ಎಂವಿಎ ಮೈತ್ರಿಕೂಟದ ನಾಯಕರು online desk
ದೇಶ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಉದ್ಧವ್ ಸೇನೆ, ಕಾಂಗ್ರೆಸ್, ಶರದ್ ಪವಾರ್ NCP ಗೆ 85-85-85 ಸ್ಥಾನ ಹಂಚಿಕೆ!

ಉಳಿದ ಸ್ಥಾನಗಳನ್ನು ಎಂವಿಎ ಮೈತ್ರಿಕೂಟದ ಪಾಲುದಾರರು ಮತ್ತು ಸಣ್ಣ ಮೈತ್ರಿಕೂಟಗಳ ನಡುವೆ ಹಂಚಲಾಗುತ್ತದೆ.

ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯು ತನ್ನ ಸೀಟು ಹಂಚಿಕೆಯನ್ನು ಅ.23 ರಂದು ಅಂತಿಮಗೊಳಿಸಿದೆ.

ಒಪ್ಪಂದದ ಪ್ರಕಾರ, ಮೂರು ಪ್ರಮುಖ ಸಮ್ಮಿಶ್ರ ಪಾಲುದಾರ ಪಕ್ಷಗಳಾಗಿರುವ ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಶರದ್ ಪವಾರ್ ಬಣ) 288 ಸದಸ್ಯರ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

ಉಳಿದ ಸ್ಥಾನಗಳನ್ನು ಎಂವಿಎ ಮೈತ್ರಿಕೂಟದ ಪಾಲುದಾರರು ಮತ್ತು ಸಣ್ಣ ಮೈತ್ರಿಕೂಟಗಳ ನಡುವೆ ಹಂಚಲಾಗುತ್ತದೆ.

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್, ಎನ್‌ಸಿಪಿ (ಶರದ್ ಪವಾರ್ ಬಣ) ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಮತ್ತು ಇತರ ನಾಯಕರು ಸೇರಿದಂತೆ ಎಂವಿಎ ನಾಯಕರು ಶರದ್ ಪವಾರ್ ಅವರನ್ನು ಭೇಟಿ ಮಾಡಿದ ಬಳಿಕ ಸ್ಥಾನ ಹಂಚಿಕೆ ಸೂತ್ರವನ್ನು ನಿರ್ಧರಿಸಲಾಗಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ. MVA ಪಾಲುದಾರರಲ್ಲಿ ಪರಿಹರಿಸಲಾದ ಸ್ಥಾನಗಳನ್ನು ಮೊದಲು ಘೋಷಿಸಬೇಕು, ಗೊಂದಲಗಳಿರುವ ಸ್ಥಾನಗಳನ್ನು ನಂತರ ಇತ್ಯರ್ಥಗೊಳಿಸಲಾಗುತ್ತದೆ ಎಂದು ರಾವತ್ ತಿಳಿಸಿದ್ದಾರೆ.

ಎಲ್ಲಾ ಮೂರು ಪ್ರಮುಖ ಎಂವಿಎ ಪಾಲುದಾರರು-ಕಾಂಗ್ರೆಸ್, ಶಿವಸೇನೆ (ಯುಬಿಟಿ), ಮತ್ತು ಎನ್‌ಸಿಪಿ (ಎಸ್‌ಪಿ) ಸಮಾನ ಸಂಖ್ಯೆಯ ಸ್ಥಾನಗಳನ್ನು ಪಡೆಯುತ್ತವೆ, ತಲಾ 85, ಉಳಿದ 33 ಸ್ಥಾನಗಳನ್ನು ಮೈತ್ರಿಕೂಟದ ಸಣ್ಣ ಮಿತ್ರಪಕ್ಷಗಳಿಗೆ ಹಂಚಲಾಗುತ್ತದೆ ಎಂದು ರಾವತ್ ಸ್ಪಷ್ಟಪಡಿಸಿದ್ದಾರೆ.

"288 ಸದಸ್ಯ ಬಲದ ರಾಜ್ಯ ವಿಧಾನಸಭೆ ಕ್ಷೇತ್ರಗಳ ಪೈಕಿ 255 ಸ್ಥಾನಗಳನ್ನು ಅಂತಿಮಗೊಳಿಸಿದ್ದೇವೆ ಮತ್ತು ಉಳಿದ 33 ಸ್ಥಾನಗಳ ಹಂಚಿಕೆಯನ್ನು ಸಹ ಶೀಘ್ರದಲ್ಲೇ ಮಾಡಲಾಗುತ್ತದೆ. MVA ಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ನಾನು ಒತ್ತಿ ಹೇಳಲು ಬಯಸುತ್ತೇನೆ. ಎಲ್ಲವನ್ನೂ ಸೌಹಾರ್ದಯುತವಾಗಿ ಪರಿಹರಿಸಲಾಗಿದೆ. ಸೌಹಾರ್ದಯುತವಾಗಿ ಮೈತ್ರಿಕೂಟದ ಪಾಲುದಾರರು ಶೀಘ್ರವೇ ಅಂತಿಮಗೊಳಿಸಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಿದ್ದಾರೆ ಎಂದು ರಾವತ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT