ಬಾಂಬೆ ಹೈಕೋರ್ಟ್ (ಸಂಗ್ರಹ ಚಿತ್ರ) online desk
ದೇಶ

ಮುಸ್ಲಿಂ ವ್ಯಕ್ತಿ ಒಂದಕ್ಕಿಂತ ಹೆಚ್ಚು ವಿವಾಹ ನೋಂದಣಿ ಮಾಡಬಹುದು: ಹೈಕೋರ್ಟ್

ದಂಪತಿಗಳು ತಮ್ಮ ಮನವಿಯಲ್ಲಿ, ಇದು ಪುರುಷನ ಮೂರನೇ ವಿವಾಹವಾಗಿರುವುದರಿಂದ ತಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಿ, ಮದುವೆ ಪ್ರಮಾಣಪತ್ರವನ್ನು ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲು ಕೋರಿದರು.

ಬಾಂಬೆ: ಮುಸ್ಲಿಂ ವ್ಯಕ್ತಿ ಒಂದಕ್ಕಿಂತ ಹೆಚ್ಚು ವಿವಾಹಗಳನ್ನು ನೋಂದಣಿ ಮಾಡಬಹುದು ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಮುಸ್ಲಿಂ ವೈಯಕ್ತಿಕ ಕಾನೂನುಗಳಲ್ಲಿ ಒಂದಕ್ಕಿಂತ ಹೆಚ್ಚು ವಿವಾಹವಾಗುವುದಕ್ಕೆ ಅವಕಾಶ ಇರುವುದರಿಂದ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿ ಒಂದಕ್ಕಿಂತ ಹೆಚ್ಚು ವಿವಾಹ ನೋಂದಣಿ ಮಾಡಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದ್ದು, 3 ನೇ ವಿವಾಹವನ್ನು ನೋಂದಣಿ ಮಾಡಿಕೊಳ್ಳಲು ಅನುಮತಿ ಕೋರಿದ್ದ ವ್ಯಕ್ತಿಯ ಅರ್ಜಿಯನ್ನು ಪುರಸ್ಕರಿಸಿದೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಅಲ್ಜೀರಿಯಾದ ಮಹಿಳೆಯೊಂದಿಗೆ ತನ್ನ ಮೂರನೇ ವಿವಾಹವನ್ನು ನೋಂದಾಯಿಸಲು ಕೋರಿ ಮುಸ್ಲಿಂ ವ್ಯಕ್ತಿಯೊಬ್ಬರು ಸಲ್ಲಿಸಿದ ಅರ್ಜಿಯನ್ನು ನಿರ್ಧರಿಸಲು ನ್ಯಾಯಮೂರ್ತಿಗಳಾದ ಬಿ ಪಿ ಕೊಲಬಾವಾಲ್ಲಾ ಮತ್ತು ಸೋಮಶೇಖರ್ ಸುಂದರೇಶನ್ ಅವರ ವಿಭಾಗೀಯ ಪೀಠ ಅಕ್ಟೋಬರ್ 15 ರಂದು ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ವಿವಾಹ ನೋಂದಣಿ ಕಚೇರಿಗೆ ನಿರ್ದೇಶನ ನೀಡಿತು.

ದಂಪತಿಗಳು ತಮ್ಮ ಮನವಿಯಲ್ಲಿ, ಇದು ಪುರುಷನ ಮೂರನೇ ವಿವಾಹವಾಗಿರುವುದರಿಂದ ತಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಿ, ಮದುವೆ ಪ್ರಮಾಣಪತ್ರವನ್ನು ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲು ಕೋರಿದರು.

ಮಹಾರಾಷ್ಟ್ರದ ಮ್ಯಾರೇಜ್ ಬ್ಯೂರೋಗಳ ನಿಯಂತ್ರಣ ಮತ್ತು ಮದುವೆಯ ನೋಂದಣಿ ಕಾಯಿದೆಯಡಿಯಲ್ಲಿ, ಮದುವೆಯ ವ್ಯಾಖ್ಯಾನವು ಒಂದೇ ಮದುವೆಯನ್ನು ಮಾತ್ರ ಪರಿಗಣಿಸುತ್ತದೆ ಮತ್ತು ಬಹು ವಿವಾಹವನ್ನಲ್ಲ ಎಂಬ ಕಾರಣಕ್ಕಾಗಿ ಅಧಿಕಾರಿಗಳು ಮದುವೆಯನ್ನು ನೋಂದಾಯಿಸಲು ನಿರಾಕರಿಸಿದ್ದರು. ಆದಾಗ್ಯೂ, ಪೀಠ ಪ್ರಾಧಿಕಾರದ ನಿರಾಕರಣೆಯನ್ನು "ಸಂಪೂರ್ಣ ತಪ್ಪು ಕಲ್ಪನೆ" ಎಂದು ಹೇಳಿದೆ ಮತ್ತು ಕಾಯಿದೆಯ ಸಂಪೂರ್ಣ ಯೋಜನೆಯಲ್ಲಿ, ಮುಸ್ಲಿಂ ಪುರುಷ ಮೂರನೇ ವಿವಾಹವನ್ನು ನೋಂದಾಯಿಸುವುದನ್ನು ತಡೆಯುವ ಯಾವ ಅಂಶಗಳೂ ಕಾಣುವುದಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT