ಸಾಂದರ್ಭಿಕ ಚಿತ್ರ 
ದೇಶ

ಚುನಾವಣಾ ಅಧಿಕಾರಿಗಳ ಮಹಾ ಬೇಟೆ; ಪುಣೆಯಲ್ಲಿ 139 ಕೋಟಿ ರೂ ಮೌಲ್ಯದ ಚಿನ್ನಾಭರಣ ಜಪ್ತಿ!

ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಗರದಲ್ಲಿ ಎಸ್‌ಎಸ್‌ಟಿಗಳನ್ನು ನಿಯೋಜಿಸಲಾಗಿದೆ.

ಪುಣೆ: ಮಹಾರಾಷ್ಟ್ರದಲ್ಲಿ ಚುನಾವಣಾ ಅಧಿಕಾರಿಗಳು ಶುಕ್ರವಾರ ಭರ್ಜರಿ ಭೇಟೆಯಾಡಿದ್ದು, ಪುಣೆಯ ಲಾಜಿಸ್ಟಿಕ್ ಸೇವಾ ಸಂಸ್ಥೆಯೊಂದರ ವಾಹನದಲ್ಲಿ ಸಾಗಿಸುತ್ತಿದ್ದ 139 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಣ್ಗಾವಲು ತಂಡ ಜಪ್ತಿ ಮಾಡಿದೆ.

ನಗರ ಮೂಲದ ಜ್ಯುವೆಲ್ಲರ್ಸ್ ಸಂಸ್ಥೆಯೊಂದು ಇದು ಕಾನೂನುಬದ್ಧ ರವಾನೆ ಎಂದು ಹೇಳಿಕೊಂಡಿದೆ.

ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಗರದಲ್ಲಿ ಎಸ್‌ಎಸ್‌ಟಿಗಳನ್ನು ನಿಯೋಜಿಸಲಾಗಿದೆ.

ಇಲ್ಲಿನ ಸಹಕಾರನಗರ ಪ್ರದೇಶದಲ್ಲಿ ಸೀಕ್ವೆಲ್ ಗ್ಲೋಬಲ್ ಪ್ರೆಸಿಯಸ್ ಲಾಜಿಸ್ಟಿಕ್ಸ್‌ಗೆ ಸೇರಿದ ಟೆಂಪೋವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಉಪ ಆಯುಕ್ತ(ವಲಯ 2) ಸ್ಮಾರ್ತನ ಪಾಟೀಲ್ ಅವರು ಹೇಳಿದ್ದಾರೆ.

"ತಪಾಸಣೆ ವೇಳೆ ವಾಹನದಲ್ಲಿದ್ದ ಪೆಟ್ಟಿಗೆಗಳಲ್ಲಿ ಚಿನ್ನಾಭರಣಗಳು ಪತ್ತೆಯಾಗಿದ್ದು, ಇದರ ಮೌಲ್ಯ 139 ರೂ. ಕೋಟಿ ರೂ. ಆಗಿದೆ. ಈ ವಾಹನವು ಮುಂಬೈನಿಂದ ಬಂದಿರುವುದು ಕಂಡುಬಂದಿದೆ. ನಾವು ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಮತ್ತು ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

ಚಿನ್ನಾಭರಣ ಸಂಸ್ಥೆ ಪಿಎನ್ ಗಾಡ್ಗಿಲ್ ಅಂಡ್ ಸನ್ಸ್ ಸಿಇಒ ಅಮಿತ್ ಮೋದಕ್ ಮಾತನಾಡಿ, ಸಾಗಿಸಲಾಗುತ್ತಿರುವ ಆಭರಣಗಳು ನಮ್ಮ ಸಂಸ್ಥೆಯ 10 ಕೆಜಿ ಸೇರಿದಂತೆ ಪುಣೆಯ ವಿವಿಧ ಆಭರಣ ಮಳಿಗೆಗಳಿಗೆ ಸೇರಿದ್ದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT