ಸಾಂದರ್ಭಿಕ ಚಿತ್ರ 
ದೇಶ

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: 10 ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ; ಯಾವುದೇ ಪಿತೂರಿ ಇಲ್ಲ- ವಿಮಾನಯಾನ ಸಚಿವ

ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವೊಂದನ್ನು ಈ ಖಾತೆಗಳನ್ನು ಪರಿಶೀಲಿಸಿದ್ದು, ಬುದ್ಧಿಹೀನ ಬೆದರಿಕೆ ಸಂದೇಶ ಮುಂದುವರೆಸಿದ್ದರಿಂದ ಈ ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ.

ನವದೆಹಲಿ: ಈ ವಾರ ಅನೇಕ ಭಾರತೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದ ಅರ್ಧ ಡಜನ್ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸೈಬರ್ ಭದ್ರತಾ ಏಜೆನ್ಸಿಗಳು ಅಮಾನತುಗೊಳಿಸಿವೆ ಅಥವಾ ನಿರ್ಬಂಧಿಸಿವೆ.

ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವೊಂದನ್ನು ಈ ಖಾತೆಗಳನ್ನು ಪರಿಶೀಲಿಸಿದ್ದು, ಬುದ್ಧಿಹೀನ ಬೆದರಿಕೆ ಸಂದೇಶ ಮುಂದುವರೆಸಿದ್ದರಿಂದ ಈ ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ. ಈ ವೇಳೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ವಿಮಾನ ಸ್ಫೋಟಿಸುವ ಬೆದರಿಕೆ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು ಹೇಳಿದ್ದಾರೆ.

ಸುಮಾರು ಏಳು-ಎಂಟು ಸಾಮಾಜಿಕ ಮಾಧ್ಯಮ ಖಾತೆಗಳು, ಅವುಗಳಲ್ಲಿ ಹೆಚ್ಚಿನವು ಎಕ್ಸ್ ಗೆ ಸೇರಿದ್ದು, ಸೋಮವಾರದಿಂದ ಅವುಗಳನ್ನು ಅಮಾನತುಗೊಳಿಸಲಾಗಿದೆ ಅಥವಾ ನಿರ್ಬಂಧಿಸಲಾಗಿದೆ. ದೇಶಿಯ ಹಾಗೂ ಅಂತಾರಾಷ್ಟ್ರೀಯ ಮಾರ್ಗದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ವರ್ಚುಯಲ್ ಮೂಲಕ ಹುಸಿ ಬಾಂಬ್ ಮತ್ತು ಉಗ್ರರ ದಾಳಿ ಬೆದರಿಕೆ ಕಳುಹಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಬಾಂಬ್ ಇಡಲಾಗಿದೆ. ರಕ್ತ ಎಲ್ಲೆಡೆ ಹರಡುತ್ತದೆ. ಸ್ಫೋಟಕ ಸಾಧನಗಳು, ಇದು ತಮಾಷೆಯಲ್ಲ ಮತ್ತು ನೀವೆಲ್ಲರೂ ಸಾಯುತ್ತೀರಿ ಎಂಬಂತಹ ಒಂದೇ ಪದ, ಸಾಲುಗಳನ್ನು ಬಹುತೇಕ ಸಾಮಾಜಿಕ ಮಾಧ್ಯಮಗಳಲ್ಲಿ ಬಂದಿರುವುದನ್ನು ಏಜೆನ್ಸಿಗಳು ಪತ್ತೆ ಹಚ್ಚಿವೆ.

ಇಂತಹ ಪ್ರತಿಯೊಂದು ನಕಲಿ ಬೆದರಿಕೆ ಸಂದೇಶ ಕುರಿತು ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಳ್ಳುವುದರ ಹೊರತಾಗಿ ಯಾವ್ ಆನ್ ಲೈನ್ ನಿಂದ ಇಂತಹ ಫೋಸ್ಟ್ ಮಾಡಲಾಗಿದೆ ಎಂಬುದನ್ನು ಪರಿಶೀಲಿಸಲು ಏಜೆನ್ಸಿಗಳು 'ಸೈಬರ್ ಗಸ್ತು' ಹೆಚ್ಚಿಸಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT