ನಯಾಬ್ ಸಿಂಗ್ ಸೈನಿ  
ದೇಶ

ಹರಿಯಾಣದಲ್ಲಿ ಉಚಿತ ಡಯಾಲಿಸಿಸ್ ಸೇವೆ: ಸೈನಿ ಘೋಷಣೆ

ಈ ಮೂಲಕ ಆಡಳಿತಾರೂಢ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಮೊದಲ ಭರವಸೆಯನ್ನು ಈಡೇರಿಸಿದೆ.

ಚಂಡೀಗಢ: ಎರಡನೇ ಬಾರಿ ಹರಿಯಾಣ ಮುಖ್ಯಮಂತ್ರಿಯಾಗಿರುವ ನಯಾಬ್ ಸಿಂಗ್ ಸೈನಿ ಅವರು ಶುಕ್ರವಾರ ನಡೆದ ತಮ್ಮ ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದ ಮೂತ್ರಪಿಂಡ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ಒದಗಿಸಲಾಗುವುದು ಎಂದು ಘೋಷಿಸಿದ್ದಾರೆ.

ಈ ಮೂಲಕ ಆಡಳಿತಾರೂಢ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಮೊದಲ ಭರವಸೆಯನ್ನು ಈಡೇರಿಸಿದೆ.

ತಮ್ಮ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸೈನಿ, “ನಾನು ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಫೈಲ್ ಮೂತ್ರಪಿಂಡ ರೋಗಿಗಳಿಗೆ ಸಂಬಂಧಿಸಿದೆ. ಚುನಾವಣೆ ವೇಳೆ ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಡಯಾಲಿಸಿಸ್‌ಗೆ ತಿಂಗಳಿಗೆ 20,000 ರಿಂದ 25,000 ವೆಚ್ಚವಾಗುತ್ತದೆ. ಈಗ, ಹರಿಯಾಣ ಸರ್ಕಾರವೇ ಆ ವೆಚ್ಚವನ್ನು ಭರಿಸಲಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿಗಳೊಳಗೆ ಒಳ ಮೀಸಲಾತಿ ನೀಡುವುದಕ್ಕೆ ರಾಜ್ಯಗಳು ಸಾಂವಿಧಾನಿಕವಾಗಿ ಅಧಿಕಾರ ಹೊಂದಿವೆ ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಜಾರಿಗೆ ತರಲು ತಮ್ಮ ಸಂಪುಟ ಸಭೆ ನಿರ್ಧರಿಸಿದೆ ಎಂದು ಸೈನಿ ಹೇಳಿದರು.

"ಮೊದಲ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಇಂದಿನಿಂದಲೇ ಜಾರಿಗೆ ತರಲು ನಮ್ಮ ಕ್ಯಾಬಿನೆಟ್ ನಿರ್ಧರಿಸಿದೆ" ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT