ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಕೆ 
ದೇಶ

ವಯನಾಡು ಉಪ ಚುನಾವಣೆ: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ, ರಾಹುಲ್ ಜೊತೆ ಭರ್ಜರಿ ರೋಡ್ ಶೋ

ಲೋಕಸಭೆ ವಿಪಕ್ಷ ನಾಯಕ ಹಾಗೂ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಕಲ್ಬೆಟ್ಟಾದ ಹೊಸ ಬಸ್ ನಿಲ್ದಾಣದಿಂದ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಯುಡಿಎಫ್ ನಾಯಕರು, ಕಾರ್ಯಕರ್ತರು ಸೇರಿದಂತೆ ಅಸಂಖ್ಯಾತ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ಕಲ್ಪೆಟ್ಟಾ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ವಯನಾಡು ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಸಿದರು. ಈ ಮೂಲಕ ಚೊಚ್ಚಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಧುಮುಕಿದರು.

ಇದಕ್ಕೂ ಮುನ್ನಾ ಲೋಕಸಭೆ ವಿಪಕ್ಷ ನಾಯಕ ಹಾಗೂ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಕಲ್ಬೆಟ್ಟಾದ ಹೊಸ ಬಸ್ ನಿಲ್ದಾಣದಿಂದ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಯುಡಿಎಫ್ ನಾಯಕರು, ಕಾರ್ಯಕರ್ತರು ಸೇರಿದಂತೆ ಅಸಂಖ್ಯಾತ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಹಾಗೂ ಪಕ್ಷದ ಹಿರಿಯ ನಾಯಕರು ರೋಡ್ ಶೋನಲ್ಲಿ ಪಾಲ್ಗೊಂಡರು.

ರೋಡ್ ಶೋ ಗಾಗಿ ಬೆಳಗೆಯಿಂದ ಕಾಯುತ್ತಿದ್ದ ಯುಡಿಎಫ್ ಕಾರ್ಯಕರ್ತರು, ಬೆಂಬಲಿಗರು ಮತ್ತು ಅಪಾರ ಜನಸ್ತೋಮ ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ಅವರ ಭಾವಚಿತ್ರಗಳು, ಪಕ್ಷದ ಬಣ್ಣಗಳ ಬಲೂನ್‌ಗಳು ಮತ್ತು ಡ್ರಮ್ ಬಾರಿಸುವ ಫಲಕ ಹಿಡಿದು ಅವರನ್ನು ಸ್ವಾಗತಿಸಿದರು. ಕಾಂಗ್ರೆಸ್ ಮಿತ್ರ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪಕ್ಷದ ಬಣ್ಣಗಳ ಬಲೂನ್‌ಗಳು ರೋಡ್ ಶೋನಲ್ಲಿ ಕಂಡುಬಂದಿತು.

ನವೆಂಬರ್ 13 ರಂದು ವಯನಾಡಿನಲ್ಲಿ ಉಪಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಂದ ಗೆಲುವು ಸಾಧಿಸಿದ ರಾಹುಲ್ ಗಾಂಧಿ ಕೇರಳದ ಲೋಕಸಭೆ ಸ್ಥಾನವನ್ನು ತೆರವು ಮಾಡಲು ನಿರ್ಧರಿಸಿದ ನಂತರ ಉಪಚುನಾವಣೆ ಅನಿವಾರ್ಯವಾಗಿದೆ.

ಎಲ್‌ಡಿಎಫ್‌ನ ಸತ್ಯನ್ ಮೊಕೇರಿ ಮತ್ತು ಬಿಜೆಪಿಯ ನವ್ಯಾ ಹರಿದಾಸ್ ವಿರುದ್ಧ ಪ್ರಿಯಾಂಕಾ ಸ್ಪರ್ಧಿಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕೀಯ ಪ್ರವೇಶಿಸುವ ಮೊದಲು ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಗಾಂಧಿ ಕುಟುಂಬದ ಭದ್ರಕೋಟೆಯನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT