ಭಾರತ-ಪಾಕಿಸ್ತಾನ ಆನ್ಲೈನ್ ವಿವಾಹ 
ದೇಶ

ಮತ್ತೊಂದು ಭಾರತ-ಪಾಕಿಸ್ತಾನ ಮದುವೆ; ಆನ್ಲೈನ್ ನಲ್ಲೇ Pak ಯುವತಿಯ ಮದುವೆಯಾದ ಬಿಜೆಪಿ ನಾಯಕನ ಪುತ್ರ! Video Viral

ವಧುವಿನ ಕುಟುಂಬದವರು ಲಾಹೋರ್‌ನಿಂದ ಸಮಾರಂಭದಲ್ಲಿ ಭಾಗವಹಿಸಿದ್ದರು. ಶಿಯಾ ಧಾರ್ಮಿಕ ಮುಖಂಡ ಮೌಲಾನಾ ಮಹ್ಫೂಜುಲ್ ಹಸನ್ ಖಾನ್ ಅವರು ವಧು, ವರನ ಒಪ್ಪಿಗೆ ಪಡೆದು ನಿಕಾ ಮಾಡಿಸಿದರು.

ಪಾಟ್ನಾ: ಇತ್ತೀಚಿನ ದಿನಗಳಲ್ಲಿ cross-border Love Story ಮತ್ತು ಮದುವೆಗಳು ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದ್ದು, ಇದೀಗ ಈ ಪಟ್ಟಿಗೆ ಮತ್ತೊಂದು ವಿವಾಹ ಸೇರ್ಪಡೆಯಾಗಿದೆ.

ಹೌದು.. ಉತ್ತರ ಪ್ರದೇಶದ ಬಿಜೆಪಿ ಕಾರ್ಪೊರೇಟರ್ ಪುತ್ರ ಆನ್​ಲೈನ್​ನಲ್ಲೇ ಪಾಕಿಸ್ತಾನದ ಯುವತಿಯನ್ನು ಮದುವೆಯಾಗಿರುವ ವಿಚಾರ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಉತ್ತರ ಪ್ರದೇಶದ ಜೌನ್​ಪುರ ಜಿಲ್ಲೆಯಲ್ಲಿ ವಿವಾಹ ನಡೆದಿದ್ದು, ಬಿಜೆಪಿ ಕಾರ್ಪೊರೇಟರ್ ತಹಸೀನ್ ಶಾಹಿದ್ ಅವರ ಹಿರಿಯ ಮಗ ಮೊಹಮ್ಮದ್ ಅಬ್ಬಾಸ್ ಹೈದರ್ ಮತ್ತು ಲಾಹೋರ್ ನಿವಾಸಿ ಆಂಡ್ಲೀಪ್ ಜಹ್ರಾ ಅವರ ವಿವಾಹ ಆನ್ಲೈನ್ ನಲ್ಲಿ ನೆರವೇರಿದೆ.

ಮೂಲಗಳ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಎರಡು ನೆರೆಯ ರಾಷ್ಟ್ರಗಳ ನಡುವೆ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯಿಂದಾಗಿ ವೀಸಾಗೆ ಅರ್ಜಿ ಸಲ್ಲಿಸಿದರೂ ಪಡೆಯಲು ಸಾಧ್ಯವಾಗಿಲ್ಲ. ಏತನ್ಮಧ್ಯೆ ವಧುವಿನ ತಾಯಿ ರಾಣಾ ಯಾಸ್ಮಿನ್ ಜೈದಿ ಅವರು ಅನಾರೋಗ್ಯಕ್ಕೆ ಒಳಗಾಗಿ ಐಸಿಯುಗೆ ದಾಖಲಿಸಲಾಗಿತ್ತು, ಪರಿಸ್ಥಿತಿ ತೀರಾ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಮದುವೆ ಸಮಾರಂಭವನ್ನು ಆನ್‌ಲೈನ್‌ನಲ್ಲಿ ನಡೆಸಲು ಶಾಹಿದ್ ನಿರ್ಧರಿಸಿದ್ದರು.

ವಧುವಿನ ಕುಟುಂಬದವರು ಲಾಹೋರ್‌ನಿಂದ ಸಮಾರಂಭದಲ್ಲಿ ಭಾಗವಹಿಸಿದ್ದರು. ಶಿಯಾ ಧಾರ್ಮಿಕ ಮುಖಂಡ ಮೌಲಾನಾ ಮಹ್ಫೂಜುಲ್ ಹಸನ್ ಖಾನ್ ಅವರು ವಧು, ವರನ ಒಪ್ಪಿಗೆ ಪಡೆದು ನಿಕಾ ಮಾಡಿಸಿದರು. ಹೈದರ್ ತನ್ನ ಹೆಂಡತಿಗೆ ಯಾವುದೇ ತೊಂದರೆಯಿಲ್ಲದೆ ಭಾರತೀಯ ವೀಸಾ ಸಿಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ಬಿಜೆಪಿ ಎಂಎಲ್‌ಸಿ ಬ್ರಿಜೇಶ್ ಸಿಂಗ್ ಪ್ರಿಶು ಮತ್ತು ಇತರ ಅತಿಥಿಗಳು ವಿವಾಹ ಸಮಾರಂಭದಲ್ಲಿ ಭಾಗವಹಿಸಿ ವಧು, ವರನ ಕುಟುಂಬವನ್ನು ಅಭಿನಂದಿಸಿದರು.

ಇನ್ನು ವರ ಹೈದರ್ ತನ್ನ ಪತ್ನಿ ಶೀಘ್ರದಲ್ಲೇ ಭಾರತೀಯ ವೀಸಾವನ್ನು ಯಾವುದೇ ತೊಂದರೆಗಳಿಲ್ಲದೆ ಸ್ವೀಕರಿಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT