ಸಂಗ್ರಹ ಚಿತ್ರ 
ದೇಶ

ರೈಲ್ವೆ ಟಿಕೆಟ್ ಮುಂಗಡ ಕಾಯ್ದಿರಿಸುವಿಕೆ ಅವಧಿ 120 ರಿಂದ 60 ದಿನಗಳಿಗೆ ಇಳಿಕೆ

ಪ್ರಯಾಣಿಕರು ಇನ್ನು ಮುಂದೆ ಮುಂಗಡ ಕಾಯ್ದಿರಿಸುವಿಕೆಯ ಅವಧಿಯ(ARP) ಅಡಿಯಲ್ಲಿ ಟಿಕೆಟ್‌ಗಳನ್ನು ನಾಲ್ಕು ತಿಂಗಳ ಮುಂಚಿತವಾಗಿ ಬುಕ್ ಮಾಡಲು ಸಾಧ್ಯವಾಗುವುದಿಲ್ಲ.

ನವದೆಹಲಿ: ಹಬ್ಬದ ಸೀಸನ್‌ಗೆ ಮುಂಚಿತವಾಗಿ, ರೈಲ್ವೆ ಸಚಿವಾಲಯವು ಗುರುವಾರ ಸುತ್ತೋಲೆ ಹೊರಡಿಸಿದ್ದು, ನವೆಂಬರ್ 1 ರಿಂದ ಜಾರಿಗೆ ಬರುವಂತೆ, ಟಿಕೆಟ್ ಮುಂಗಡ ಕಾಯ್ದಿರಿಸುವಿಕೆ ಅವಧಿಯನ್ನು ಅಸ್ತಿತ್ವದಲ್ಲಿರುವ 120 ದಿನಗಳಿಂದ 60 ದಿನಗಳಿಗೆ(ಪ್ರಯಾಣದ ದಿನಾಂಕವನ್ನು ಹೊರತುಪಡಿಸಿ) ಇಳಿಸಲಾಗುವುದು ಎಂದು ಹೇಳಿದೆ.

ಪ್ರಯಾಣಿಕರು ಇನ್ನು ಮುಂದೆ ಮುಂಗಡ ಕಾಯ್ದಿರಿಸುವಿಕೆಯ ಅವಧಿಯ(ARP) ಅಡಿಯಲ್ಲಿ ಟಿಕೆಟ್‌ಗಳನ್ನು ಕಾಯ್ದಿರಿಸಲು ನಿರ್ಧರಿಸಿದ ಪ್ರಯಾಣದ ದಿನಾಂಕಕ್ಕಿಂತ ನಾಲ್ಕು ತಿಂಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಲು ಸಾಧ್ಯವಾಗುವುದಿಲ್ಲ.

ಈ ಮುಂಚೆ 120 ದಿನ ಅಂದರೆ 4 ತಿಂಗಳ ಮೊದಲೇ ಟಿಕೆಟ್​​ ಬುಕ್​ ಮಾಡಿಕೊಳ್ಳುವ ಅವಕಾಶವಿತ್ತು. ಅದನ್ನು ಈಗ ಇಲಾಖೆ ಕಡಿತ ಮಾಡಿ ಆದೇಶ ಹೊರಡಿಸಿದೆ.

ಈ ಸಂಬಂಧ ಎಲ್ಲಾ ವಲಯಗಳ ಎಲ್ಲಾ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಿಗೆ ರೈಲ್ವೆ ಸಚಿವಾಲಯವು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ನವೆಂಬರ್ 1 ರಿಂದ ಈ ಆದೇಶ ಜಾರಿಗೊಳಿಸುವಂತೆ ಸೂಚಿಸಲಾಗಿದೆ.

ಆದಾಗ್ಯೂ 120 ದಿನಗಳ ಮುಂಗಡ ಕಾಯ್ದಿರಿಸುವಿಕೆ ಅವಧಿ(ಎಆರ್​ಪಿ)ಯನ್ನು ಇಳಿಕೆ ಮಾಡಿದ್ದರೂ, ಅಕ್ಟೋಬರ್ 31 ರವರೆಗೆ ಮಾಡಿದ ಎಲ್ಲಾ ಬುಕಿಂಗ್‌ಗಳು ಮಾನ್ಯವಾಗಿರುತ್ತವೆ. ನಿಗದಿತ ದಿನಾಂಕದ ನಂತರ ಎಲ್ಲ ಟಿಕೆಟ್​ಗಳನ್ನು ರದ್ದು ಮಾಡಲಾಗುತ್ತದೆ ಎಂದು ರೈಲ್ವೆ ಸಚಿವಾಲಯ ಹೇಳಿದೆ.

“ತಾಜ್ ಎಕ್ಸ್‌ಪ್ರೆಸ್, ಗೋಮತಿ ಎಕ್ಸ್‌ಪ್ರೆಸ್‌ನಂತಹ ಹಗಲಿನಲ್ಲಿ ಸಂಚರಿಸುವ ನಿರ್ದಿಷ್ಟ ಎಕ್ಸ್‌ಪ್ರೆಸ್ ರೈಲುಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಕಾರಣ, ಈ ರೈಲುಗಳಲ್ಲಿ ಮುಂಗಡ ಕಾಯ್ದಿರಿಸುವಿಕೆ ಕಡಿಮೆ ಸಮಯದ ಮಿತಿ ಈಗಾಗಲೇ ಜಾರಿಯಲ್ಲಿದೆ ಎಂದು ಮಂಡಳಿ ತಿಳಿಸಿದೆ.

ಇನ್ನು, ವಿದೇಶಿ ಪ್ರವಾಸಿಗರಾಗಿದ್ದಲ್ಲಿ ಅವರಿಗೆ ಈಗಿರುವ 365 ದಿನಗಳ ಕಾಲಮಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ವಿದೇಶಿಗರು ವರ್ಷದಲ್ಲಿ ಯಾವುದೇ ದಿನಕ್ಕಾದರೂ ರೈಲ್ವೆ ಟಿಕೆಟ್​ ಮುಂಗಡ ಬುಕಿಂಗ್​ ಮಾಡಿಕೊಳ್ಳಬಹುದಾಗಿದೆ ಎಂದು ರೈಲ್ವೆ ಸಚಿವಾಲಯ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT