ಸುಪ್ರೀಂ ಕೋರ್ಟ್ 
ದೇಶ

ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ವಿನಾಯಿತಿ; ವಿಚಾರಣೆ ಮುಂದೂಡಿದ CJI ಚಂದ್ರಚೂಡ್ ಪೀಠ!

ಪತಿ ತನ್ನ ಅಪ್ರಾಪ್ತ ವಯಸ್ಕಳಲ್ಲದ ಹೆಂಡತಿಯನ್ನು ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಲು ಒತ್ತಾಯಿಸಿದರೆ ಅದು ಅಪರಾಧವಲ್ಲ ಎಂದು ವಿನಾಯಿತಿ ನೀಡುತ್ತದೆ.

ನವದೆಹಲಿ: ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಗಂಡಂದಿರಿಗೆ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಬುಧವಾರ ನಾಲ್ಕು ವಾರಗಳ ಕಾಲ ಅಂದರೆ ನವೆಂಬರ್ 10ಕ್ಕೆ ಮುಂದೂಡಿದ್ದಾರೆ.

ದೀಪಾವಳಿ ರಜೆಗೆ ಸುಪ್ರೀಂ ಕೋರ್ಟ್ ಮುಚ್ಚುವ ಮೊದಲು ವಿಚಾರಣೆ ಮುಕ್ತಾಯಗೊಳ್ಳದಿದ್ದರೆ ವಿಚಾರಣೆಯನ್ನು ಪೂರ್ಣಗೊಳಿಸಲು ಮತ್ತು ತೀರ್ಪು ನೀಡಲು ಸಾಧ್ಯವಾಗುವುದಿಲ್ಲ ಎಂದು ಸಿಜೆಐ ಚಂದ್ರಚೂಡ್ ಇದೇ ವೇಳೆ ಹೇಳಿದರು.

ಅಂತೆಯೇ ಈ ವಿಚಾರದಲ್ಲಿ ಸಲ್ಲಿಕೆ ಮಾಡಲು ಸಂಬಂಧಪಟ್ಟ ಎಲ್ಲ ವಕೀಲರಿಗೆ ಕಾಲಾವಕಾಶ ನೀಡಬೇಕು ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅಭಿಪ್ರಾಯಪಟ್ಟರು.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ನಾಲ್ಕು ವಾರಗಳ ನಂತರ ಮತ್ತೊಂದು ಪೀಠದಿಂದ ವಿಚಾರಣೆಗೆ ಅರ್ಜಿಗಳನ್ನು ನಿಗದಿಪಡಿಸಿತು. ಇದು ಅಕ್ಟೋಬರ್ 17 ರಂದು ವಿಚಾರಣೆಯನ್ನು ಪ್ರಾರಂಭಿಸಿತ್ತು.

ಭಾರತೀಯ ದಂಡ ಸಂಹಿತೆ (IPC) ಮತ್ತು ಭಾರತೀಯ ನ್ಯಾಯ ಸಂಹಿತಾ (BNS) ಅತ್ಯಾಚಾರದ ಅಪರಾಧಕ್ಕಾಗಿ ಪತಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುತ್ತದೆ. ಪತಿ ತನ್ನ ಅಪ್ರಾಪ್ತ ವಯಸ್ಕಳಲ್ಲದ ಹೆಂಡತಿಯನ್ನು ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಲು ಒತ್ತಾಯಿಸಿದರೆ ಅದು ಅಪರಾಧವಲ್ಲ ಎಂದು ವಿನಾಯಿತಿ ನೀಡುತ್ತದೆ.

IPC ಯ ಸೆಕ್ಷನ್ 375 ರ ವಿನಾಯಿತಿ ಷರತ್ತಿನ ಅಡಿಯಲ್ಲಿ, ಪುರುಷನು ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆಗಳಲ್ಲಿ ತೊಡಗಿದಾಗ ಆಕೆ ಅಪ್ರಾಪ್ತಳಾಗಿಲ್ಲದೇ ಹೋದರೆ ಅದು ಅತ್ಯಾಚಾರವಲ್ಲ ಎಂದು ಹೇಳುತ್ತದೆ.

ಹೊಸ ಕಾನೂನಿನ ಅಡಿಯಲ್ಲಿಯೂ ಸಹ, ಸೆಕ್ಷನ್ 63 (2) ಸಹ ಅತ್ಯಾಚಾರಕ್ಕೆ ವಿನಾಯಿತಿ ನೀಡುತ್ತದೆ. ಹೆಂಡತಿ ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನವನವಳಾಗದೇ ಇದ್ದರೆ ಪುರುಷನು ತನ್ನ ಸ್ವಂತ ಹೆಂಡತಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆಗಳು ನಡೆಸಿದರೆ ಅದು ಅತ್ಯಾಚಾರವಲ್ಲ ಎಂದು ಹೇಳುತ್ತದೆ"

ವೇಗವಾಗಿ ಬೆಳೆಯುತ್ತಿರುವ ಮತ್ತು ನಿರಂತರವಾಗಿ ಬದಲಾಗುತ್ತಿರುವ ಸಾಮಾಜಿಕ ಮತ್ತು ಕೌಟುಂಬಿಕ ರಚನೆಯಲ್ಲಿ, ತಿದ್ದುಪಡಿ ಮಾಡಲಾದ ನಿಬಂಧನೆಗಳ ದುರುಪಯೋಗವನ್ನು ತಳ್ಳಿಹಾಕಲಾಗುವುದಿಲ್ಲ. ಏಕೆಂದರೆ ಒಪ್ಪಿಗೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಸಾಬೀತುಪಡಿಸಲು ವ್ಯಕ್ತಿಗೆ ಕಷ್ಟವಾಗುತ್ತದೆ ಎಂದು ಕೇಂದ್ರ ಸರ್ಕಾರ ನ್ಯಾಯಪೀಠಕ್ಕೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT