ನಯಾಬ್ ಸಿಂಗ್ ಸೈನಿ 
ದೇಶ

ಸತತ 2ನೇ ಅವಧಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

ಇಂದು ಪಂಚಕುಲದಲ್ಲಿ ನಡೆದ ಸಮಾರಂಭದಲ್ಲಿ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿರುವ ಸೈನಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಚಂಢೀಗಡ: ಚಂಢೀಗಡ: 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆದ್ದು, ಸತತ ಮೂರನೇ ಅವಧಿಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಅಧಿಕಾರಕ್ಕೆ ಬಂದಿದ್ದು, ಎರಡನೇ ಅವಧಿಗೆ ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಪಂಚಕುಲದಲ್ಲಿ ನಡೆದ ಸಮಾರಂಭದಲ್ಲಿ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸೈನಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಸೈನಿ ಅವರೊಂದಿಗೆ ಅಂಬಾಲಾ ಕ್ಯಾಂಟ್ ಶಾಸಕ ಅನಿಲ್ ವಿಜ್, ಇಸ್ರಾನಾ ಶಾಸಕ ಕ್ರಿಶನ್ ಲಾಲ್ ಪನ್ವಾರ್ ಮತ್ತು ಬಾದಶಹಪುರ ಶಾಸಕ ರಾವ್ ನರಬೀರ್ ಸಿಂಗ್ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಸೈನಿ ಅವರು ಪ್ರಮಾಣವಚನ ಸ್ವೀಕರಿಸುವ ಮುನ್ನ ವಾಲ್ಮೀಕಿ ಭವನಕ್ಕೆ ಭೇಟಿ ನೀಡಿದರು ಮತ್ತು ಪಂಚಕುಲದ ಗುರುದ್ವಾರ ಹಾಗೂ ಮಾನಸಾ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಬಿಜೆಪಿ ನಾಯಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಬಿಜೆಪಿ ಆಡಳಿತವಿರುವ ವಿವಿಧ ರಾಜ್ಯಗಳ ಹದಿಮೂರು ಮುಖ್ಯಮಂತ್ರಿಗಳು ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ