ಎಂವಿಎ ನಾಯಕರು 
ದೇಶ

ಮಹಾರಾಷ್ಟ್ರ ಚುನಾವಣೆ: MVA ಸೀಟು ಹಂಚಿಕೆ ಅಂತಿಮ; ಕಾಂಗ್ರೆಸ್ 115, ಉದ್ಧವ್ 85, ಶರದ್ ಪವಾರ್ ಗೆ 75 ಸ್ಥಾನ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಉತ್ತಮ ಹೋರಾಟದ ನಂತರ ಇದೀಗ ಎಂವಿಎ ಮಿತ್ರಪಕ್ಷಗಳು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸಜ್ಜಾಗಿವೆ.

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳ ಪೈಕಿ 260 ಸ್ಥಾನಗಳಿಗೆ ಮಹಾ ವಿಕಾಸ್ ಅಘಾಡಿ ಗುರುವಾರ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದ್ದು, ಉಳಿದ ಕ್ಷೇತ್ರಗಳಲ್ಲಿ ಮಿತ್ರ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಉತ್ತಮ ಹೋರಾಟದ ನಂತರ ಇದೀಗ ಎಂವಿಎ ಮಿತ್ರಪಕ್ಷಗಳು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸಜ್ಜಾಗಿದ್ದು, ಕಾಂಗ್ರೆಸ್ 110 ರಿಂದ 115 ಸ್ಥಾನಗಳಲ್ಲಿ, ಶಿವಸೇನೆ(ಯುಬಿಟಿ) 83 ರಿಂದ 86 ಮತ್ತು ಎನ್‌ಸಿಪಿ(ಎಸ್‌ಪಿ) 72 ರಿಂದ 75 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮೈತ್ರಿಕೂಟದ ನಾಯಕರು ತಿಳಿಸಿದ್ದಾರೆ. ವಿವಾದಿತ 20 ರಿಂದ 25 ಸ್ಥಾನಗಳಲ್ಲೂ ಶೀಘ್ರದಲ್ಲೇ ಒಮ್ಮತಕ್ಕೆ ಬರಲಾಗುವುದು ಎಂದು ಅವರು ಹೇಳಿದ್ದಾರೆ.

"ಎಲ್ಲಾ ಮೈತ್ರಿ ಪಾಲುದಾರರು ಈ ನಿರ್ದಿಷ್ಟ ಸ್ಥಾನಗಳಿಗೆ ಬೇಡಿಕೆ ಇಡುತ್ತಿದ್ದಾರೆ. ಆದ್ದರಿಂದ ಒಪ್ಪಂದಕ್ಕೆ ಬರಲು ಸಮಯ ತೆಗೆದುಕೊಳ್ಳುತ್ತಿದೆ. ಗೆಲ್ಲುವ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರನ್ನೂ ತೃಪ್ತಿಪಡಿಸುವ ಸೂತ್ರವನ್ನು ರೂಪಿಸುತ್ತಿದ್ದೇವೆ' ಎಂದು ಸೀಟು ಹಂಚಿಕೆ ಸಭೆಯಲ್ಲಿ ಪಾಲ್ಗೊಂಡಿದ್ದ ಎಂವಿಎ ಹಿರಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.

ಸಭೆಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್, ವಿರೋಧ ಪಕ್ಷದ ನಾಯಕ ವಿಜಯ್ ವಡೆತ್ತಿವಾರ್, ಎನ್‌ಸಿಪಿ (ಎಸ್‌ಪಿ) ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್, ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಮಾಜಿ ಸಚಿವ ಜಿತೇಂದ್ರ ಅಹ್ವಾದ್ ಮತ್ತು ಶಿವಸೇನೆಯ(ಯುಬಿಟಿ) ಸಂಜಯ್ ರಾವತ್ ಉಪಸ್ಥಿತರಿದ್ದರು.

"ಸಮಾಜವಾದಿ ಪಕ್ಷಕ್ಕೆ ಎರಡರಿಂದ ಮೂರು ಸ್ಥಾನಗಳನ್ನು ನೀಡಲಾಗುವುದು. ಎಡಪಕ್ಷಗಳಿಗೂ ಎರಡರಿಂದ ಮೂರು ಸ್ಥಾನಗಳು ಮತ್ತು ರೈತರು ಹಾಗೂ ಕಾರ್ಮಿಕರ ಪಕ್ಷಕ್ಕೆ ಎರಡರಿಂದ ಮೂರು ಸ್ಥಾನಗಳನ್ನು ವಿಧಾನಸಭಾ ಚುನಾವಣೆಯಲ್ಲಿ ನೀಡಲಾಗುವುದು" ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT