ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್‌: ಅಗ್ರೋಟೆಕ್ ಸಂಸ್ಥೆಯಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಐವರು ಸಾವು

ಕಾರ್ಮಿಕರು ಕಂಪನಿಯ ಕೊಳಚೆ ಸಂಸ್ಕರಣಾ ಘಟಕವನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಕಚ್(ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಬಾಗ್ಮಾರ್ ಅವರು ಹೇಳಿದ್ದಾರೆ.

ಭುಜ್: ಗುಜರಾತ್‌ನ ಕಚ್ ಜಿಲ್ಲೆಯ ಅಗ್ರೋಟೆಕ್ ಕಂಪನಿಯೊಂದರಲ್ಲಿ ಬುಧವಾರ ಬೆಳಗ್ಗೆ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಐವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕಾರ್ಮಿಕರು ಕಂಪನಿಯ ಕೊಳಚೆ ಸಂಸ್ಕರಣಾ ಘಟಕವನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಕಚ್(ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಬಾಗ್ಮಾರ್ ಅವರು ಹೇಳಿದ್ದಾರೆ.

"ಕೊಳಚೆ ಸಂಸ್ಕರಣಾ ಘಟಕ ಸ್ವಚ್ಛಗೊಳಿಸಲು ಕಾರ್ಮಿಕರೊಬ್ಬರು ಟ್ಯಾಂಕ್‌ಗೆ ಇಳಿದಾಗ ಅವರು ಉಸಿರುಗಟ್ಟಿ ಪ್ರಜ್ಞೆ ತಪ್ಪಿದ್ದಾರೆ. ಈ ವೇಳೆ ಇನ್ನಿಬ್ಬರು ಕಾರ್ಮಿಕರು ಆತನನ್ನು ರಕ್ಷಿಸಲು ಟ್ಯಾಂಕ್ ಒಳಗೆ ಇಳಿದಿದ್ದಾರೆ. ಆದರೆ ಅವರು ಸಹ ಮೂರ್ಛೆ ಹೋಗಿದ್ದಾರೆ. ಅವರನ್ನು ಅನುಸರಿಸಿ ಇನ್ನೂ ಇಬ್ಬರು ಟ್ಯಾಂಕ್ ಗೆ ಇಳಿದಿದ್ದು, ಎಲ್ಲಾ ಐವರು ಮೃತಪಟ್ಟಿದ್ದಾರೆ ಎಂದು” ಬಾಗ್ಮಾರ್ ತಿಳಿಸಿದ್ದಾರೆ.

ಈ ಸಂಬಂಧ ಕಾಂಡ್ಲಾ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಖಾದ್ಯ ತೈಲ ಮತ್ತು ಜೈವಿಕ ಡೀಸೆಲ್ ಉತ್ಪಾದನೆಯಲ್ಲಿ ತೊಡಗಿರುವ 'ಇಮಾಮಿ ಅಗ್ರೋಟೆಕ್' ಸಂಸ್ಥೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಕಾಂಡ್ಲಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತ ಕಾರ್ಮಿಕರನ್ನು ಸಿದ್ಧಾರ್ಥ್ ತಿವಾರಿ, ಅಜ್ಮತ್ ಖಾನ್, ಆಶಿಶ್ ಗುಪ್ತಾ, ಆಶಿಶ್ ಕುಮಾರ್ ಮತ್ತು ಸಂಜಯ್ ಠಾಕೂರ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT