ಸಾಂದರ್ಭಿಕ ಚಿತ್ರ 
ದೇಶ

ಜೈಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ದಾಳಿ, 10 ಮಂದಿಗೆ ಗಾಯ

ಶರದ್ ಪೂರ್ಣಿಮೆಯ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗ್ರಣ ಕಾರ್ಯಕ್ರಮ ನಡೆಯುತ್ತಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು.

ಜೈಪುರ: ಜೈಪುರದ ದೇವಸ್ಥಾನವೊಂದರ ಧಾರ್ಮಿಕ ಕಾರ್ಯಕ್ರಮದ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಶರದ್ ಪೂರ್ಣಿಮೆಯ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗ್ರಣ ಕಾರ್ಯಕ್ರಮ ನಡೆಯುತ್ತಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು.

ಈ ವಿಷಯದ ಬಗ್ಗೆ ವಾಗ್ವಾದದ ನಂತರ, ಆರೋಪಿಗಳು ಇತರರನ್ನು ಕರೆದು ಆರ್ ಎಸ್ಎಸ್ ಕಾರ್ಯಕರ್ತರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದರು. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ನಸೀಬ್ ಚೌಧರಿ ಮತ್ತು ಆತನ ಮಗನನ್ನು ವಶಕ್ಕೆ ಪಡೆಯಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಕೆಲವರು ತಡರಾತ್ರಿ ದೆಹಲಿ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ