ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಕೆ 
ದೇಶ

ವಯನಾಡು ಉಪ ಚುನಾವಣೆ: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ, ರಾಹುಲ್ ಜೊತೆ ಭರ್ಜರಿ ರೋಡ್ ಶೋ

ಲೋಕಸಭೆ ವಿಪಕ್ಷ ನಾಯಕ ಹಾಗೂ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಕಲ್ಬೆಟ್ಟಾದ ಹೊಸ ಬಸ್ ನಿಲ್ದಾಣದಿಂದ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಯುಡಿಎಫ್ ನಾಯಕರು, ಕಾರ್ಯಕರ್ತರು ಸೇರಿದಂತೆ ಅಸಂಖ್ಯಾತ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ಕಲ್ಪೆಟ್ಟಾ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ವಯನಾಡು ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಸಿದರು. ಈ ಮೂಲಕ ಚೊಚ್ಚಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಧುಮುಕಿದರು.

ಇದಕ್ಕೂ ಮುನ್ನಾ ಲೋಕಸಭೆ ವಿಪಕ್ಷ ನಾಯಕ ಹಾಗೂ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಕಲ್ಬೆಟ್ಟಾದ ಹೊಸ ಬಸ್ ನಿಲ್ದಾಣದಿಂದ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಯುಡಿಎಫ್ ನಾಯಕರು, ಕಾರ್ಯಕರ್ತರು ಸೇರಿದಂತೆ ಅಸಂಖ್ಯಾತ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಹಾಗೂ ಪಕ್ಷದ ಹಿರಿಯ ನಾಯಕರು ರೋಡ್ ಶೋನಲ್ಲಿ ಪಾಲ್ಗೊಂಡರು.

ರೋಡ್ ಶೋ ಗಾಗಿ ಬೆಳಗೆಯಿಂದ ಕಾಯುತ್ತಿದ್ದ ಯುಡಿಎಫ್ ಕಾರ್ಯಕರ್ತರು, ಬೆಂಬಲಿಗರು ಮತ್ತು ಅಪಾರ ಜನಸ್ತೋಮ ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ಅವರ ಭಾವಚಿತ್ರಗಳು, ಪಕ್ಷದ ಬಣ್ಣಗಳ ಬಲೂನ್‌ಗಳು ಮತ್ತು ಡ್ರಮ್ ಬಾರಿಸುವ ಫಲಕ ಹಿಡಿದು ಅವರನ್ನು ಸ್ವಾಗತಿಸಿದರು. ಕಾಂಗ್ರೆಸ್ ಮಿತ್ರ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪಕ್ಷದ ಬಣ್ಣಗಳ ಬಲೂನ್‌ಗಳು ರೋಡ್ ಶೋನಲ್ಲಿ ಕಂಡುಬಂದಿತು.

ನವೆಂಬರ್ 13 ರಂದು ವಯನಾಡಿನಲ್ಲಿ ಉಪಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಂದ ಗೆಲುವು ಸಾಧಿಸಿದ ರಾಹುಲ್ ಗಾಂಧಿ ಕೇರಳದ ಲೋಕಸಭೆ ಸ್ಥಾನವನ್ನು ತೆರವು ಮಾಡಲು ನಿರ್ಧರಿಸಿದ ನಂತರ ಉಪಚುನಾವಣೆ ಅನಿವಾರ್ಯವಾಗಿದೆ.

ಎಲ್‌ಡಿಎಫ್‌ನ ಸತ್ಯನ್ ಮೊಕೇರಿ ಮತ್ತು ಬಿಜೆಪಿಯ ನವ್ಯಾ ಹರಿದಾಸ್ ವಿರುದ್ಧ ಪ್ರಿಯಾಂಕಾ ಸ್ಪರ್ಧಿಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕೀಯ ಪ್ರವೇಶಿಸುವ ಮೊದಲು ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಗಾಂಧಿ ಕುಟುಂಬದ ಭದ್ರಕೋಟೆಯನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ