ನಟಿ ರಶ್ಮಿಕಾ ಮಂದಣ್ಣ 
ದೇಶ

ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ Rashmika Mandanna ರಾಯಭಾರಿ!

ರಶ್ಮಿಕಾ ಮಂದಣ್ಣ ಅವರನ್ನು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ. ಈ ಕುರಿತು ಖುದ್ದು ನಟಿ ವಿಷಯ ತಿಳಿಸಿದ್ದಾರೆ.

ನವದೆಹಲಿ: ಡೀಪ್ ಫೇಕ್ ವಿಡಿಯೋಗಳಿಗೆ ತುತ್ತಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಇದೀಗ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.

ಹೌದು.. ರಶ್ಮಿಕಾ ಮಂದಣ್ಣ ಅವರನ್ನು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ.

ಈ ಕುರಿತು ಖುದ್ದು ನಟಿ ವಿಷಯ ತಿಳಿಸಿದ್ದು, 'ಕೆಲವು ವರ್ಷಗಳ ಹಿಂದೆ ನನ್ನ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಗೊತ್ತೇ ಇದೆ. ಅದು ಸೈಬರ್ ಕ್ರೈಂ. ಅದರ ನಂತರ ನಾನು ಸೈಬರ್ ಅಪರಾಧಗಳ ವಿರುದ್ಧ ಹೋರಾಡಬೇಕು ಎಂದು ಯೋಚಿಸಿದೆ.

ಈ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು ಎಂದುಕೊಂಡಿದ್ದೆ. ಆ ನಿಮಿತ್ತ ಕಾರ್ಯಯೋಜನೆ ರೂಪಿಸಿದ್ದೆ ಎಂದು ತಮ್ಮ ಇನ್ ಸ್ಟಾಗ್ರಾಮ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ನಾನು ಕೇಂದ್ರ ಸರ್ಕಾರದ ಜೊತೆಗೆ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿದ್ದೇನೆ ಎಂದು ಹೇಳಲು ನನಗೆ ಸಂತೋಷವಾಗಿದೆ. ಸೈಬರ್ ಕ್ರಿಮಿನಲ್‌ಗಳು ಎಲ್ಲರನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ.

ನಾವು ಎಚ್ಚರವಾಗಿರುವುದು ಮಾತ್ರವಲ್ಲದೆ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು ಮತ್ತು ಸೈಬರ್ ಅಪರಾಧಗಳ ವಿರುದ್ಧ ಕೆಲಸ ಮಾಡಬೇಕು. ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿ ನಾನು ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುತ್ತೇನೆ. ಸೈಬರ್ ಅಪರಾಧಗಳಿಂದ ದೇಶವನ್ನು ರಕ್ಷಿಸಬೇಕು ಎಂದು ಅದು ಹೇಳಿದೆ ಎಂದು ನಟಿ ಹೇಳಿದ್ದಾರೆ.

ವೈರಲ್ ಆಗಿದ್ದ ರಶ್ಮಿಕಾ ವಿಡಿಯೋ

ಇನ್ನು ಕೆಲ ದಿನಗಳ ಹಿಂದೆ ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ಹಲವರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಎನ್ನುವ ವಿಡಿಯೋ ಒಂದಕ್ಕೆ ಇನ್ನೊಬ್ಬರ ಮುಖವನ್ನು ಹಾಕಿ ವಿಡಿಯೋ ಮಾಡುವ ಭಯಾನಕ ತಂತ್ರ ಈ ಡೀಪ್​ ಫೇಕ್​. ಇದಾಗಲೇ ಕೆಲವರಿಗೆ ಈ ಕೆಟ್ಟ ಅನುಭವವಾಗಿದ್ದರೂ, ನಟಿ ರಶ್ಮಿಕಾ ಮಂದಣ್ಣ ಅವರ ಪ್ರಕರಣದಿಂದಾಗಿ ಇದು ಭಾರಿ ಸುದ್ದಿಗೆ ಗ್ರಾಸವಾಗಿತ್ತು.

ಇದಾದ ಬಳಿಕ ಬಾಲಿವುಡ್​ ನಟಿಯರಾದ ಕಾಜೋಲ್​, ಆಲಿಯಾ ಸೇರಿದಂತೆ ಹಲವು ನಟಿಯರ ವಿಡಿಯೋಗಳು ಕೂಡ ಇದೇ ರೀತಿ ವೈರಲ್ ಆಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT