ಸಂಜಯ್ ರಾವತ್ online desk
ದೇಶ

ಮಹಾರಾಷ್ಟ್ರ: 210 ಕ್ಷೇತ್ರಗಳ ಸ್ಥಾನ ಹಂಚಿಕೆಯಲ್ಲಿ MVAಗೆ ಒಮ್ಮತ- ರಾವುತ್

ಮಹಾರಾಷ್ಟ್ರವನ್ನು ಲೂಟಿ ಮಾಡುವ ಶಕ್ತಿಗಳ ಸೋಲನ್ನು ಖಚಿತಪಡಿಸುವುದು MVA ಗುರಿಯಾಗಿದೆ ಎಂದು ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡಿರುವ ಆಡಳಿತ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.

ಮುಂಬೈ: ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳ ಪೈಕಿ 210 ಕ್ಷೇತ್ರಗಳಲ್ಲಿ ಸ್ಥಾನ ಹಂಚಿಕೆ ವಿಷಯದಲ್ಲಿ ಮಹಾ ವಿಕಾಸ್ ಅಘಾಡಿ ಒಮ್ಮತಕ್ಕೆ ಬಂದಿದೆ. ಇದು "ಮಹತ್ವದ ಸಾಧನೆ" ಎಂದು ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಪಕ್ಷದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಮಹಾರಾಷ್ಟ್ರವನ್ನು ಲೂಟಿ ಮಾಡುವ ಶಕ್ತಿಗಳ ಸೋಲನ್ನು ಖಚಿತಪಡಿಸುವುದು MVA ಗುರಿಯಾಗಿದೆ ಎಂದು ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಒಳಗೊಂಡಿರುವ ಆಡಳಿತ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.

"ನಾವು 210 ಸ್ಥಾನಗಳಲ್ಲಿ ಒಮ್ಮತಕ್ಕೆ ಬಂದಿದ್ದೇವೆ. ಇದು ಗಮನಾರ್ಹ ಸಾಧನೆಯಾಗಿದೆ. ನಾವು ಜಂಟಿ ಶಕ್ತಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಗುರಿ ಹೊಂದಿದ್ದೇವೆ ಮತ್ತು ಮಹಾರಾಷ್ಟ್ರವನ್ನು ಲೂಟಿ ಮಾಡುವ ಶಕ್ತಿಗಳನ್ನು ನಾವು ಸೋಲಿಸುತ್ತೇವೆ" ಎಂದು ರಾವತ್, ಹೇಳಿದ್ದಾರೆ.

MVA ಶಿವಸೇನೆ-ಉದ್ಧವ್ ಠಾಕ್ರೆ ಬಣ, ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ NCP-SP ನ್ನು ಒಳಗೊಂಡಿದೆ. ಉದ್ಧವ್ ಠಾಕ್ರೆ ನೇತೃತ್ವದ ಪಕ್ಷ ಎಂವಿಎಯಿಂದ ಹೊರಬಂದು ಎಲ್ಲಾ 288 ಸ್ಥಾನಗಳಲ್ಲಿ ಸ್ವಂತವಾಗಿ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂಬ ಸುದ್ದಿ ವಾಹಿನಿಗಳ ವರದಿಗಳ ನಡುವೆ ರಾವುತ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಕಳೆದ ಕೆಲವು ದಿನಗಳಲ್ಲಿ ಸ್ಥಾನ ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ಮೂರು ಪ್ರಮುಖ ವಿರೋಧ ಪಕ್ಷಗಳ ನಡುವೆ ತೀವ್ರವಾದ ಮಾತುಕತೆಗಳು ನಡೆದಿವೆ. ಈ ಬೆಳವಣಿಗೆಗಳನ್ನು ಗಮನಿಸಿದರೆ ಕಾಂಗ್ರೆಸ್ ಮತ್ತು ಶಿವಸೇನೆ-ಯುಬಿಟಿ ಸಮಾನ ಮನಸ್ಸಿನಲ್ಲಿಲ್ಲ ಎಂಬ ಊಹಾಪೋಹಗಳಿತ್ತು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದಾರೆ ಎಂಬ ಊಹಾಪೋಹಗಳ ಮಧ್ಯೆ ರಾವತ್ ಅವರ ಹೇಳಿಕೆ ಗಮನಾರ್ಹವಾಗಿದೆ. ಮಿತ್ರಪಕ್ಷಗಳಾಗಿದ್ದ ಶಿವಸೇನೆ-ಯುಬಿಟಿ ಮತ್ತು ಬಿಜೆಪಿ ಮತ್ತೆ ಒಟ್ಟಾಗುವ ಬಗ್ಗೆ ಇತ್ತೀಚೆಗೆ ವದಂತಿಗಳು ಹಬ್ಬಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT