ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಹೆನಾ ಶಹಾಬ್ ಮತ್ತು ಪುತ್ರ ಒಸಾಮಾ 
ದೇಶ

ಸಿವಾನ್‌ ಮಾಜಿ ಸಂಸದ ಶಹಾಬುದ್ದೀನ್ ಪತ್ನಿ, ಪುತ್ರ ಆರ್‌ಜೆಡಿ ಸೇರ್ಪಡೆ

ತಾಯಿ-ಮಗ ಇಬ್ಬರೂ ಲಾಲು, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ತೇಜಸ್ವಿ ಅವರನ್ನು ಶನಿವಾರ ತಡರಾತ್ರಿ ಪಾಟ್ನಾದ ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.

ಪಾಟ್ನಾ: ಸಿವಾನ್‌ನ ಮಾಜಿ ಸಂಸದ, ದಿ. ಮೊಹಮ್ಮದ್ ಶಹಾಬುದ್ದೀನ್ ಅವರ ಪತ್ನಿ ಹೆನಾ ಶಹಾಬ್ ಮತ್ತು ಪುತ್ರ ಒಸಾಮಾ ಅವರು ಭಾನುವಾರ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಬಿಹಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರ ಸಮ್ಮುಖದಲ್ಲಿ ರಾಷ್ಟ್ರೀಯ ಜನತಾ ದಳಕ್ಕೆ(ಆರ್‌ಜೆಡಿ) ಸೇರಿದರು.

ತಾಯಿ-ಮಗ ಇಬ್ಬರೂ ಲಾಲು, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ತೇಜಸ್ವಿ ಅವರನ್ನು ಶನಿವಾರ ತಡರಾತ್ರಿ ಪಾಟ್ನಾದ ಅವರ 10 ಸರ್ಕ್ಯುಲರ್ ರಸ್ತೆಯ ನಿವಾಸದಲ್ಲಿ ಭೇಟಿ ಮಾಡಿದ್ದರು.

2024 ರ ಲೋಕಸಭಾ ಚುನಾವಣೆಯಲ್ಲಿ ಹೆನಾ ಶಹಾಬ್ ಅವರು ಸಿವಾನ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಹೆನಾ ಅವರು ಜನತಾ ದಳ(ಯುನೈಟೆಡ್)ದ ಅಭ್ಯರ್ಥಿ ವಿಜಯಲಕ್ಷ್ಮಿ ದೇವಿ ಅವರ ವಿರುದ್ಧ 92,000 ಮತಗಳಿಂದ ಸೋಲು ಅನುಭವಿಸಿದ್ದರು.

ಆರ್‌ಜೆಡಿ ಅಭ್ಯರ್ಥಿ ಅವಧ್ ಬಿಹಾರಿ ಚೌಧರಿ ಮೂರನೇ ಸ್ಥಾನ ಪಡೆದಿದ್ದರು. ಲೋಕಸಭೆ ಚುನಾವಣೆಯಲ್ಲಿ ಹೆನಾ ಸ್ಪರ್ಧೆ ಆರ್‌ಜೆಡಿ ಅಭ್ಯರ್ಥಿ ಚೌಧರಿ ಸೋಲಿಗೆ ಕಾರಣವಾಗಿತ್ತು.

ಸಿವಾನ್‌ನಲ್ಲಿ ಸಾಹೇಬ್ ಎಂದು ಜನಪ್ರಿಯವಾಗಿರುವ ಮೊಹಮ್ಮದ್ ಶಹಾಬುದ್ದೀನ್ ಈ ಪ್ರದೇಶದ ಮುಸ್ಲಿಂ ಸಮುದಾಯದ ಪ್ರಬಲ ನಾಯಕರಾಗಿದ್ದರು. ಶಹಾಬುದ್ದೀನ್ ಸಾವಿನ ನಂತರ ಹೇನಾ ಮತ್ತು ಲಾಲು ಕುಟುಂಬದ ಸಂಬಂಧ ಹಳಸಿತ್ತು.

1996 ರಿಂದ 2004 ರವರೆಗೆ ಸಿವಾನ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮೊಹಮ್ಮದ್ ಶಹಾಬುದ್ದೀನ್ ಅವರು ಜೋಡಿ ಕೊಲೆ ಪ್ರಕರಣದಲ್ಲಿ ದೆಹಲಿಯ ತಿಹಾರ್ ಸೆಂಟ್ರಲ್ ಜೈಲು ಸೇರಿದ್ದರು. 2021 ರಲ್ಲಿ ಜೈಲಿನಲ್ಲಿಯೇ ಕೋವಿಡ್ 19 ಸೋಂಕಿನಿಂದ ನಿಧನರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT