ಶ್ರೀಕಾಂತ್ ಪಂಗರ್ಕರ್ online desk
ದೇಶ

ಶಿಂಧೆ ನೇತೃತ್ವದ ಶಿವಸೇನೆ ಸೇರಿದ ಗೌರಿ ಲಂಕೇಶ್ ಹತ್ಯೆ ಆರೋಪಿ

2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಆಗಿದ್ದ ಪಂಗರ್ಕರ್ ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಗಿತ್ತು ಮತ್ತು ಈ ವರ್ಷ ಸೆಪ್ಟೆಂಬರ್ 4 ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತು.

ಮುಂಬೈ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗರ್ಕರ್ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೂ ಮುನ್ನ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾಗಾಗಿದ್ದಾರೆ.

2017 ರ ಸೆ.05 ರಂದು ಗೌರಿ ಲಂಕೇಶ್ ಅವರನ್ನು ಅವರ ನಿವಾಸದ ಎದುರು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಹಾರಾಷ್ಟ್ರದ ಏಜೆನ್ಸಿಗಳ ಸಹಾಯದಿಂದ ಕರ್ನಾಟಕದಲ್ಲಿ ಪೊಲೀಸರು ನಡೆಸಿದ ತನಿಖೆಯು ಹಲವರನ್ನು ಬಂಧಿಸಲಾಗಿತ್ತು.

2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಕೌನ್ಸಿಲರ್ ಆಗಿದ್ದ ಪಂಗರ್ಕರ್ ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಗಿತ್ತು ಮತ್ತು ಈ ವರ್ಷ ಸೆಪ್ಟೆಂಬರ್ 4 ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತು. 2011 ರಲ್ಲಿ ಶಿವಸೇನೆಯಿಂದ ಟಿಕೆಟ್ ನಿರಾಕರಿಸಿದ ನಂತರ, ಪಂಗರ್ಕರ್ ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದ್ದರು.

ಅವರು ಶುಕ್ರವಾರ (ಅ.18) ರಂದು ಪಕ್ಷದ ನಾಯಕ ಮತ್ತು ಮಾಜಿ ರಾಜ್ಯ ಸಚಿವ ಅರ್ಜುನ್ ಖೋಟ್ಕರ್ ಅವರ ಸಮ್ಮುಖದಲ್ಲಿ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದರು.

"ಪಂಗಾರ್ಕರ್ ಅವರು ಮಾಜಿ ಶಿವಸೈನಿಕರಾಗಿದ್ದು ಪಕ್ಷಕ್ಕೆ ಮರಳಿದ್ದಾರೆ. ಅವರನ್ನು ಜಲ್ನಾ ವಿಧಾನಸಭಾ ಚುನಾವಣಾ ಪ್ರಚಾರದ ಮುಖ್ಯಸ್ಥರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ" ಎಂದು ಖೋಟ್ಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜಲ್ನಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದಾರೆ, ಆದರೆ ಮಹಾಯುತಿಯಲ್ಲಿ (ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡಿರುವ ಆಡಳಿತ ಮೈತ್ರಿ) ಸೀಟು ಹಂಚಿಕೆ ಚರ್ಚೆಗಳು ಇನ್ನೂ ನಡೆಯುತ್ತಿವೆ ಎಂದು ಖೋಟ್ಕರ್ ತಿಳಿಸಿದ್ದಾರೆ. ಈ ಸ್ಥಾನವನ್ನು ಕಾಂಗ್ರೆಸ್‌ನ ಕೈಲಾಶ್ ಗೊರಂಟ್ಯಾಲ್ ಹೊಂದಿದ್ದಾರೆ.

ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಹಾಲಿ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT