ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಪೊಲೀಸರು 
ದೇಶ

ರೋಹಿಣಿ ಸ್ಫೋಟ: ಟೆಲಿಗ್ರಾಮ್ ನಿಂದ 'ಜಸ್ಟೀಸ್ ಲೀಗ್ ಇಂಡಿಯಾ'ದ ಮಾಹಿತಿ ಕೇಳಿದ ದೆಹಲಿ ಪೊಲೀಸರು

ಭಾನುವಾರ ಸಂಜೆ, ಟೆಲಿಗ್ರಾಮ್ ಪೋಸ್ಟ್‌ನ ಸ್ಕ್ರೀನ್‌ಶಾಟ್ ಕೂಡ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರವಾಯಿತು.

ನವದೆಹಲಿ: ಖಲಿಸ್ತಾನ್ ಜಿಂದಾಬಾದ್ ಎಂಬ ವಾಟರ್‌ಮಾರ್ಕ್‌ನೊಂದಿಗೆ ರೋಹಿಣಿ ಸ್ಫೋಟದ ವಿಡಿಯೋವನ್ನು ಪೋಸ್ಟ್ ಮಾಡಿದ 'ಜಸ್ಟೀಸ್ ಲೀಗ್ ಇಂಡಿಯಾ' ಹೆಸರಿನ ಚಾನೆಲ್ ಬಗ್ಗೆ ಮತ್ತು ಬೆದರಿಕೆ ಸಂದೇಶವನ್ನು ಪೋಸ್ಟ್ ಮಾಡಿದ ಬಗ್ಗೆ ಮಾಹಿತಿ ಕೋರಿ ದೆಹಲಿ ಪೊಲೀಸರು ಸೋಮವಾರ ಸಾಮಾಜಿಕ ಮಾಧ್ಯಮ ಟೆಲಿಗ್ರಾಮ್‌ಗೆ ಪತ್ರ ಬರೆದಿದ್ದಾರೆ.

ಆದಾಗ್ಯೂ, ಟೆಲಿಗ್ರಾಮ್ ನಲ್ಲಿ ಮಾಡಿದ ಪೋಸ್ಟ್‌ ಪರಿಶೀಲನೆಗೆ ಒಳಪಟ್ಟಿರುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ ದೆಹಲಿಯ ರೋಹಿಣಿ ಪ್ರದೇಶದ ಸಿಆರ್‌ಪಿಎಫ್ ಶಾಲೆಯ ಬಳಿ ನಿಗೂಢ ಸ್ಫೋಟ ಸಂಭವಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ಆತಂಕವನ್ನು ಉಂಟುಮಾಡಿದೆ. ಕಚ್ಚಾ ಬಾಂಬ್‌ನಿಂದ ಪ್ರಚೋದಿತವಾದ ಈ ಸ್ಫೋಟದಿಂದ ಶಾಲೆಯ ಗೋಡೆ ಮತ್ತು ಸಮೀಪದಲ್ಲಿ ನಿಲ್ಲಿಸಿದ್ದ ಕೆಲವು ಕಾರುಗಳಿಗೆ ಭಾಗಶಃ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.

ಭಾನುವಾರ ಸಂಜೆ, ಟೆಲಿಗ್ರಾಮ್ ಪೋಸ್ಟ್‌ನ ಸ್ಕ್ರೀನ್‌ಶಾಟ್ ಕೂಡ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರವಾಯಿತು.

"ಭಾರತ ಹೇಡಿಗಳ ಸಂಸ್ಥೆ ಮತ್ತು ಅವರ ಯಜಮಾನರು ನಮ್ಮ ಸದಸ್ಯರನ್ನು ಗುರಿಯಾಗಿಸಿ ನಮ್ಮ ಧ್ವನಿಯನ್ನು ಅಡಗಿಸಲು ಹೊಲಸು ಗೂಂಡಾಗಳನ್ನು ನೇಮಿಸಬಹುದು ಎಂದು ಭಾವಿಸಿದರೆ ಅದು ಮೂರ್ಖರತನವಾಗುತ್ತದೆ. ನಾವು ಎಷ್ಟು ಹತ್ತಿರವಾಗಿದ್ದೇವೆ ಮತ್ತು ನಾವು ಯಾವಾಗ ಬೇಕಾದರೂ ಹೊಡೆಯಲು ಎಷ್ಟು ಸಮರ್ಥರಾಗಿದ್ದೇವೆ ಎಂಬುದನ್ನು ನೀವು ಊಹಿಸುವುದಿಲ್ಲ ಸಾಧ್ಯವಿಲ್ಲ 'ಜಸ್ಟೀಸ್ ಲೀಗ್ ಇಂಡಿಯಾ ಪೋಸ್ಟ್ ಮಾಡಿತ್ತು.

ದೆಹಲಿ ಪೊಲೀಸರು ಇನ್ನೂ ಟೆಲಿಗ್ರಾಮ್ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯನ್ನು ಸ್ವೀಕರಿಸಿಲ್ಲ.

ಏತನ್ಮಧ್ಯೆ, ಯಾವುದೇ ಸಂಭವನೀಯ ದಾಳಿಗಳ ಬಗ್ಗೆ ಗುಪ್ತಚರ ಮಾಹಿತಿ ಇಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!