ಸಾಂದರ್ಭಿಕ ಚಿತ್ರ 
ದೇಶ

ವಿಮಾನಗಳಿಗೆ ಬಾಂಬ್ ಬೆದರಿಕೆ: ಛತ್ತೀಸ್‌ಗಢದ ಅಪ್ರಾಪ್ತ ಬಾಲಕ ಪೊಲೀಸ್ ವಶಕ್ಕೆ; ತಂದೆಯ ವಿಚಾರಣೆ

ಶಾಲೆ ಬಿಟ್ಟ ಬಾಲಕ, ತನ್ನ ಸ್ನೇಹಿತನ ಹೆಸರಿನಲ್ಲಿದ್ದ ವಿವಾದಿತ ನಕಲಿ ಎಕ್ಸ್‌ ಖಾತೆ ಮೂಲಕ ಬೆದರಿಕೆ ಹಾಕಿದ್ದಾನೆ.

ರಾಜನಂದಗಾಂವ್: ಸೋಮವಾರದಿಂದ ವಿವಿಧ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸರಣಿ ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಛತ್ತೀಸ್‌ಗಢದ ರಾಜನಂದಗಾಂವ್ ಮೂಲದ ಹದಿನೇಳು ವರ್ಷದ ಬಾಲಕನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಹುಸಿ ಬಾಂಬ್ ಬೆದರಿಕೆಯಿಂದಾಗಿ

ಶಾಲೆ ಬಿಟ್ಟ ಬಾಲಕ, ತನ್ನ ಸ್ನೇಹಿತನ ಹೆಸರಿನಲ್ಲಿದ್ದ ವಿವಾದಿತ ನಕಲಿ ಎಕ್ಸ್‌ ಖಾತೆ ಮೂಲಕ ಬೆದರಿಕೆ ಹಾಕಿದ್ದಾನೆ.

ಮುಂಬೈ ಪೊಲೀಸರು ಬಾಲಕ ಮತ್ತು ಆತನ ತಂದೆಯನ್ನು ಬುಧವಾರ ವಿಚಾರಣೆಗೆ ಕರೆದಿದ್ದರು. ಬಾಲಕನನ್ನು ವಶಕ್ಕೆ ತೆಗೆದುಕೊಂಡು ರಿಮ್ಯಾಂಡ್ ಹೋಮ್‌ಗೆ ಕರೆದೊಯ್ಯಲಾಗಿದೆ. ಆತನ ತಂದೆಯನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ಮೂರು ದಿನಗಳಲ್ಲಿ ಸುಮಾರು 19 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ಇದು ಕೆಲವು ವಿಮಾನಗಳ ವಿಳಂಬಕ್ಕೆ, ಡೈವೆರ್ಟ್ ಗೆ ಮತ್ತು ತುರ್ತು ಭೂಸ್ಪರ್ಶಕ್ಕೆ ಕಾರಣವಾಗಿತ್ತು.

ಬುಧವಾರ ನಾಲ್ಕು ಇಂಡಿಗೋ ವಿಮಾನಗಳು, ಎರಡು ಸ್ಪೈಸ್‌ಜೆಟ್ ವಿಮಾನಗಳು ಮತ್ತು ಆಕಾಶ ಏರ್‌ನ ಒಂದು ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಹುಸಿ ಬಾಂಬ್ ಬೆದರಿಕೆಯಿಂದಾಗಿ ರಿಯಾದ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಮಸ್ಕತ್‌ಗೆ ತಿರುಗಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT