ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ Photo: PTI
ದೇಶ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ

ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರು, ಒಮರ್ ಅಬ್ದುಲ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಸಂಪುಟ ಸಚಿವರಾಗಿ ಸುರೇಂದ್ರ ಚೌಧರಿ, ಸಕೀನಾ, ಜಾವೇದ್ ಅಹ್ಮದ್ ರಾಣಾ, ಜಾವೇದ್ ದಾರ್, ಸತೀಶ್​ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ.

ನೂತನ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಶಾಸಕಾಂಗ ಪಕ್ಷದ ನಾಯಕನಾಗಿ ಗುಲಾಮ್ ಅಹ್ಮದ್ ಮಿರ್ ಅವರನ್ನು ಕಾಂಗ್ರೆಸ್ ಮಂಗಳವಾರ ನೇಮಕ ಮಾಡಿದೆ.

ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜಯ ಗಳಿಸಿತ್ತು. ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಉಮರ್ ಅಬ್ದುಲ್ಲಾ ಅಕ್ಟೋಬರ್ 11ರಂದು ಹಕ್ಕು ಮಂಡಿಸಿದ್ದರು. 42 ಮಂದಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕರು, ನಾಲ್ವರು ಪಕ್ಷೇತರರು, ಕಾಂಗ್ರೆಸ್ ಪಕ್ಷದ ಆರು ಮಂದಿ ಹಾಗೂ ಸಿಪಿಐ(ಎಂ)ನ ಒಬ್ಬ ಶಾಸಕರ ಬೆಂಬಲ ತಮಗಿದೆ ಎಂದು ಅಬ್ದುಲ್ಲಾ ಹೇಳಿದ್ದರು.

ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ಒಟ್ಟು 90 ಸ್ಥಾನಗಳಲ್ಲಿ ಎನ್‌ಸಿ 42 ಸ್ಥಾನಗಳನ್ನು ಗೆದಿದ್ದರೆ, ಕಾಂಗ್ರೆಸ್ 6 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ.

ಮೆಹಬೂಬಾ ಮುಫ್ತಿ ಅವರ ಪಕ್ಷವಾದ ಪಿಡಿಪಿ ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಚುನಾವಣಾ ಪೂರ್ವ ಮೈತ್ರಿಕೂಟದಿಂದ 49 ಶಾಸಕರಿದ್ದು, ಐವರು ಸ್ವತಂತ್ರ ಶಾಸಕರು ಕೂಡ ಒಮರ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ, ಆಮ್​ ಆದ್ಮಿ ಪಕ್ಷವು ಕೂಡ ಬೆಂಬಲ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT