ಕುಟುಂಬಸ್ಥರ ಆಕ್ರಂದನ TNIE
ದೇಶ

ಬಿಹಾರದಲ್ಲಿ ಮತ್ತೆ ಮರಣ ಮೃದಂಗ: ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆ!

ಕಳೆದ ಮೂರು ದಿನಗಳಲ್ಲಿ ಸಿವಾನ್‌ನ ಭಗವಾನ್‌ಪುರ, ಮಧಾರ್ ಮತ್ತು ಕೌಂಡಿಯಾದಲ್ಲಿ 20 ಜನರ ಸಾವನ್ನು ಸಿವಾನ್ ಪೊಲೀಸ್ ವರಿಷ್ಠಾಧಿಕಾರಿ ಅಮಿತೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಪಾಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದ ನಕಲಿ ಮದ್ಯ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಒಂದು ದಿನದ ಮುನ್ನ ನೆರೆಯ ಸರನ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಒಬ್ಬರು ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಅಸ್ವಸ್ಥರಾಗಿದ್ದರು.

ಮಂಗಳವಾರ ತಡರಾತ್ರಿ ಸಿವಾನ್ ಜಿಲ್ಲೆಯ ಭಗವಾನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಧಾರ್ ಗ್ರಾಮದಲ್ಲಿ ಜನರು ನಕಲಿ ಮದ್ಯ ಸೇವಿಸಿದ್ದರು ತೀವ್ರ ಅಸ್ವಸ್ಥಗೊಂಡಿದ್ದರು. ಕಳೆದ ಮೂರು ದಿನಗಳಲ್ಲಿ ಸಿವಾನ್‌ನ ಭಗವಾನ್‌ಪುರ, ಮಧಾರ್ ಮತ್ತು ಕೌಂಡಿಯಾದಲ್ಲಿ 20 ಜನರ ಸಾವನ್ನು ಸಿವಾನ್ ಪೊಲೀಸ್ ವರಿಷ್ಠಾಧಿಕಾರಿ ಅಮಿತೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಸಿವಾನ್‌ನಲ್ಲಿ, ಸರ್ಕಾರಿ ಸದರ್ ಆಸ್ಪತ್ರೆಯಲ್ಲಿ 20 ಮಂದಿಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು. ಸೋಮವಾರ ಮತ್ತು ಮಂಗಳವಾರ 20 ಮಂದಿ ನಕಲಿ ಮದ್ಯ ಸೇವಿಸಿದ್ದಾರೆ ಎಂದು ಸಂತ್ರಸ್ತರ ಸಂಬಂಧಿಕರು ಪೊಲೀಸರಿಗೆ ತಿಳಿಸಿದ್ದಾರೆ. ಅವರು ಅಕ್ರಮ ಮದ್ಯ ಸೇವಿಸಿದ ಕೂಡಲೇ ಹೊಟ್ಟೆನೋವು, ವಾಂತಿ, ವಾಕರಿಕೆ ಮತ್ತು ದೃಷ್ಟಿ ಕಳೆದುಕೊಳ್ಳುವ ಬಗ್ಗೆ ದೂರು ನೀಡಿದ್ದಾರೆ ಎಂದು ಸಂತ್ರಸ್ತರೊಬ್ಬರ ಹತ್ತಿರದ ಸಂಬಂಧಿ ತಿಳಿಸಿದ್ದಾರೆ.

ನೆರೆಯ ಸರನ್ ಜಿಲ್ಲೆಯಲ್ಲಿ, ಮಸಾರಖ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಮದ್ಯ ಸೇವಿಸಿ ಆರು ಜನರು ಸಾವನ್ನಪ್ಪಿದ್ದರು. ಸರನ್ ಜಿಲ್ಲೆಯ ಇಬ್ರಾಹಿಂಪುರ ಗ್ರಾಮವೊಂದರಲ್ಲೇ ನಾಲ್ಕು ಸಾವುಗಳು ವರದಿಯಾಗಿವೆ. ಒಂಬತ್ತು ಅಕ್ರಮ ಮದ್ಯ ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸರನ್ ಎಸ್ಪಿ ಕುಮಾರ್ ಆಶಿಶ್ ತಿಳಿಸಿದ್ದಾರೆ.

ರಾಜ್ಯ ಅಬಕಾರಿ ಆಯೋಗ ಕೃಷ್ಣ ಕುಮಾರ್ ಅವರು ಸಿವಾನ್ ಮತ್ತು ಸರನ್ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಅಬಕಾರಿ ಮತ್ತು ನಿಷೇಧ ಇಲಾಖೆ ಸಚಿವ ರತ್ನೇಶ್ ಸದಾ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿರುವ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಎರಡು ಗಡಿ ಜಿಲ್ಲೆಗಳ ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ 49 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 2022ರಲ್ಲಿ ಸರನ್ ಜಿಲ್ಲೆಯ ಮಸಾರಖ್ ಪ್ರದೇಶದಲ್ಲಿ ನಕಲಿ ಮದ್ಯ 73 ಜನರನ್ನು ಬಲಿ ತೆಗೆದುಕೊಂಡಿತು. ಆದರೆ, ಘಟನೆಯಲ್ಲಿ ಕೇವಲ 48 ಜನರ ಸಾವನ್ನು ಅಧಿಕಾರಿಗಳು ಒಪ್ಪಿಕೊಂಡಿದ್ದರು. ಏಪ್ರಿಲ್ 2016ರಲ್ಲಿ ಮದ್ಯ ಮಾರಾಟ ನಿಷೇಧವನ್ನು ಜಾರಿಗೆ ತಂದಾಗಿನಿಂದ ಬಿಹಾರದಾದ್ಯಂತ 350ಕ್ಕೂ ಹೆಚ್ಚು ಜನರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ.

ಸಿಎಂ ನಿತೀಶ್ ವಿರುದ್ಧ RJD ವಾಗ್ದಾಳಿ

ರಾಜ್ಯದಲ್ಲಿ ಮದ್ಯ ನಿಷೇಧವಿರುವುದರಿಂದ ನಕಲಿ ಮದ್ಯ ಹೇಗೆ ಲಭ್ಯವಾಯಿತು ಎಂದು ಪ್ರಶ್ನಿಸಿರುವ ಆರ್‌ಜೆಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಜನರ ಸಾವಿಗೆ ಎನ್‌ಡಿಎ ಸರ್ಕಾರವನ್ನು ಪಕ್ಷ ಹೊಣೆಗಾರರನ್ನಾಗಿ ಮಾಡಿದ್ದು ಮದ್ಯ ಮಾಫಿಯಾಗಳಿಗೆ ರಾಜ್ಯ ಸರ್ಕಾರದ 'ರಕ್ಷಣೆ' ಇದೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT