ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್‌: ಅಗ್ರೋಟೆಕ್ ಸಂಸ್ಥೆಯಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಐವರು ಸಾವು

ಕಾರ್ಮಿಕರು ಕಂಪನಿಯ ಕೊಳಚೆ ಸಂಸ್ಕರಣಾ ಘಟಕವನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಕಚ್(ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಬಾಗ್ಮಾರ್ ಅವರು ಹೇಳಿದ್ದಾರೆ.

ಭುಜ್: ಗುಜರಾತ್‌ನ ಕಚ್ ಜಿಲ್ಲೆಯ ಅಗ್ರೋಟೆಕ್ ಕಂಪನಿಯೊಂದರಲ್ಲಿ ಬುಧವಾರ ಬೆಳಗ್ಗೆ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಐವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕಾರ್ಮಿಕರು ಕಂಪನಿಯ ಕೊಳಚೆ ಸಂಸ್ಕರಣಾ ಘಟಕವನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಕಚ್(ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಬಾಗ್ಮಾರ್ ಅವರು ಹೇಳಿದ್ದಾರೆ.

"ಕೊಳಚೆ ಸಂಸ್ಕರಣಾ ಘಟಕ ಸ್ವಚ್ಛಗೊಳಿಸಲು ಕಾರ್ಮಿಕರೊಬ್ಬರು ಟ್ಯಾಂಕ್‌ಗೆ ಇಳಿದಾಗ ಅವರು ಉಸಿರುಗಟ್ಟಿ ಪ್ರಜ್ಞೆ ತಪ್ಪಿದ್ದಾರೆ. ಈ ವೇಳೆ ಇನ್ನಿಬ್ಬರು ಕಾರ್ಮಿಕರು ಆತನನ್ನು ರಕ್ಷಿಸಲು ಟ್ಯಾಂಕ್ ಒಳಗೆ ಇಳಿದಿದ್ದಾರೆ. ಆದರೆ ಅವರು ಸಹ ಮೂರ್ಛೆ ಹೋಗಿದ್ದಾರೆ. ಅವರನ್ನು ಅನುಸರಿಸಿ ಇನ್ನೂ ಇಬ್ಬರು ಟ್ಯಾಂಕ್ ಗೆ ಇಳಿದಿದ್ದು, ಎಲ್ಲಾ ಐವರು ಮೃತಪಟ್ಟಿದ್ದಾರೆ ಎಂದು” ಬಾಗ್ಮಾರ್ ತಿಳಿಸಿದ್ದಾರೆ.

ಈ ಸಂಬಂಧ ಕಾಂಡ್ಲಾ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಖಾದ್ಯ ತೈಲ ಮತ್ತು ಜೈವಿಕ ಡೀಸೆಲ್ ಉತ್ಪಾದನೆಯಲ್ಲಿ ತೊಡಗಿರುವ 'ಇಮಾಮಿ ಅಗ್ರೋಟೆಕ್' ಸಂಸ್ಥೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಕಾಂಡ್ಲಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತ ಕಾರ್ಮಿಕರನ್ನು ಸಿದ್ಧಾರ್ಥ್ ತಿವಾರಿ, ಅಜ್ಮತ್ ಖಾನ್, ಆಶಿಶ್ ಗುಪ್ತಾ, ಆಶಿಶ್ ಕುಮಾರ್ ಮತ್ತು ಸಂಜಯ್ ಠಾಕೂರ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT