ತಮನ್ನಾ ಭಾಟಿಯಾ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ED ವಿಚಾರಣೆಗೆ ನಟಿ ತಮನ್ನಾ ಭಾಟಿಯಾ ಹಾಜರು!

ಬಿಟ್‌ಕಾಯಿನ್‌, ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ಹಲವು ಹೂಡಿಕೆದಾರರನ್ನು ವಂಚಿಸಿದ 'HPZ ಟೋಕನ್' ಮೊಬೈಲ್ ಆ್ಯಪ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರನ್ನು ಇಡಿ ವಿಚಾರಣೆ ನಡೆಸಿದೆ.

ಗುವಾಹಟಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಿಲ್ಕಿ ಬ್ಯೂಟಿ, ನಟಿ ತಮನ್ನಾ ಭಾಟಿಯಾ ಗುರುವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬಿಟ್‌ಕಾಯಿನ್‌, ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ಹಲವು ಹೂಡಿಕೆದಾರರನ್ನು ವಂಚಿಸಿದ 'HPZ ಟೋಕನ್' ಮೊಬೈಲ್ ಆ್ಯಪ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರನ್ನು ಇಡಿ ವಿಚಾರಣೆ ನಡೆಸಿದೆ.

ಇಲ್ಲಿನ ಇಡಿ ವಲಯ ಕಚೇರಿಯಲ್ಲಿ 34 ವರ್ಷದ ನಟಿಯಿಂದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಆ್ಯಪ್ ಕಂಪನಿಯ ಕಾರ್ಯಕ್ರಮವೊಂದರಲ್ಲಿ 'ಸೆಲೆಬ್ರಿಟಿಯಾಗಿ ಕಾಣಿಸಿಕೊಳ್ಳಲು' ಭಾಟಿಯಾ ಹಣ ಪಡೆದಿದ್ದಾರೆ ಎನ್ನಲಾಗಿದೆ.

ಆದರೆ, ಅವರ ವಿರುದ್ಧ ಅಪರಾಧದಲ್ಲಿ ಭಾಗಿಯಾದ ಯಾವುದೇ ಆರೋಪಗಳಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಕೆಲಸದ ಕಾರಣ ವಿಚಾರಣೆಗೆ ಹಾಜರಾಗಿರಲಿಲ್ಲ. ಗುರುವಾರ ವಿಚಾರಣೆಗೆ ಹಾಜರಾಗುವ ಮೂಲಕ ಇಡಿ ಅಧಿಕಾರಿಗಳಿಗೆ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಬಿಟ್‌ಕಾಯಿನ್‌, ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹೂಡಿಕೆದಾರರನ್ನು ವಂಚಿಸಿದ ಆರೋಪದ ಮೇಲೆ ಕೊಹಿಮಾ ಸೈಬರ್ ಅಪರಾಧ ಘಟಕದ ಪೊಲೀಸರು ಮಾರ್ಚ್ ನಲ್ಲಿ ಐಪಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.

ಆರೋಪಿಗಳು ಹೂಡಿಕೆದಾರರಿಗೆ ಮೋಸ ಮಾಡಲು 'HPZ ಟೋಕನ್' ಮೊಬೈಲ್ ಫೋನ್ ಅಪ್ಲಿಕೇಶನ್ ಅನ್ನು ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!