ರಾಮ ಮೋಹನ್ ನಾಯ್ಡು 
ದೇಶ

ಹುಸಿ ಬಾಂಬ್ ಬೆದರಿಕೆ: ದುಷ್ಕರ್ಮಿಗಳು ವಿಮಾನದಲ್ಲಿ ಪ್ರಯಾಣಿಸದಂತೆ ನಿರ್ಬಂಧಕ್ಕೆ ಸರ್ಕಾರ ಮುಂದು!

ನಾಗರಿಕ ವಿಮಾನಯಾನ ಸುರಕ್ಷತೆ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ 1982 ಮತ್ತು ವಾಯುಯಾನ ಭದ್ರತಾ ನಿಯಮಗಳಿಗೆ ತಿದ್ದುಪಡಿ ತರಲು ಯೋಜಿಸಲಾಗಿದೆ.

ನವದೆಹಲಿ: ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕುವ ದುಷ್ಕರ್ಮಿಗಳು ವಿಮಾನದಲ್ಲಿ ಪ್ರಯಾಣಿಸದಂತೆ ನಿಯಮಗಳಿಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ಡು ಸೋಮವಾರ ಹೇಳಿದ್ದಾರೆ. ಅಕ್ಟೋಬರ್ 14 ರಿಂದ ಏಳು ದಿನಗಳಲ್ಲಿ ಸುಮಾರು 100 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ಎಲ್ಲಾ ಬೆದರಿಕೆಗಳು ಹುಸಿ ಎಂಬುದು ನಂತರ ದೃಢಪಟ್ಟಿವೆ.

ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯ್ಡು, ನಾಗರಿಕ ವಿಮಾನಯಾನ ಸುರಕ್ಷತೆ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ 1982 ಮತ್ತು ವಾಯುಯಾನ ಭದ್ರತಾ ನಿಯಮಗಳಿಗೆ ತಿದ್ದುಪಡಿ ತರಲು ಯೋಜಿಸಲಾಗಿದೆ. ವಿಮಾನಗಳಿಗೆ ಬಾಂಬ್ ಬೆದರಿಕೆಯ ಪರಿಸ್ಥಿತಿಯ ಕುರಿತು ಗೃಹ ವ್ಯವಹಾರಗಳ ಸಚಿವಾಲಯದೊಂದಿಗೆ ನಾಗರಿಕ ವಿಮಾನಯಾ ಸುರಕ್ಷತೆ ಬ್ಯೂರೋ ನಿರಂತರವಾಗಿ ಸಂಪರ್ಕ ಹೊಂದಿದೆ ಎಂದು ತಿಳಿಸಿದರು.

ಬೆದರಿಕೆಗಳು ಹುಸಿಯಾಗಿದ್ದರೂ, ವಿಮಾನಯಾನ ಇಲಾಖೆ ಮತ್ತು ವಿಮಾನಯಾನ ಸಂಸ್ಥೆಗಳು ಈ ವಿಷಯವನ್ನು ಲಘುವಾಗಿ ಪರಿಗಣಿಸಿಲ್ಲ. ಕಟ್ಟುನಿಟ್ಟಾದ ಶಿಷ್ಟಾಚಾರವನ್ನು ಅನುಸರಿಸುತ್ತಿವೆ. ಇಂತಹ ಬೆದರಿಕೆಗಳು ಬಂದಾಗ ಇದು ಅತ್ಯಂತ ಸೂಕ್ಷ್ಮ ಪರಿಸ್ಥಿತಿಯಾಗಿದ್ದು, ಅಂತಾರಾಷ್ಟ್ರೀಯ ಶಿಷ್ಟಾಚಾರವನ್ನು ಅನುಸರಿಸಲಾಗುವುದು ಎಂದರು.

ಕಳೆದ ವಾರ 8 ವಿಮಾನಗಳ ಪ್ರಯಾಣವನ್ನು ಬೇರೆಡೆಗೆ ತಿರುಗಿಸಲಾಗಿತ್ತು. ಪ್ರತಿಯೊಂದು ಬೆದರಿಕೆಯನ್ನು ಪ್ರತ್ಯೇಕವಾಗಿ ನಿರ್ಣಯಿಸಲಾಗುತ್ತದೆ. ನಮ್ಮ ಪ್ರತಿಕ್ರಿಯೆಯು ಸಮರ್ಥ ಮತ್ತು ಕ್ರಿಯಾತ್ಮಕವಾಗಿದೆ. ಸುರಕ್ಷತೆ ಮತ್ತು ಭದ್ರತೆ ವಿಚಾರದಲ್ಲಿ ನಾವು ರಾಜೀ ಮಾಡಿಕೊಳ್ಳುವುದಿಲ್ಲ. ಅವುಗಳಲ್ಲಿ ಬಹುತೇಕ ಹುಸಿ ಬೆದರಿಕೆಯಾಗಿದ್ದರೂ ಅವುಗಳನ್ನು ಲಘುವಾಗಿ ತೆಗೆದುಕೊಂಡಿಲ್ಲ. ಪ್ರಯಾಣಿಕರ ಜೀವ, ಭದ್ರತೆ ಪರಿಸ್ಥಿತಿ ಮತ್ತು ಶಿಷ್ಟಾಚಾರ ಪ್ರಮುಖವಾಗಿದೆ. ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.

ಬೆದರಿಕೆ ಹಿಂದೆ ಸಂಚು ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ತನಿಖೆ ನಡೆಯುತ್ತಿದೆ. ನಿರ್ದಿಷ್ಟವಾದ ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ. ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT