ದೇಶ

ಜಮ್ಮು-ಕಾಶ್ಮೀರ: ಫಾರೂಕ್ ಅಬ್ದುಲ್ಲಾ ರಾಜ್ಯಸಭೆಗೆ; ಒಮರ್ ಸಂಪುಟದಲ್ಲಿ ಕಾಂಗ್ರೆಸ್ ಗೆ ಒಂದು ಸಚಿವ ಸ್ಥಾನ

ನೂತನ ಜಮ್ಮು-ಕಾಶ್ಮೀರ ಸರ್ಕಾರದಲ್ಲಿ ಕೇವಲ 10 ಸಚಿವರು ಇರಬಹುದು. ಅವರಲ್ಲಿ ಸಿಎಂ ಕೂಡ ಒಳಗೊಂಡಿರುತ್ತಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಆರು ಸ್ಥಾನಗಳನ್ನು ಗೆದ್ದುಕೊಂಡಿದೆ.

ಶ್ರೀನಗರ: ಜಮ್ಮು-ಕಾಶ್ಮೀರದ ಒಮರ್ ಅಬ್ದುಲ್ಲಾ ನೇತೃತ್ವದ ಎನ್‌ಸಿ-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಒಂದು ಸಂಪುಟ ದರ್ಜೆ ಸ್ಥಾನಮಾನ ಮತ್ತು ಜಮ್ಮು-ಕಾಶ್ಮೀರ ಪ್ರದೇಶದಿಂದ ಒಂದು ರಾಜ್ಯಸಭಾ ಸ್ಥಾನ ಪಡೆಯಬಹುದು. ನ್ಯಾಷನಲ್ ಕಾನ್ಫರೆನ್ಸ್ ತನ್ನ ಅಧ್ಯಕ್ಷ ಮತ್ತು ಮೂರು ಬಾರಿ ಸಿಎಂ ಆಗಿದ್ದ ಫಾರೂಕ್ ಅಬ್ದುಲ್ಲಾ ಅವರನ್ನು ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದರಿಂದ ಕಣಕ್ಕಿಳಿಸುವ ಮೂಲಕ ಸಂಸತ್ತಿಗೆ ಕಳುಹಿಸಬಹುದು.

ನೂತನ ಜಮ್ಮು-ಕಾಶ್ಮೀರ ಸರ್ಕಾರದಲ್ಲಿ ಕೇವಲ 10 ಸಚಿವರು ಇರಬಹುದು. ಅವರಲ್ಲಿ ಸಿಎಂ ಕೂಡ ಒಳಗೊಂಡಿರುತ್ತಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಆರು ಸ್ಥಾನಗಳನ್ನು ಗೆದ್ದುಕೊಂಡಿದೆ.

ವಿಧಾನಸಭೆ ಇಲ್ಲದಿದ್ದ ಕಾರಣ ಜಮ್ಮು-ಕಾಶ್ಮೀರದಲ್ಲಿ ನಾಲ್ಕು ರಾಜ್ಯಸಭಾ ಸ್ಥಾನಗಳು ಖಾಲಿಯಾಗಿವೆ. ಶೀಘ್ರದಲ್ಲಿಯೇ ನೂತನ ಸರ್ಕಾರ ಅಸ್ಥಿತ್ವಕ್ಕೆ ಬರಲಿದ್ದು, ಭಾರತೀಯ ಚುನಾವಣಾ ಆಯೋಗವು ರಾಜ್ಯಸಭಾ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಶೀಘ್ರವೇ ಪ್ರಾರಂಭಿಸಬಹುದು.

ನ್ಯಾಷನಲ್ ಕಾನ್ಫರೆನ್ಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ 55 ಶಾಸಕರು ಬೆಂಬಲ ನೀಡಿದರೆ, ಅದು ಮೂರು ರಾಜ್ಯಸಭಾ ಸ್ಥಾನಗಳನ್ನು ಪಡೆಯಬಹುದು, 29 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಒಂದು ಸ್ಥಾನವನ್ನು ಪಡೆಯಬಹುದು. ಎನ್‌ಸಿ ಕಾಂಗ್ರೆಸ್‌ಗೆ ಒಂದು ಸ್ಥಾನವನ್ನು ನೀಡಬಹುದು ಮತ್ತು ಹಿರಿಯ ನಾಯಕ ಫಾರೂಕ್ ಅಬ್ದುಲ್ಲಾ ಸೇರಿದಂತೆ ತನ್ನ ಇಬ್ಬರು ಸದಸ್ಯರನ್ನು ರಾಜ್ಯಸಭೆಗೆ ಕಳುಹಿಸಬಹುದು. ಈ ಸೂತ್ರವು ನ್ಯಾಷನಲ್ ಕಾಂಗ್ರೆಸ್ ಗೆ ಕಾಂಗ್ರೆಸ್‌ನೊಂದಿಗೆ ಸುಗಮ ಸಮ್ಮಿಶ್ರ ಸರ್ಕಾರವನ್ನು ನಡೆಸಲು ಸಹಾಯ ಮಾಡುತ್ತದೆ.

ಈ ಮಧ್ಯೆ, ಒಮರ್ ಅಬ್ದುಲ್ಲಾ ಅವರು ನಾಳೆ ಶ್ರೀನಗರದಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಅವರ ಪ್ರಧಾನ ಕಾರ್ಯದರ್ಶಿ ಮನೋಜ್ ಸಿನ್ಹಾ ಅವರು ಒಮರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಆಹ್ವಾನಿಸುವ ಲೆಫ್ಟಿನೆಂಟ್ ಗವರ್ನರ್ ಅವರ ಪತ್ರವನ್ನು ಹಸ್ತಾಂತರಿಸಿದರು.

4 ಖಾಲಿ ಸ್ಥಾನಗಳು

  • ಜಮ್ಮು-ಕಾಶ್ಮೀರದಿಂದ 4 ರಾಜ್ಯಸಭಾ ಸ್ಥಾನಗಳು ಖಾಲಿಯಾಗಿದೆ

  • ಅಸೆಂಬ್ಲಿಯಲ್ಲಿ 55 ಸದಸ್ಯರ ಬೆಂಬಲವನ್ನು ಹೊಂದಿರುವ ಕಾರಣ ಎನ್‌ಸಿ-ಕಾಂಗ್ರೆಸ್ 3 ರಾಜ್ಯಸಭಾ ಸ್ಥಾನಗಳನ್ನು ಪಡೆಯಬಹುದು

  • ಎನ್‌ಸಿ ಕಾಂಗ್ರೆಸ್‌ಗೆ 1 ಸ್ಥಾನವನ್ನು ನೀಡಬಹುದು ಮತ್ತು ಫಾರೂಕ್ ಅಬ್ದುಲ್ಲಾ ಸೇರಿದಂತೆ ಅದರ ಇಬ್ಬರು ಸದಸ್ಯರನ್ನು ರಾಜ್ಯಸಭೆಗೆ ಕಳುಹಿಸಬಹುದು

  • ಬಿಜೆಪಿ, 29 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, 1 ರಾಜ್ಯಸಭೆ ಸ್ಥಾನವನ್ನು ಪಡೆಯಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT