ಸಾಂದರ್ಭಿಕ ಚಿತ್ರ 
ದೇಶ

ಜೈಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ದಾಳಿ, 10 ಮಂದಿಗೆ ಗಾಯ

ಶರದ್ ಪೂರ್ಣಿಮೆಯ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗ್ರಣ ಕಾರ್ಯಕ್ರಮ ನಡೆಯುತ್ತಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು.

ಜೈಪುರ: ಜೈಪುರದ ದೇವಸ್ಥಾನವೊಂದರ ಧಾರ್ಮಿಕ ಕಾರ್ಯಕ್ರಮದ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಕಾರ್ಯಕರ್ತರ ಮೇಲೆ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಶರದ್ ಪೂರ್ಣಿಮೆಯ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗ್ರಣ ಕಾರ್ಯಕ್ರಮ ನಡೆಯುತ್ತಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು.

ಈ ವಿಷಯದ ಬಗ್ಗೆ ವಾಗ್ವಾದದ ನಂತರ, ಆರೋಪಿಗಳು ಇತರರನ್ನು ಕರೆದು ಆರ್ ಎಸ್ಎಸ್ ಕಾರ್ಯಕರ್ತರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದರು. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ನಸೀಬ್ ಚೌಧರಿ ಮತ್ತು ಆತನ ಮಗನನ್ನು ವಶಕ್ಕೆ ಪಡೆಯಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಕೆಲವರು ತಡರಾತ್ರಿ ದೆಹಲಿ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT