ಎಸ್ ಜೈಶಂಕರ್  online desk
ದೇಶ

ಊಹೆಗೂ ನಿಲುಕದ ಪರಿಸ್ಥಿತಿಯಲ್ಲಿ ಸೇನೆ ಕೆಲಸ: ಭಾರತ-ಚೀನಾ ಗಸ್ತು ಒಪ್ಪಂದ ಕುರಿತು ಜೈಶಂಕರ್

ಇಂದು ಪುಣೆಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಭಾರತ-ಚೀನಾ ಎಲ್ ಎಸಿ ಗಸ್ತು ಒಪ್ಪಂದಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಜೈಶಂಕರ್, ಭಾರತೀಯ ಸೇನೆ ಮತ್ತು ರಾಜತಾಂತ್ರಿಕತೆಯನ್ನು ಶ್ಲಾಘಿಸಿದರು.

ಪುಣೆ: ಭಾರತೀಯ ಸೇನೆ ಲಡಾಖ್‌ ಗಡಿಯಲ್ಲಿ "ಊಹಿಸಲಾಗದ" ಪರಿಸ್ಥಿತಿಯಲ್ಲಿ ಕೆಲಸ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಶನಿವಾರ ಹೇಳಿದ್ದಾರೆ.

ಇಂದು ಪುಣೆಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಭಾರತ-ಚೀನಾ ಎಲ್ ಎಸಿ ಗಸ್ತು ಒಪ್ಪಂದಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಜೈಶಂಕರ್, ಭಾರತೀಯ ಸೇನೆ ಮತ್ತು ರಾಜತಾಂತ್ರಿಕತೆಯನ್ನು ಶ್ಲಾಘಿಸಿದರು. ಸಂಬಂಧಗಳ ಸಾಮಾನ್ಯೀಕರಣಕ್ಕೆ ಸಾಮಾನ್ಯವಾಗಿ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಆದರೆ ಇದು ಸ್ವಲ್ಪ ಬೇಗ ಆಗಿದೆ ಎಂದು ಹೇಳಿದರು.

ಬ್ರಿಕ್ಸ್ ಶೃಂಗಸಭೆಗಾಗಿ ರಷ್ಯಾದ ಕಜಾನ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ಉಭಯ ದೇಶಗಳ ವಿದೇಶಾಂಗ ಸಚಿವರು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರು ಭೇಟಿಯಾಗಿ ಗಡಿಯಲ್ಲಿ ಹೇಗೆ ಮುಂದುವರಿಯಬೇಕು ಎಂದು ನಿರ್ಧರಿಸಿದರು ಎಂದು ಜೈಶಂಕರ್ ತಿಳಿಸಿದರು.

ದೇಶವನ್ನು ರಕ್ಷಿಸಲು ಊಹೆಗೂ ನಿಲುಕದ ಪರಿಸ್ಥಿತಿಯಲ್ಲಿ ಸೇನೆಯು ಇತ್ತು(ಎಲ್‌ಎಸಿಯಲ್ಲಿ) ಮತ್ತು ಮಿಲಿಟರಿ ತನ್ನ ಪಾತ್ರವನ್ನು ಮಾಡಿದೆ. ಅದೇ ರೀತಿ ರಾಜತಾಂತ್ರಿಕತೆಯು ತನ್ನ ಪಾತ್ರವನ್ನು ಮಾಡಿದೆ" ಎಂದು ಜೈಶಂಕರ್ ಹೇಳಿದರು.

ಸಮಸ್ಯೆಯ ಒಂದು ಭಾಗವೆಂದರೆ ಹಿಂದಿನ ವರ್ಷಗಳಲ್ಲಿ, ಗಡಿ ಮೂಲಸೌಕರ್ಯವನ್ನು ನಿಜವಾಗಿಯೂ ನಿರ್ಲಕ್ಷಿಸಲಾಗಿತ್ತು. ಆದರೆ ಕಳೆದ ಒಂದು ದಶಕದಲ್ಲಿ ಭಾರತ ತನ್ನ ಮೂಲಸೌಕರ್ಯವನ್ನು ಸುಧಾರಿಸಿದೆ ಎಂದರು.

"ಇಂದು ನಾವು ಒಂದು ದಶಕದ ಹಿಂದೆ ಇದ್ದಕ್ಕಿಂತ ವಾರ್ಷಿಕವಾಗಿ ಐದು ಪಟ್ಟು ಹೆಚ್ಚು ಸಂಪನ್ಮೂಲಗಳನ್ನು ಸೃಷ್ಟಿಸಿದ್ದೇವೆ. ಅದರ ಫಲಿತಾಂಶ ಈಗ ತೋರಿಸುತ್ತಿದೆ ಮತ್ತು ಮಿಲಿಟರಿಯನ್ನು ಪರಿಣಾಮಕಾರಿಯಾಗಿ ನಿಯೋಜಿಸಲು ಅನುವು ಮಾಡಿಕೊಡುತ್ತದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT