನದ ದಿನಕ್ಕೆ ಸುಮಾರು ಆರು ದಿನಗಳ ಮೊದಲು, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಕಾರ್ಯಗತಗೊಳಿಸಲಾಗುತ್ತದೆ ಮತ್ತು ಅಭ್ಯರ್ಥಿಗಳ ಚುನಾವಣಾ ಚಿಹ್ನೆಗಳನ್ನು ಲೋಡ್ ಮಾಡಲಾಗುತ್ತದೆ ಮತ್ತು ಅಭ್ಯರ್ಥಿಗಳು ಅಥವಾ ಅವರ ಅಧಿಕೃತ ಏಜೆಂಟರ ಸಹಿ ಹೊಂದಿರುವ ಹೊಸ ಬ್ಯಾಟರಿಯನ್ನು ಸ್ಥಾಪಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

"ಇವಿಎಂ ಬಿಡಿ, ಬ್ಯಾಟರಿಗಳು (ಸ್ಥಾಪಿತ) ಸಹ ಅಭ್ಯರ್ಥಿಗಳ ಸಹಿಯನ್ನು ಹೊಂದಿವೆ. ನಮಗೂ (ಈ ನಿಯಮ) ತಿಳಿದಿರಲಿಲ್ಲ ಏಕೆಂದರೆ ಇದನ್ನು ಬಹಳ ಹಿಂದೆಯೇ ರೂಪಿಸಲಾಗಿದೆ. ಈಗ ಅದು ನಮಗೆ ಸಹಾಯ ಮಾಡುತ್ತಿದೆ" ಎಂದು ಅವರು ಬ್ಯಾಟರಿಗೆ ಸಂಬಂಧಿಸಿದ ವಿಶ್ವಾಸಾರ್ಹತೆಯ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಕೆಲವು ದೇಶದಲ್ಲಿ ಜನರನ್ನು ಸ್ಫೋಟಿಸಲು ಪೇಜರ್‌ಗಳನ್ನು ಬಳಸಬಹುದೇ, ಇವಿಎಂಗಳನ್ನು ಏಕೆ ಹ್ಯಾಕ್ ಮಾಡಬಾರದು ಎಂದು ಜನರು ಕೇಳುತ್ತಾರೆ. ಪೇಜರ್‌ಗಳು ನೆಟ್‌ವರ್ಕ್‌ಗೆ ಸಂಪರ್ಕಗೊಂಡಿವೆ. ಇವಿಎಂಗಳು ಸಂಪರ್ಕ ಹೊಂದಿಲ್ಲ" ಎಂದು ಸಿಇಸಿ ರಾಜೀವ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT