ಪ್ರಮಾಣ ವಚನ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಇತರ ನಾಯಕರು Photo: PTI
ದೇಶ

ಜಮ್ಮು-ಕಾಶ್ಮೀರದಲ್ಲಿ ನೂತನ NC ಸರ್ಕಾರ: ಒಮರ್ ಅಬ್ದುಲ್ಲಾ ಸಂಪುಟ ಸೇರಲು ಕಾಂಗ್ರೆಸ್ ನಕಾರ!

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ವೇಳೆಯಲ್ಲಿ ಭರವಸೆ ನೀಡಿರುವಂತೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವಂತೆ ಕಾಂಗ್ರೆಸ್ ಬಲವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದೆ.

ಶ್ರೀನಗರ: ನೂತನವಾಗಿ ರಚನೆಯಾದ ಜಮ್ಮು-ಕಾಶ್ಮೀರ ಸರ್ಕಾರದಲ್ಲಿ ಒಮರ್ ಅಬ್ದುಲ್ಲಾ ನೇತೃತ್ವದ ಸಚಿವ ಸಂಪುಟವನ್ನು ಸೇರದಿರಲು ಕಾಂಗ್ರೆಸ್ ನಿರ್ಧರಿಸಿದೆ. ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನ ಮರು ಸ್ಥಾಪಿಸದಿರುವುದು ಪಕ್ಷದ ಅಸಮಾಧಾನಕ್ಕೆ ಕಾರಣ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ವೇಳೆಯಲ್ಲಿ ಭರವಸೆ ನೀಡಿರುವಂತೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವಂತೆ ಕಾಂಗ್ರೆಸ್ ಬಲವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದೆ.

ಆದರೆ, ನಮ್ಮ ಬೇಡಿಕೆ ಈಡೇರಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವುದರಿಂದ ಈ ಈ ಸಮಯದಲ್ಲಿ ಸಚಿವ ಸಂಪುಟವನ್ನು ಸೇರುತ್ತಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆದಾಗ್ಯೂ, ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟವನ್ನು ಕಾಂಗ್ರೆಸ್ ಮುಂದುವರೆಸಲಿದೆ ಎಂದು ಕರ್ರಾ ಹೇಳಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಒಮರ್ ಅಬ್ದುಲ್ಲಾ ಅವರ ಜೊತೆಗೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನೂತನ ಶಾಸಕರಾದ ಸಕೀನಾ ಮಸೂದ್ (ಇಟೂ), ಜಾವೇದ್ ದಾರ್, ಜಾವೇದ್ ರಾಣಾ, ಸುರೀಂದರ್ ಚೌಧರಿ ಮತ್ತು ಸತೀಶ್ ಶರ್ಮಾ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT