ಸಾಂದರ್ಭಿಕ ಚಿತ್ರ 
ದೇಶ

ಶನಿವಾರ ಒಂದೇ ದಿನ ಬರೋಬ್ಬರಿ 20 ವಿಮಾನಗಳಿಗೆ ಬಾಂಬ್ ಬೆದರಿಕೆ!

ಇಂದು ಬೆಳಗ್ಗೆಯಿಂದ ಇಲ್ಲಿಯವರಿಗೆ ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ವಿಮಾನ ಸೇರಿದಂತೆ 20 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ.

ನವದೆಹಲಿ/ಮುಂಬೈ: ಭಾರತೀಯ ವಿಮಾನಯಾನ ಸಂಸ್ಥೆಗಳ ಸುಮಾರು 20 ವಿಮಾನಗಳಿಗೆ ಶನಿವಾರ ಬಾಂಬ್‌ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆಯಿಂದ ಇಲ್ಲಿಯವರಿಗೆ ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ವಿಮಾನ ಸೇರಿದಂತೆ 20 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಇಂಡಿಗೋದ ದೆಹಲಿ ಮತ್ತು ಮುಂಬೈನಿಂದ ಇಸ್ತಾನ್‌ಬುಲ್‌ಗೆ ಹಾಗೂ ಜೋಧ್‌ಪುರದಿಂದ ದೆಹಲಿಗೆ ಮತ್ತು ಉದಯಪುರದಿಂದ ಮುಂಬೈ ವಿಸ್ತಾರಾ ವಿಮಾನಗಳಿಗೂ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.

ಇಂಡಿಗೋ, ಎರಡು ಪ್ರತ್ಯೇಕ ಹೇಳಿಕೆಗಳಲ್ಲಿ, ಮುಂಬೈನಿಂದ ಇಸ್ತಾನ್‌ಬುಲ್‌ಗೆ 6E 17 ಮತ್ತು ದೆಹಲಿಯಿಂದ ಇಸ್ತಾನ್‌ಬುಲ್‌ಗೆ 6E 11 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ಹೇಳಿದೆ.

ವಿಮಾನಯಾನ ಸಂಸ್ಥೆಯು ಸಂಬಂಧಿತ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಇಂಡಿಗೋ ತಿಳಿಸಿದೆ.

"ವಿಮಾನ 6E 184, ಜೋಧ್‌ಪುರದಿಂದ ದೆಹಲಿಗೆ ಕಾರ್ಯನಿರ್ವಹಿಸುತ್ತಿದ್ದು, ಭದ್ರತೆಗೆ ಸಂಬಂಧಿಸಿದ ಎಚ್ಚರಿಕೆಯನ್ನು ಸ್ವೀಕರಿಸಿದೆ ಎಂದು ಹೇಳಿದೆ.

ಲ್ಯಾಂಡಿಂಗ್‌ಗೆ ಸ್ವಲ್ಪ ಮೊದಲು, ಉದಯಪುರದಿಂದ ಮುಂಬೈಗೆ ತೆರಳುತ್ತಿದ್ದ ಯುಕೆ 624 ವಿಮಾನವು ಭದ್ರತಾ ಆತಂಕ ಹೊಂದಿತ್ತು ಮತ್ತು ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, ವಿಮಾನವನ್ನು ಕಡ್ಡಾಯ ತಪಾಸಣೆಗೆ ಒಳಪಡಿಸಲಾಯಿತು ಎಂದು ವಿಸ್ತಾರಾ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ಭಾರತೀಯ ವಿಮಾನಯಾನ ಸಂಸ್ಥೆಗಳ 40ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ತಪಾಸಣೆಯ ನಂತರ ಹುಸಿ ಬಾಂಬ್ ಎಂದು ಸಾಬೀತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT