ಗೌತಮ್ ಅದಾನಿ, ಸಿಎಂ ರೇವಂತ್ ರೆಡ್ಡಿ 
ದೇಶ

ತೆಲಂಗಾಣ: ಕೌಶಲ್ಯ ಅಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಗೌತಮ್ ಅದಾನಿ 100 ಕೋಟಿ ರೂ ದೇಣಿಗೆ!

ಹೈದರಾಬಾದ್‌ನಲ್ಲಿ ಶುಕ್ರವಾರ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ನೇತೃತ್ವದ ನಿಯೋಗ ಚೆಕ್ ನ್ನು ಹಸ್ತಾಂತರಿಸಿದೆ.

ಹೈದರಾಬಾದ್: ತೆಲಂಗಾಣದಲ್ಲಿ ಕೌಶಲ್ಯ ಅಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಗೌತಮ್ ಅದಾನಿ ಬರೋಬ್ಬರಿ 100 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಹೌದು. ಯುವಜನರಿಗೆ ಉದ್ಯಮ-ನಿರ್ದಿಷ್ಟ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ನೆರವಾಗುವ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಅದಾನಿ ಗ್ರೂಪ್‌ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿರ್ವಹಿಸುತ್ತಿರುವ ಅದಾನಿ ಫೌಂಡೇಶನ್ ತೆಲಂಗಾಣ ಸರ್ಕಾರಕ್ಕೆ ರೂ. 100 ಕೋಟಿ ದೇಣಿಗೆ ನೀಡಿದೆ.

ಹೈದರಾಬಾದ್‌ನಲ್ಲಿ ಶುಕ್ರವಾರ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ನೇತೃತ್ವದ ನಿಯೋಗ ಚೆಕ್ ನ್ನು ಹಸ್ತಾಂತರಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ತೆಲಂಗಾಣ ಮುಖ್ಯಮಂತ್ರಿಗಳ ಕಾರ್ಯಾಲಯ, ಯುವ ಭಾರತ ಕೌಶಲ್ಯ ವಿಶ್ವವಿದ್ಯಾಲಯಗಳ ಸ್ಥಾಪನೆಗಾಗಿ ಗೌತಮ್ ಅದಾನಿ ಅವರು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ರೂ. 100 ಕೋಟಿ ಚೆಕ್ ಹಸ್ತಾಂತರಿಸುವುದಾಗಿ ಹೇಳಿದೆ.

ಯುವ ಸಬಲೀಕರಮ ಮತ್ತು ಅವರ ಕೌಶಲ್ಯ ಅಭಿವೃದ್ಧಿಗಾಗಿ ತೆಲಂಗಾಣ ಸರ್ಕಾರಕ್ಕೆ ಮತ್ತಷ್ಟು ಬೆಂಬಲ ನೀಡುವುದಾಗಿ ಗೌತಮ್ ಅದಾನಿ ಭರವಸೆ ನೀಡಿರುವುದಾಗಿ ಮುಖ್ಯಮಂತ್ರಿಗಳ ಕಾರ್ಯಾಲಯ ತಿಳಿಸಿದೆ. ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಹೈದರಾಬಾದ್ ನಲ್ಲಿ ಯುವ ಭಾರತ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

ಮಿತ್ರ..., My Friend... ಎನ್ನುತ್ತಲೇ ಭಾರತದ ಬೆನ್ನಿಗೆ ಚೂರಿ!; US ಸೇನೆ ಜೊತೆ ನಂಟು ಹೊಂದಿದ್ದ ವ್ಯಕ್ತಿ ಈಶಾನ್ಯ ರಾಜ್ಯದಲ್ಲಿ; ದೇಶದ ವಿರುದ್ಧ ಸಂಚು!

ರಾಜ್ಯಾದ್ಯಂತ ಮಳೆ ಆರ್ಭಟ: ಬೆಂಗಳೂರು ಹೈರಾಣ, ಇನ್ನೂ 3 ದಿನ ಮಳೆ ಸಾಧ್ಯತೆ!

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

ಹಿಜ್ಬೊಲ್ಲಾ ಉಗ್ರ ಸಂಘಟನೆ ಮೇಲೇಳದಂತೆ ಇಸ್ರೇಲ್ ಭೀಕರ ದಾಳಿ: 80ಕ್ಕೂ ಹೆಚ್ಚು ಸ್ಥಳಗಳು ಧ್ವಂಸ

SCROLL FOR NEXT