ತಿರುಪತಿ ವೆಂಕಟೇಶ್ವರ ದೇವಾಲಯ 
ದೇಶ

ಲಖನೌ, ತಿರುಪತಿಯ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ, ಪೊಲೀಸರಿಂದ ಶೋಧ

ಪೊಲೀಸರು ಬಾಂಬ್ ಬೆದರಿಕೆ ದೂರುಗಳನ್ನು ಸ್ವೀಕರಿಸಿದ ತಕ್ಷಣ, ನಿರ್ದಿಷ್ಟ ಹೋಟೆಲ್ ನಲ್ಲಿದ್ದ ಜನರನ್ನು ಸ್ಥಳಾಂತರಿಸಿ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ಶೋಧ ನಡೆಸಿದ್ದಾರೆ.

ತಿರುಪತಿ: ನಿತ್ಯ ನೂರಾರು ವಿಮಾನಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ತಿರುಪತಿ ಪಟ್ಟಣದ ಸುಮಾರು ಅರ್ಧ ಡಜನ್ ಹೋಟೆಲ್‌ಗಳಿಗೆ ಕಳೆದ ಮೂರು ದಿನಗಳಿಂದ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪೊಲೀಸರು ಬಾಂಬ್ ಬೆದರಿಕೆ ದೂರುಗಳನ್ನು ಸ್ವೀಕರಿಸಿದ ತಕ್ಷಣ, ನಿರ್ದಿಷ್ಟ ಹೋಟೆಲ್ ನಲ್ಲಿದ್ದ ಜನರನ್ನು ಸ್ಥಳಾಂತರಿಸಿ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ಶೋಧ ನಡೆಸಿದ್ದಾರೆ.

"ನಾವು ದೂರುಗಳನ್ನು ಸ್ವೀಕರಿಸಿದ ತಕ್ಷಣ ನಮ್ಮ ತಂಡಗಳು ಸಂಪೂರ್ಣ ತಪಾಸಣೆ ನಡೆಸಿವೆ. ನಾವು ತ್ವರಿತವಾಗಿ ಪ್ರತಿಕ್ರಿಯಿಸಿದ್ದೇವೆ. ಆದರೆ ಅವು (ನಕಲಿ ಇಮೇಲ್ ಬೆದರಿಕೆಗಳು) ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ. ನಾವು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ" ಎಂದು ತಿರುಪತಿ ಪೊಲೀಸ್ ವರಿಷ್ಠಾಧಿಕಾರಿ ಎಲ್ ಸುಬ್ಬರಾಯುಡು ತಿಳಿಸಿದ್ದಾರೆ.

ಲಖನೌನ 10 ಪ್ರತಿಷ್ಠಿತ ಹೋಟೆಲ್ ಗಳಿಗೂ ಬಾಂಬ್ ಬೆದರಿಕೆ

ಉತ್ತರ ಪ್ರದೇಶ ರಾಜಧಾನಿ ಲಖನೌನ ಕನಿಷ್ಠ 10 ಪ್ರತಿಷ್ಠಿತ ಹೋಟೆಲ್‌ಗಳಿಗೆ ಭಾನುವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ.

55 ಸಾವಿರ ಡಾಲರ್ ನೀಡದಿದ್ದರೆ ಸ್ಫೋಟ ಸಂಭವಿಸುತ್ತದೆ ಎಂದು ಇಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ.

"ನಿಮ್ಮ ಹೋಟೆಲ್‌ನ ಆವರಣದಲ್ಲಿ ಬಾಂಬ್‌ಗಳನ್ನು ಕಪ್ಪು ಚೀಲಗಳಲ್ಲಿ ಮರೆಮಾಡಲಾಗಿದೆ. ನನಗೆ 55,000 ಅಮೆರಿಕನ್ ಡಾಲರ್ ಬೇಕು. ಕೊಡದಿದ್ದರೆ ಬಾಂಬ್ ಸ್ಫೋಟಿಸುತ್ತೇನೆ ಮತ್ತು ಎಲ್ಲೆಡೆ ರಕ್ತ ಚೆಲ್ಲುತ್ತದೆ. ಬಾಂಬ್‌ಗಳನ್ನು ನಿಷ್ಕ್ರಿಯಗೊಳಿಸಲು ಯತ್ನಿಸಿದರೂ ಸ್ಫೋಟಿಸುತ್ತೇನೆ" ಎಂದು ಇಮೇಲ್ ನಲ್ಲಿ ಬರೆಯಲಾಗಿದೆ.

"ಬೆಳಗ್ಗೆ ನಮಗೆ ಬೆದರಿಕೆ ಮೇಲ್ ಬಂದಿತು. ಮುನ್ನೆಚ್ಚರಿಕೆಯಾಗಿ ನಾವು ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದೇವೆ ಮತ್ತು ತಂಡವು ಈ ವಿಷಯವನ್ನು ಪರಿಶೀಲಿಸುತ್ತಿದೆ" ಎಂದು ಹೋಟೆಲ್ ಒಂದರ ಮ್ಯಾನೇಜರ್ ಬ್ರಜೇಶ್ ಕುಮಾರ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಪೊಲೀಸರು ತಕ್ಷಣ ಬಾಂಬ್ ಬೆದರಿಕೆ ಸ್ವೀಕರಿಸಿದ ಎಲ್ಲಾ ಹೋಟೆಲ್ ಗಳಲ್ಲೂ ಶೋಧ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT