ಸಾಂದರ್ಭಿಕ ಚಿತ್ರ  
ದೇಶ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 99 ಕ್ಷೇತ್ರಗಳಿಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಟಿಕೆಟ್ ಪಡೆದ ಪ್ರಮುಖರಿವರು

ಪ್ರಸ್ತುತ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ದೇವೇಂದ್ರ ಫಡ್ನವೀಸ್ ಅವರು ನಾಗ್ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಹುತೇಕ ಹಾಲಿ ಶಾಸಕರು ತಮ್ಮ ಕ್ಷೇತ್ರಗಳನ್ನು ಉಳಿಸಿಕೊಂಡಿದ್ದು, ಕೆಲವರನ್ನು ಮಾತ್ರ ಕೈಬಿಡಲಾಗಿದೆ.

ನವದೆಹಲಿ: ಜಾರ್ಖಂಡ್‌ನ 66 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ, ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಪಕ್ಷವು 99 ಕ್ಷೇತ್ರಗಳಿಗೆ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.

ನವೆಂಬರ್ 20 ರಂದು 288 ಸದಸ್ಯರ ಶಾಸಕಾಂಗ ಸಭೆಗೆ ಚುನಾವಣೆಯನ್ನು ನಿಗದಿಪಡಿಸಲಾಗಿದೆ. ಪ್ರಸ್ತುತ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ದೇವೇಂದ್ರ ಫಡ್ನವೀಸ್ ಅವರು ನಾಗ್ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಹುತೇಕ ಹಾಲಿ ಶಾಸಕರು ತಮ್ಮ ಕ್ಷೇತ್ರಗಳನ್ನು ಉಳಿಸಿಕೊಂಡಿದ್ದು, ಕೆಲವರನ್ನು ಮಾತ್ರ ಕೈಬಿಡಲಾಗಿದೆ.

ಇತರ ಪ್ರಾದೇಶಿಕ ಪಕ್ಷಗಳನ್ನು ಒಳಗೊಂಡಿರುವ ಮಹಾಯುತಿ ಮೈತ್ರಿಕೂಟದ ಸೀಟು ಹಂಚಿಕೆ ಒಪ್ಪಂದಕ್ಕೆ ಬದ್ಧವಾಗಿರುವ ಬಿಜೆಪಿ ಶೀಘ್ರದಲ್ಲೇ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಪ್ರತಿಪಕ್ಷದ ಮಹಾ ವಿಕಾಸ್ ಅಘಾಡಿ (MVA) ವಿರುದ್ಧ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ಹೋರಡುತ್ತಿದ್ದು, ಈ ಚುನಾವಣೆಯು ಮಹತ್ವ ಹೆಚ್ಚಿದೆ. ಆಡಳಿತ ವಿರೋಧಿ ಭಾವನೆಯ ಮಹಾ ವಿಕಾಸ್ ಅಘಾಡಿಯ ಆರೋಪವಿದ್ದರೂ, ಬಿಜೆಪಿ ನೇತೃತ್ವದ ಆಡಳಿತ ಸಮ್ಮಿಶ್ರ ಸರ್ಕಾರವು ಈ ಬಾರಿಯೂ ಅಧಿಕಾರವನ್ನು ಉಳಿಸಿಕೊಳ್ಳುವತ್ತ ಗಮನಹರಿಸಿದೆ.

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 99 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 71 ಹಾಲಿ ಶಾಸಕರಿಗೆ ಬಿಜೆಪಿ ಮಣೆಹಾಕಿದೆ. ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬಾವಂಕುಲೆ, ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್, ಸಚಿವರಾದ ಗಿರೀಶ್ ಮಹಾಜನ್, ಸುಧೀರ್ ಮುಂಗಂಟಿವಾರ್ ಮತ್ತು ಚಂದ್ರಕಾಂತ್ ಪಾಟೀಲ್ ಅವರು ಇಂದು ಬಿಡುಗಡೆಯಾದ ಪಟ್ಟಿಯಲ್ಲಿರುವ ಪ್ರಮುಖರು.

ಪಟ್ಟಿಯಲ್ಲಿ 13 ಮಹಿಳಾ ಅಭ್ಯರ್ಥಿಗಳು ಇದ್ದಾರೆ. ಕೇಸರಿ ಪಕ್ಷವು 71 ಶಾಸಕರನ್ನು ಉಳಿಸಿಕೊಂಡು ಮೂವರನ್ನು ಕೈಬಿಟ್ಟಿದೆ. ಫಡ್ನವೀಸ್ ಅವರು ತವರು ಕ್ಷೇತ್ರ ನಾಗ್ಪುರ ಸೌತ್ ವೆಸ್ಟ್, ದಕ್ಷಿಣ ಮುಂಬೈನ ಕೊಲಾಬಾದಿಂದ ನಾರ್ವೇಕರ್ ಮತ್ತು ಕ್ರಮವಾಗಿ ಬಲ್ಲಾರ್ಪುರ್, ಜಮ್ನೇರ್ ಮತ್ತು ಕೊತ್ರುಡ್ ಕ್ಷೇತ್ರಗಳಿಂದ ಸಚಿವರಾದ ಸುಧೀರ್ ಮುಂಗಂಟಿವಾರ್, ಗಿರೀಶ್ ಮಹಾಜನ್ ಮತ್ತು ಚಂದ್ರಕಾಂತ್ ಪಾಟೀಲ್ ಅವರು ಮರುಆಯ್ಕೆ ಬಯಸಿ ಸ್ಪರ್ಧಿಸುತ್ತಿದ್ದಾರೆ.

ಮುಂಬೈನಲ್ಲಿ ಬಿಜೆಪಿಯ 16 ಶಾಸಕರ ಪೈಕಿ ಪಕ್ಷವು ಮೊದಲ ಪಟ್ಟಿಯಲ್ಲಿ 14 ಮಂದಿಗೆ ಮತ್ತೆ ಟಿಕೆಟ್ ನೀಡಿದೆ. ಈ ಪಟ್ಟಿಯಲ್ಲಿ ಮುಂಬೈ ಬಿಜೆಪಿ ಅಧ್ಯಕ್ಷ ಆಶಿಶ್ ಶೆಲಾರ್ ಅವರು ವಂಡ್ರೆ ಪಶ್ಚಿಮ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಮತ್ತು ಲೋಕಸಭಾ ಸದಸ್ಯ ನಾರಾಯಣ ರಾಣೆ ಅವರ ಪುತ್ರ ನಿತೇಶ್ ರಾಣೆ ಅವರು ಕರಾವಳಿ ಸಿಂಧುದುರ್ಗದ ಕಂಕಾವ್ಲಿ ಕ್ಷೇತ್ರದಿಂದ ಮರು ಸ್ಪರ್ಧೆ ಮಾಡುತ್ತಿದ್ದಾರೆ.

ಹಿಂದಿನ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ಬವಾಂಕುಲೆ ಅವರು ಮೂರು ಅವಧಿಗೆ ಪ್ರತಿನಿಧಿಸಿದ್ದ ಕಮ್ತಿ ಕ್ಷೇತ್ರದಿಂದ 2019 ರ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದರು. ಅವರನ್ನು ಕಮ್ತಿಯಿಂದ ನಿಲ್ಲಿಸಲಾಗಿದೆ.

ಪುಣೆ ಜಿಲ್ಲೆಯ ಚಿಂಚ್‌ವಾಡ್, ಥಾಣೆ ಜಿಲ್ಲೆಯ ಕಲ್ಯಾಣ್ ಪೂರ್ವ ಮತ್ತು ಅಹಲ್ಯಾನಗರ ಜಿಲ್ಲೆಯ ಶ್ರೀಗೊಂಡದಿಂದ ಹಾಲಿ ಶಾಸಕರ ಬದಲಿಗೆ ಬೇರೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT