ಬಾಂಬೆ ಹೈಕೋರ್ಟ್ (ಸಂಗ್ರಹ ಚಿತ್ರ) online desk
ದೇಶ

ಮುಸ್ಲಿಂ ವ್ಯಕ್ತಿ ಒಂದಕ್ಕಿಂತ ಹೆಚ್ಚು ವಿವಾಹ ನೋಂದಣಿ ಮಾಡಬಹುದು: ಹೈಕೋರ್ಟ್

ದಂಪತಿಗಳು ತಮ್ಮ ಮನವಿಯಲ್ಲಿ, ಇದು ಪುರುಷನ ಮೂರನೇ ವಿವಾಹವಾಗಿರುವುದರಿಂದ ತಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಿ, ಮದುವೆ ಪ್ರಮಾಣಪತ್ರವನ್ನು ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲು ಕೋರಿದರು.

ಬಾಂಬೆ: ಮುಸ್ಲಿಂ ವ್ಯಕ್ತಿ ಒಂದಕ್ಕಿಂತ ಹೆಚ್ಚು ವಿವಾಹಗಳನ್ನು ನೋಂದಣಿ ಮಾಡಬಹುದು ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಮುಸ್ಲಿಂ ವೈಯಕ್ತಿಕ ಕಾನೂನುಗಳಲ್ಲಿ ಒಂದಕ್ಕಿಂತ ಹೆಚ್ಚು ವಿವಾಹವಾಗುವುದಕ್ಕೆ ಅವಕಾಶ ಇರುವುದರಿಂದ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿ ಒಂದಕ್ಕಿಂತ ಹೆಚ್ಚು ವಿವಾಹ ನೋಂದಣಿ ಮಾಡಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದ್ದು, 3 ನೇ ವಿವಾಹವನ್ನು ನೋಂದಣಿ ಮಾಡಿಕೊಳ್ಳಲು ಅನುಮತಿ ಕೋರಿದ್ದ ವ್ಯಕ್ತಿಯ ಅರ್ಜಿಯನ್ನು ಪುರಸ್ಕರಿಸಿದೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಅಲ್ಜೀರಿಯಾದ ಮಹಿಳೆಯೊಂದಿಗೆ ತನ್ನ ಮೂರನೇ ವಿವಾಹವನ್ನು ನೋಂದಾಯಿಸಲು ಕೋರಿ ಮುಸ್ಲಿಂ ವ್ಯಕ್ತಿಯೊಬ್ಬರು ಸಲ್ಲಿಸಿದ ಅರ್ಜಿಯನ್ನು ನಿರ್ಧರಿಸಲು ನ್ಯಾಯಮೂರ್ತಿಗಳಾದ ಬಿ ಪಿ ಕೊಲಬಾವಾಲ್ಲಾ ಮತ್ತು ಸೋಮಶೇಖರ್ ಸುಂದರೇಶನ್ ಅವರ ವಿಭಾಗೀಯ ಪೀಠ ಅಕ್ಟೋಬರ್ 15 ರಂದು ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ಉಪ ವಿವಾಹ ನೋಂದಣಿ ಕಚೇರಿಗೆ ನಿರ್ದೇಶನ ನೀಡಿತು.

ದಂಪತಿಗಳು ತಮ್ಮ ಮನವಿಯಲ್ಲಿ, ಇದು ಪುರುಷನ ಮೂರನೇ ವಿವಾಹವಾಗಿರುವುದರಿಂದ ತಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಆರೋಪಿಸಿ, ಮದುವೆ ಪ್ರಮಾಣಪತ್ರವನ್ನು ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲು ಕೋರಿದರು.

ಮಹಾರಾಷ್ಟ್ರದ ಮ್ಯಾರೇಜ್ ಬ್ಯೂರೋಗಳ ನಿಯಂತ್ರಣ ಮತ್ತು ಮದುವೆಯ ನೋಂದಣಿ ಕಾಯಿದೆಯಡಿಯಲ್ಲಿ, ಮದುವೆಯ ವ್ಯಾಖ್ಯಾನವು ಒಂದೇ ಮದುವೆಯನ್ನು ಮಾತ್ರ ಪರಿಗಣಿಸುತ್ತದೆ ಮತ್ತು ಬಹು ವಿವಾಹವನ್ನಲ್ಲ ಎಂಬ ಕಾರಣಕ್ಕಾಗಿ ಅಧಿಕಾರಿಗಳು ಮದುವೆಯನ್ನು ನೋಂದಾಯಿಸಲು ನಿರಾಕರಿಸಿದ್ದರು. ಆದಾಗ್ಯೂ, ಪೀಠ ಪ್ರಾಧಿಕಾರದ ನಿರಾಕರಣೆಯನ್ನು "ಸಂಪೂರ್ಣ ತಪ್ಪು ಕಲ್ಪನೆ" ಎಂದು ಹೇಳಿದೆ ಮತ್ತು ಕಾಯಿದೆಯ ಸಂಪೂರ್ಣ ಯೋಜನೆಯಲ್ಲಿ, ಮುಸ್ಲಿಂ ಪುರುಷ ಮೂರನೇ ವಿವಾಹವನ್ನು ನೋಂದಾಯಿಸುವುದನ್ನು ತಡೆಯುವ ಯಾವ ಅಂಶಗಳೂ ಕಾಣುವುದಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

ಆಜಾದ್ ನಗರ: ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ, 4 ಮಂದಿಗೆ ಗಾಯ, ರೌಡಿ ಶೀಟರ್ ಸಾವು.. Video

'2048 ಬಂದ್ರೂ ಡಿಕೆ ಶಿವಕುಮಾರ್ ಸಿಎಂ ಆಗಲ್ಲ: ಏಕಂದ್ರೆ ನಾವು ಬಿಡಲ್ಲ; ಇನ್ನು ಮುಂದೆ ದೇಶವೂ ನಮ್ಮದೇ, ರಾಜ್ಯವೂ ನಮ್ಮದೇ'

'ಈ ಛಲವಾದಿ ನಾರಾಯಣಸ್ವಾಮಿ ನಾಯಿ ಥರ...ಪಾಪ ಬೊಗಳಿದೆ, ಅದಕ್ಕೆ ನಾವೇನೂ ಕಲ್ಲು ಎಸೆಯಲು ಹೋಗೋದಿಲ್ಲ'

SCROLL FOR NEXT