ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರು  
ದೇಶ

MGNREGA: ಐದು ತಿಂಗಳಲ್ಲಿ ಪಟ್ಟಿಯಿಂದ 39 ಲಕ್ಷಕ್ಕೂ ಹೆಚ್ಚು ಕೆಲಸಗಾರರನ್ನು ಕೈಬಿಡಲಾಗಿದೆ- NGO ವರದಿ

ಎಲ್ಲಾ MGNREGA ಕೆಲಸಗಾರರಲ್ಲಿ ಶೇಕಡಾ 27.4 ಮತ್ತು ಸಕ್ರಿಯ ಕೆಲಸಗಾರರಲ್ಲಿ ಶೇಕಡಾ 4.2 ರಷ್ಟು ಮಂದಿ ಪ್ರಸ್ತುತ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ (ABPS) ಪ್ರಯೋಜನಗಳಿಗೆ ಅನರ್ಹರಾಗಿದ್ದಾರೆ.

ನವದೆಹಲಿ: ಈ ವರ್ಷ 2024ರ ಏಪ್ರಿಲ್ ಮತ್ತು ಸೆಪ್ಟೆಂಬರ್ ನಡುವೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS)ಯಿಂದ 39 ಲಕ್ಷಕ್ಕೂ ಹೆಚ್ಚು ನೋಂದಾಯಿತ ಕಾರ್ಮಿಕರನ್ನು ತೆಗೆದು ಹಾಕಲಾಗಿದೆ ಎಂದು ನಾಗರಿಕ ಸಮಾಜ ಸಂಸ್ಥೆ ಲಿಬ್‌ಟೆಕ್ ಇಂಡಿಯಾ ಹೇಳಿದೆ.

2022-23 ಮತ್ತು 2023-24 ರ ಆರ್ಥಿಕ ವರ್ಷಗಳಲ್ಲಿ ಎಂಜಿಎನ್‌ಆರ್‌ಇಜಿಎ ನೋಂದಣಿಯಿಂದ ಎಂಟು ಕೋಟಿಗೂ ಹೆಚ್ಚು ಕಾರ್ಮಿಕರನ್ನು ತೆಗೆದುಹಾಕಲಾಗಿದೆ ಎಂದು ವರದಿ ಬಹಿರಂಗಪಡಿಸಿದೆ.

ಕಡ್ಡಾಯ ಆಧಾರ್ ಸೀಡಿಂಗ್ ನ್ನು ಅನುಸರಿಸದ ಕಾರಣ ದೇಶಾದ್ಯಂತ 6.7 ಕೋಟಿಗೂ ಹೆಚ್ಚು ಕಾರ್ಮಿಕರು ಗ್ರಾಮೀಣ ಉದ್ಯೋಗ ಯೋಜನೆಯಡಿ ಕೆಲಸ ಪಡೆಯಲು ಅನರ್ಹರಾಗಿದ್ದಾರೆ ಎಂದು ಅಂಕಿಅಂಶ ತೋರಿಸುತ್ತದೆ.

ಅವಧಿ ವಿಸ್ತರಣೆಗಳ ಹೊರತಾಗಿಯೂ, ಎಲ್ಲಾ MGNREGA ಕೆಲಸಗಾರರಲ್ಲಿ ಶೇಕಡಾ 27.4 ಮತ್ತು ಸಕ್ರಿಯ ಕೆಲಸಗಾರರಲ್ಲಿ ಶೇಕಡಾ 4.2 ರಷ್ಟು ಮಂದಿ ಪ್ರಸ್ತುತ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ (ABPS) ಪ್ರಯೋಜನಗಳಿಗೆ ಅನರ್ಹರಾಗಿದ್ದಾರೆ.

ಕೇಂದ್ರ ಸರ್ಕಾರವು ಕಳೆದ ವರ್ಷ ಜನವರಿಯಲ್ಲಿ ರಾಷ್ಟ್ರವ್ಯಾಪಿ ಎಬಿಪಿಎಸ್ ಅನುಷ್ಠಾನವನ್ನು ಕಡ್ಡಾಯಗೊಳಿಸಿತ್ತು. ಆದರೆ, ಸಾರ್ವಜನಿಕ ಆಕ್ರೋಶ ಮತ್ತು ನಾಗರಿಕ ಸಮಾಜದ ಗುಂಪುಗಳ ಒತ್ತಡಕ್ಕೆ ಮಣಿದು, ಎಬಿಪಿಎಸ್ ಅನುಷ್ಠಾನದ ಗಡುವನ್ನು ಹಲವಾರು ಬಾರಿ ವಿಸ್ತರಿಸಲಾಗಿತ್ತು. ಕಳೆದ ಜನವರಿಯಿಂದ ಎಬಿಪಿಎಸ್ ನ್ನು ಕಡ್ಡಾಯಗೊಳಿಸಲಾಗಿದೆ.

ಎಬಿಪಿಎಸ್ ಅನುಸರಣೆಯಲ್ಲಿ ರಾಜ್ಯ ಮಟ್ಟದ ಅಸಮಾನತೆ ಕಂಡುಬರುತ್ತಿದೆ. ಅಸ್ಸಾಂನಲ್ಲಿ ಎಬಿಪಿಎಸ್‌ಗೆ ಅನರ್ಹವಾಗಿರುವ ಸಕ್ರಿಯ ಕಾರ್ಯಕರ್ತರ ಹೆಚ್ಚಿನ ಶೇಕಡಾವಾರು ಪ್ರಮಾಣವನ್ನು ಹೊಂದಿದೆ, ಎಲ್ಲಾ ನೋಂದಾಯಿತ ಕಾರ್ಮಿಕರಲ್ಲಿ, ಮಹಾರಾಷ್ಟ್ರವು ಅತ್ಯಧಿಕ ಶೇಕಡಾವಾರು ಅನರ್ಹ ಕಾರ್ಮಿಕರೊಂದಿಗೆ ಮುಂಚೂಣಿಯಲ್ಲಿದೆ, ಆದರೆ ಆಂಧ್ರಪ್ರದೇಶವು ಕಡಿಮೆ ಹೊಂದಿದೆ.

ಮಹಾರಾಷ್ಟ್ರದ ಎಲ್ಲಾ ಕಾರ್ಮಿಕರಲ್ಲಿ ಶೇಕಡಾ 66.3 ಮತ್ತು ಅಸ್ಸಾಂನಲ್ಲಿ ಶೇಕಡಾ 22 ಸಕ್ರಿಯ ಕಾರ್ಮಿಕರು ಎಬಿಪಿಎಸ್ ಗೆ ಅನರ್ಹರಾಗಿದ್ದಾರೆ.

ಹಿಂದಿನ ವರ್ಷಕ್ಕೆ ಹೋಲಿಸಿದರೆ ನರೇಗಾ ಅಡಿಯಲ್ಲಿ ಉದ್ಯೋಗಾವಕಾಶಗಳಲ್ಲಿ ಸಾಕಷ್ಟು ಕುಸಿತವಾಗಿದೆ. ಉದ್ಯೋಗದ ಒಟ್ಟು ವ್ಯಕ್ತಿ-ದಿನಗಳ ಸಂಖ್ಯೆಯು ಕಳೆದ ವರ್ಷ 184 ಕೋಟಿಯಿಂದ ಈ ವರ್ಷ 154 ಕೋಟಿಗೆ ಇಳಿದಿದೆ, ತಮಿಳುನಾಡು ಮತ್ತು ಒಡಿಶಾದಲ್ಲಿ ಸಾಕಷ್ಟು ಕುಸಿತ ಕಂಡುಬಂದಿದೆ. ಮಹಾರಾಷ್ಟ್ರ ಮತ್ತು ಹಿಮಾಚಲ ಪ್ರದೇಶದಲ್ಲಿ ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DMK-AIADMK ಸೇರಿ ಸರ್ಕಾರ ರಚಿಸಿದರೆ 107 TVK ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್ ಬೆದರಿಕೆ

ರಾಜಿನಾಮೆ ಕೊಡದ ದೀದಿಗೆ ಶಾಕ್; ವೀಟೋ ಅಧಿಕಾರ ಬಳಸಿ ಮಂತ್ರಿಮಂಡಲವನ್ನೇ ವಿಸರ್ಜಿಸಿದ ರಾಜ್ಯಪಾಲ ಆರ್‌.ಎನ್ ರವಿ!

West Bengal: ಸುವೇಂದು ಅಧಿಕಾರಿ ಪಿಎ ಹತ್ಯೆ; ಕೊಲೆಗೆ ಬಳಸಲಾಗಿದ್ದ ಬೈಕ್ ವಶಕ್ಕೆ, ಪೊಲೀಸ್ ತನಿಖೆ ಚುರುಕು

ಪಶ್ಚಿಮ ಬಂಗಾಳದ ರಾಜಕೀಯ ಹಿಂಸಾಚಾರ: 13 ವರ್ಷಗಳಲ್ಲಿ ಸುವೇಂದು ಅಧಿಕಾರಿಯ 3 ಆಪ್ತರ ಬರ್ಬರ ಹತ್ಯೆ

IPL 2026: Mitchell Marsh ಸ್ಫೋಟಕ ಶತಕ, RCB ವಿರುದ್ಧ ಬೃಹತ್ ಮೊತ್ತದತ್ತ LSG! ಪಂದ್ಯಕ್ಕೆ ಮಳೆ ಅಡ್ಡಿ

SCROLL FOR NEXT