ರಾಮ ಮೋಹನ್ ನಾಯ್ಡು 
ದೇಶ

ಹುಸಿ ಬಾಂಬ್ ಬೆದರಿಕೆ: ದುಷ್ಕರ್ಮಿಗಳು ವಿಮಾನದಲ್ಲಿ ಪ್ರಯಾಣಿಸದಂತೆ ನಿರ್ಬಂಧಕ್ಕೆ ಸರ್ಕಾರ ಮುಂದು!

ನಾಗರಿಕ ವಿಮಾನಯಾನ ಸುರಕ್ಷತೆ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ 1982 ಮತ್ತು ವಾಯುಯಾನ ಭದ್ರತಾ ನಿಯಮಗಳಿಗೆ ತಿದ್ದುಪಡಿ ತರಲು ಯೋಜಿಸಲಾಗಿದೆ.

ನವದೆಹಲಿ: ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕುವ ದುಷ್ಕರ್ಮಿಗಳು ವಿಮಾನದಲ್ಲಿ ಪ್ರಯಾಣಿಸದಂತೆ ನಿಯಮಗಳಿಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ಡು ಸೋಮವಾರ ಹೇಳಿದ್ದಾರೆ. ಅಕ್ಟೋಬರ್ 14 ರಿಂದ ಏಳು ದಿನಗಳಲ್ಲಿ ಸುಮಾರು 100 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ಎಲ್ಲಾ ಬೆದರಿಕೆಗಳು ಹುಸಿ ಎಂಬುದು ನಂತರ ದೃಢಪಟ್ಟಿವೆ.

ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯ್ಡು, ನಾಗರಿಕ ವಿಮಾನಯಾನ ಸುರಕ್ಷತೆ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ 1982 ಮತ್ತು ವಾಯುಯಾನ ಭದ್ರತಾ ನಿಯಮಗಳಿಗೆ ತಿದ್ದುಪಡಿ ತರಲು ಯೋಜಿಸಲಾಗಿದೆ. ವಿಮಾನಗಳಿಗೆ ಬಾಂಬ್ ಬೆದರಿಕೆಯ ಪರಿಸ್ಥಿತಿಯ ಕುರಿತು ಗೃಹ ವ್ಯವಹಾರಗಳ ಸಚಿವಾಲಯದೊಂದಿಗೆ ನಾಗರಿಕ ವಿಮಾನಯಾ ಸುರಕ್ಷತೆ ಬ್ಯೂರೋ ನಿರಂತರವಾಗಿ ಸಂಪರ್ಕ ಹೊಂದಿದೆ ಎಂದು ತಿಳಿಸಿದರು.

ಬೆದರಿಕೆಗಳು ಹುಸಿಯಾಗಿದ್ದರೂ, ವಿಮಾನಯಾನ ಇಲಾಖೆ ಮತ್ತು ವಿಮಾನಯಾನ ಸಂಸ್ಥೆಗಳು ಈ ವಿಷಯವನ್ನು ಲಘುವಾಗಿ ಪರಿಗಣಿಸಿಲ್ಲ. ಕಟ್ಟುನಿಟ್ಟಾದ ಶಿಷ್ಟಾಚಾರವನ್ನು ಅನುಸರಿಸುತ್ತಿವೆ. ಇಂತಹ ಬೆದರಿಕೆಗಳು ಬಂದಾಗ ಇದು ಅತ್ಯಂತ ಸೂಕ್ಷ್ಮ ಪರಿಸ್ಥಿತಿಯಾಗಿದ್ದು, ಅಂತಾರಾಷ್ಟ್ರೀಯ ಶಿಷ್ಟಾಚಾರವನ್ನು ಅನುಸರಿಸಲಾಗುವುದು ಎಂದರು.

ಕಳೆದ ವಾರ 8 ವಿಮಾನಗಳ ಪ್ರಯಾಣವನ್ನು ಬೇರೆಡೆಗೆ ತಿರುಗಿಸಲಾಗಿತ್ತು. ಪ್ರತಿಯೊಂದು ಬೆದರಿಕೆಯನ್ನು ಪ್ರತ್ಯೇಕವಾಗಿ ನಿರ್ಣಯಿಸಲಾಗುತ್ತದೆ. ನಮ್ಮ ಪ್ರತಿಕ್ರಿಯೆಯು ಸಮರ್ಥ ಮತ್ತು ಕ್ರಿಯಾತ್ಮಕವಾಗಿದೆ. ಸುರಕ್ಷತೆ ಮತ್ತು ಭದ್ರತೆ ವಿಚಾರದಲ್ಲಿ ನಾವು ರಾಜೀ ಮಾಡಿಕೊಳ್ಳುವುದಿಲ್ಲ. ಅವುಗಳಲ್ಲಿ ಬಹುತೇಕ ಹುಸಿ ಬೆದರಿಕೆಯಾಗಿದ್ದರೂ ಅವುಗಳನ್ನು ಲಘುವಾಗಿ ತೆಗೆದುಕೊಂಡಿಲ್ಲ. ಪ್ರಯಾಣಿಕರ ಜೀವ, ಭದ್ರತೆ ಪರಿಸ್ಥಿತಿ ಮತ್ತು ಶಿಷ್ಟಾಚಾರ ಪ್ರಮುಖವಾಗಿದೆ. ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.

ಬೆದರಿಕೆ ಹಿಂದೆ ಸಂಚು ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ತನಿಖೆ ನಡೆಯುತ್ತಿದೆ. ನಿರ್ದಿಷ್ಟವಾದ ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ. ಪ್ರಯಾಣಿಕರ ಸುರಕ್ಷತೆ ಮತ್ತು ಭದ್ರತೆ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT