ಸಾಂದರ್ಭಿಕ ಚಿತ್ರ 
ದೇಶ

ಅಕ್ರಮ ಮೀನುಗಾರಿಕೆ ಆರೋಪ: ಶ್ರೀಲಂಕಾ ನೌಕ ಪಡೆಯಿಂದ 12 ಭಾರತೀಯ ಮೀನುಗಾರರ ಬಂಧನ

ಉತ್ತರ ಪ್ರಾಂತ್ಯದ ಜಾಫ್ನಾ, ಪೆಡ್ರೊ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದ್ದು, ಅವರ ಬೋಟ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಕೊಲಂಬೊ: ಸಮುದ್ರದ ಗಡಿ ದಾಟಿ ಮೀನುಗಾರಿಕೆಯಲ್ಲಿ ತೊಡಗಿದ ಆರೋಪದ ಹಿನ್ನೆಲೆಯಲ್ಲಿ ಶ್ರೀಲಂಕಾ ನೌಕಾಪಡೆಯು ಭಾನುವಾರ 12 ಭಾರತೀಯ ಮೀನುಗಾರರನ್ನು ಬಂಧಿಸಿ ಅವರ ಬೋಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಹೇಳಿಕೆಯೊಂದು ತಿಳಿಸಿದೆ. ಇದರೊಂದಿಗೆ ಶ್ರೀಲಂಕಾದಲ್ಲಿ ಈ ವರ್ಷ ಬಂಧನಕ್ಕೆ ಒಳಗಾದ ಭಾರತೀಯ ಮೀನುಗಾರರ ಸಂಖ್ಯೆ 462ಕ್ಕೆ ಏರಿಕೆಯಾಗಿದೆ.

ಉತ್ತರ ಪ್ರಾಂತ್ಯದ ಜಾಫ್ನಾ, ಪೆಡ್ರೊ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದ್ದು, ಅವರ ಬೋಟ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ 12 ಮೀನುಗಾರರನ್ನು ಕಂಕಸಂತುರೈ ಬಂದರಿಗೆ ಕರೆದೊಯ್ಯಲಾಗಿದ್ದು, ಮುಂದಿನ ಕ್ರಮಕ್ಕಾಗಿ ಮೈಲಾಡಿ ಮೀನುಗಾರಿಕಾ ಇನ್ ಸ್ಪೆಕ್ಟರ್ ಗೆ ಹಸ್ತಾಂತರಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ವರ್ಷ ಇಲ್ಲಿಯವರೆಗೆ 62 ಭಾರತೀಯ ಮೀನುಗಾರಿಕೆ ದೋಣಿಗಳನ್ನು ವಶಕ್ಕೆ ಪಡೆದಿದೆ ಮತ್ತು 462 ಭಾರತೀಯ ಮೀನುಗಾರರನ್ನು ಬಂಧಿಸಿ ಕಾನೂನು ಕ್ರಮಕ್ಕಾಗಿ ಅಧಿಕಾರಿಗಳಿಗೆ ಹಸ್ತಾಂತರಿಸಿದೆ ಎಂದು ಶ್ರೀಲಂಕಾ ನೌಕಾಪಡೆ ಮಾಹಿತಿ ನೀಡಿದೆ

ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯದಲ್ಲಿ ಮೀನುಗಾರರ ಸಮಸ್ಯೆ ವಿವಾದವಾಗಿ ಪರಿಣಮಿಸಿದೆ. ಅಕ್ರಮ ಮೀನುಗಾರಿಕೆ ಆರೋಪದ ಮೇಲೆ ಲಂಕಾ ನೌಕಾಪಡೆಯ ಸಿಬ್ಬಂದಿ ಪಾಕ್ ಜಲಸಂಧಿಯಲ್ಲಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿರುವ ಘಟನೆಯೂ ನಡೆದಿದೆ. ಹಲವಾರು ಘಟನೆಗಳಲ್ಲಿ ಭಾರತೀಯ ಮೀನುಗಾರರ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.

ಪುನರಾವರ್ತಿತ ಸಮಸ್ಯೆಯ ಕುರಿತು ಚರ್ಚಿಸಲು 12 ಸದಸ್ಯರ ಭಾರತೀಯ ತಂಡ ಮಂಗಳವಾರ ಕೊಲಂಬೊಗೆ ಆಗಮಿಸಲಿದೆ ಎಂದು ಶ್ರೀಲಂಕಾದ ಮೀನುಗಾರಿಕೆ ಸಚಿವಾಲಯ ಪ್ರಕಟಿಸಿದೆ. ಪಾಕ್ ಜಲಸಂಧಿಯು ತಮಿಳುನಾಡನ್ನು ಶ್ರೀಲಂಕಾದಿಂದ ಬೇರ್ಪಡಿಸಲಿದ್ದು, ಎರಡೂ ದೇಶಗಳ ಮೀನುಗಾರರಿಗೆ ಪ್ರಮುಖ ಮೀನುಗಾರಿಕೆ ಕೇಂದ್ರವಾಗಿದೆ. ಉಭಯ ದೇಶಗಳ ಮೀನುಗಾರರು ಅಜಾಗರೂಕತೆಯಿಂದ ಪರಸ್ಪರರ ಗಡಿ ದಾಟಿ ಮೀನುಗಾರಿಕೆ ನಡೆಸಿದ ಕಾರಣಕ್ಕಾಗಿ ಆಗಾಗ್ಗೆ ಬಂಧನಕ್ಕೊಳಗಾಗುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT