ಸೋನಮ್ ವಾಂಗ್‌ಚುಕ್  
ದೇಶ

ಡಿಸೆಂಬರ್‌ನಲ್ಲಿ ಮಾತುಕತೆಗೆ ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ: ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ!

ಲಡಾಖ್ ನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಲೇಹ್ ನಿಂದ ದೆಹಲಿಗೆ ಪಾದಯಾತ್ರೆ ನಡೆಸಿದ್ದ ಸೋನಮ್ ವಾಂಗ್ಚುಕ್, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ನವದೆಹಲಿ: ಲಡಾಖ್‌ನ ಬೇಡಿಕೆಗಳ ಕುರಿತು ಡಿಸೆಂಬರ್‌ನಲ್ಲಿ ಮಾತುಕತೆ ಪುನರಾರಂಭಿಸಲಾಗುವುದು ಎಂದು ಗೃಹ ಸಚಿವಾಲಯ ಭರವಸೆ ನೀಡಿದ ನಂತರ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮತ್ತಿತರರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಅಂತ್ಯಗೊಳಿಸಿದರು.

ಜಮ್ಮು- ಕಾಶ್ಮೀರ ಮತ್ತು ಲಡಾಖ್‌ನ ಜಂಟಿ ಕಾರ್ಯದರ್ಶಿ ಪ್ರಶಾಂತ್ ಲೋಖಂಡೆ ಅವರು ಅಕ್ಟೋಬರ್ 6 ರಿಂದ ದೆಹಲಿಯ ಲಡಾಖ್ ಭವನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಕುಳಿತಿದ್ದ ಕಾರ್ಯಕರ್ತರನ್ನು ಭೇಟಿಯಾಗಿ ಗೃಹ ಸಚಿವಾಲಯದ ಪತ್ರವನ್ನು ನೀಡಿದರು.

ಲಡಾಖ್‌ನ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುತ್ತಿರುವ ಸಚಿವಾಲಯದ ಉನ್ನತಾಧಿಕಾರ ಸಮಿತಿಯು ಮುಂದಿನ ಸಭೆಯನ್ನು ಡಿಸೆಂಬರ್ 3 ರಂದು ನಡೆಸಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಹೀಗಾಗಿ ವಾಂಗ್ಚುಕ್ ಮತ್ತು ಅವರ ಬೆಂಬಲಿಗರು ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲು ನಿರ್ಧರಿಸಿದರು.

ಲಡಾಖ್ ನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಲೇಹ್ ನಿಂದ ದೆಹಲಿಗೆ ಪಾದಯಾತ್ರೆ ನಡೆಸಿದ್ದ ಸೋನಮ್ ವಾಂಗ್ಚುಕ್, ಲಡಾಖ್ ಭವನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT