ತಮನ್ನಾ ಭಾಟಿಯಾ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ED ವಿಚಾರಣೆಗೆ ನಟಿ ತಮನ್ನಾ ಭಾಟಿಯಾ ಹಾಜರು!

ಬಿಟ್‌ಕಾಯಿನ್‌, ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ಹಲವು ಹೂಡಿಕೆದಾರರನ್ನು ವಂಚಿಸಿದ 'HPZ ಟೋಕನ್' ಮೊಬೈಲ್ ಆ್ಯಪ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರನ್ನು ಇಡಿ ವಿಚಾರಣೆ ನಡೆಸಿದೆ.

ಗುವಾಹಟಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಿಲ್ಕಿ ಬ್ಯೂಟಿ, ನಟಿ ತಮನ್ನಾ ಭಾಟಿಯಾ ಗುರುವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬಿಟ್‌ಕಾಯಿನ್‌, ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ಹಲವು ಹೂಡಿಕೆದಾರರನ್ನು ವಂಚಿಸಿದ 'HPZ ಟೋಕನ್' ಮೊಬೈಲ್ ಆ್ಯಪ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರನ್ನು ಇಡಿ ವಿಚಾರಣೆ ನಡೆಸಿದೆ.

ಇಲ್ಲಿನ ಇಡಿ ವಲಯ ಕಚೇರಿಯಲ್ಲಿ 34 ವರ್ಷದ ನಟಿಯಿಂದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಆ್ಯಪ್ ಕಂಪನಿಯ ಕಾರ್ಯಕ್ರಮವೊಂದರಲ್ಲಿ 'ಸೆಲೆಬ್ರಿಟಿಯಾಗಿ ಕಾಣಿಸಿಕೊಳ್ಳಲು' ಭಾಟಿಯಾ ಹಣ ಪಡೆದಿದ್ದಾರೆ ಎನ್ನಲಾಗಿದೆ.

ಆದರೆ, ಅವರ ವಿರುದ್ಧ ಅಪರಾಧದಲ್ಲಿ ಭಾಗಿಯಾದ ಯಾವುದೇ ಆರೋಪಗಳಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಕೆಲಸದ ಕಾರಣ ವಿಚಾರಣೆಗೆ ಹಾಜರಾಗಿರಲಿಲ್ಲ. ಗುರುವಾರ ವಿಚಾರಣೆಗೆ ಹಾಜರಾಗುವ ಮೂಲಕ ಇಡಿ ಅಧಿಕಾರಿಗಳಿಗೆ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಬಿಟ್‌ಕಾಯಿನ್‌, ಕ್ರಿಪ್ಟೋಕರೆನ್ಸಿಗಳ ನೆಪದಲ್ಲಿ ಹೂಡಿಕೆದಾರರನ್ನು ವಂಚಿಸಿದ ಆರೋಪದ ಮೇಲೆ ಕೊಹಿಮಾ ಸೈಬರ್ ಅಪರಾಧ ಘಟಕದ ಪೊಲೀಸರು ಮಾರ್ಚ್ ನಲ್ಲಿ ಐಪಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.

ಆರೋಪಿಗಳು ಹೂಡಿಕೆದಾರರಿಗೆ ಮೋಸ ಮಾಡಲು 'HPZ ಟೋಕನ್' ಮೊಬೈಲ್ ಫೋನ್ ಅಪ್ಲಿಕೇಶನ್ ಅನ್ನು ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

T20 World Cup 2026: ಸ್ಕಾಟ್ಲೆಂಡ್ ವಿರುದ್ಧ ನೇಪಾಳಕ್ಕೆ 7 ವಿಕೆಟ್ ಗಳ ಭರ್ಜರಿ ಜಯ!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

SCROLL FOR NEXT