ರೇವ್ ಪಾರ್ಟಿ 
ದೇಶ

ರೇವ್ ಪಾರ್ಟಿ: KTR ಸೋದರ ಮಾವನ ಫಾರ್ಮ್‌ಹೌಸ್ ಮೇಲೆ ಪೊಲೀಸರ ದಾಳಿ, ಓರ್ವನ ಬಂಧನ

ಸೈಬರಾಬಾದ್ ವಿಶೇಷ ಕಾರ್ಯಾಚರಣೆ ಪಡೆ(ಎಸ್‌ಒಟಿ), ಅಬಕಾರಿ ಅಧಿಕಾರಿಗಳು ಮತ್ತು ನಾರ್ಸಿಂಗಿ ಪೊಲೀಸರು ಜಂಟಿಯಾಗಿ ರೇವ್ ಪಾರ್ಟಿಯ ಮೇಲೆ ದಾಳಿ ನಡೆಸಿದ್ದಾರೆ.

ಹೈದರಾಬಾದ್: ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆಟಿ ರಾಮರಾವ್‌ ಅವರ ಸೋದರ ಮಾವ, ಉದ್ಯಮಿ ರಾಜ್‌ ಪಾಕಲಾ ಅವರ ಫಾರ್ಮ್‌ಹೌಸ್‌ ನಲ್ಲಿ ಶನಿವಾರ ರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸೈಬರಾಬಾದ್ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಿದ್ದಾರೆ.

ಸೈಬರಾಬಾದ್ ವಿಶೇಷ ಕಾರ್ಯಾಚರಣೆ ಪಡೆ(ಎಸ್‌ಒಟಿ), ಅಬಕಾರಿ ಅಧಿಕಾರಿಗಳು ಮತ್ತು ನಾರ್ಸಿಂಗಿ ಪೊಲೀಸರು ಜಂಟಿಯಾಗಿ ರೇವ್ ಪಾರ್ಟಿಯ ಮೇಲೆ ದಾಳಿ ನಡೆಸಿದ್ದು, ಕೊಕೇನ್ ಬಳಸಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ.

ಫಾರ್ಮ್‌ಹೌಸ್‌ ನಲ್ಲಿ ಮದ್ಯ ಪೂರೈಸಲು ಪರವಾನಗಿ ಪಡೆಯದಿದ್ದಕ್ಕಾಗಿ ಅಬಕಾರಿ ಕಾಯ್ದೆಯ ಸೆಕ್ಷನ್ 34 ಎ, 34(1) ಆರ್/ಡಬ್ಲ್ಯು 9 ಅಡಿಯಲ್ಲಿ ರಾಜ್‌ ಪಾಕಲಾ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಪಾರ್ಟಿಯಲ್ಲಿ ಕನಿಷ್ಠ 31 ಜನರಿದ್ದರು. ಇದರಲ್ಲಿ 21 ಪುರುಷರು ಮತ್ತು 14 ಮಹಿಳೆಯರು ಸೇರಿದ್ದಾರೆ. ಖಚಿತ ಮಾಹಿತಿ ಆಧರಿಸಿ ಪೊಲೀಸರು ಶೋಧ ನಡೆಸಿದ್ದು, ಅನುಮತಿ ಮೀರಿ ದಾಸ್ತಾನು ಮಾಡಲಾಗಿದ್ದ 10.5 ಲೀಟರ್ ಮೌಲ್ಯದ ವಿದೇಶಿ ಮದ್ಯ ಪತ್ತೆಯಾಗಿದೆ.

ಇದಲ್ಲದೇ 10 ಭಾರತೀಯ ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಪೊಲೀಸರು ನಂತರ ಪಾರ್ಟಿಯಲ್ಲಿ ಭಾಗವಹಿಸಿದ್ದವರನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಿದರು.

ಇವರಲ್ಲಿ ವಿಜಯ್ ಮದ್ದೂರಿ ಎಂಬಾತನನ್ನು ಆಸ್ಪತ್ರೆಗೆ ಕರೆದೊಯ್ದು ರಕ್ತ ಪರೀಕ್ಷೆ ನಡೆಸಿದಾಗ ಕೊಕೇನ್ ಇರುವುದು ದೃಢಪಟ್ಟಿದೆ. ಆತನ ವಿರುದ್ಧ ಮೋಕಿಲಾ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 27 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್, ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲಾ ಗಣ್ಯ ವ್ಯಕ್ತಿಗಳ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT