ಸಂಗ್ರಹ ಚಿತ್ರ 
ದೇಶ

ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ: ದೆಹಲಿ ಮೂಲದ ಯುವಕನ ಬಂಧನ; ಪ್ರಚಾರಕ್ಕಾಗಿ ಬೆದರಿಕೆ ಸಂದೇಶ ಎಂದು ತಪ್ಪೊಪ್ಪಿಗೆ!

ದೂರದರ್ಶನದಲ್ಲಿ ಇದೇ ರೀತಿಯ ಸುದ್ದಿ ವರದಿಗಳನ್ನು ನೋಡಿದ ನಂತರ ಪ್ರಚಾರಕ್ಕಾಗಿ ಹಾಗೂ ದೇಶದ ಗಮನ ಸೆಳೆಯಲು ಈ ಕೃತ್ಯವನ್ನು ಮಾಡಿದ್ದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ.

ನವದೆಹಲಿ: ವಿಮಾನಯಾನ ಸಂಸ್ಥೆಗಳಿಗೆ ನಕಲಿ ಬಾಂಬ್ ಬೆದರಿಕೆ ಹಾಕಿದ ವ್ಯಕ್ತಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ದೆಹಲಿಯ ಉತ್ತಮ್ ನಗರದಲ್ಲಿರುವ ರಾಜಪುರಿ ಪ್ರದೇಶದ ಶುಭಂ ಉಪಾಧ್ಯಾಯ (25) ಬಂಧಿತ ಆರೋಪಿ. ದೂರದರ್ಶನದಲ್ಲಿ ಇದೇ ರೀತಿಯ ಸುದ್ದಿ ವರದಿಗಳನ್ನು ನೋಡಿದ ನಂತರ ಪ್ರಚಾರಕ್ಕಾಗಿ ಹಾಗೂ ದೇಶದ ಗಮನ ಸೆಳೆಯಲು ಈ ಕೃತ್ಯವನ್ನು ಮಾಡಿದ್ದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ.

‘ಅಕ್ಟೋಬರ್ 25 ಮತ್ತು 26 ರ ಮಧ್ಯರಾತ್ರಿಯಲ್ಲಿ ಐಜಿಐ ವಿಮಾನ ನಿಲ್ದಾಣದಲ್ಲಿ ಎರಡು ಅನುಮಾನಾಸ್ಪದ ಮತ್ತು ಸಂಭಾವ್ಯ ಬಾಂಬ್ ಬೆದರಿಕೆ ಸಂದೇಶಗಳನ್ನ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಬಂದಿತ್ತು. ತಕ್ಷಣ ಭದ್ರತಾ ಪ್ರೋಟೋಕಾಲ್ ಗಳನ್ನು ಅನುಸರಿಸಲಾಯಿತು.

ನಾಗರಿಕ ವಿಮಾನಯಾನ ಸುರಕ್ಷತೆ (ಎಸ್‌ಯುಎ ಎಸ್‌ಸಿಎ) ಕಾಯ್ದೆ, 1982 ಮತ್ತು 351(4)ರ ವಿರುದ್ಧ ಕಾನೂನುಬಾಹಿರ ಕಾಯಿದೆಗಳ ನಿಗ್ರಹದ ಸೆಕ್ಷನ್ 3(1)(ಡಿ) ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ದಾಖಲಿಸಿಕೊಂಡು ತನಿಖೆ ಆರಂಭಿಸಲಾಯಿತು. ತನಿಖೆಯ ಸಮಯದಲ್ಲಿ ಇದು ಹುಸಿ ಬೆದರಿಕೆ ಕರೆ ಎಂಬುದು ತಿಳಿಯಿತು.

ತನಿಖೆ ವೇಳೆ ಬೆದರಿಕೆ ಬಂದ ಸಾಮಾಜಿಕ ಜಾಲತಾಣದ ಖಾತೆಯು ಪಶ್ಚಿಮ ದಿಲ್ಲಿಯ ಉತ್ತಮ್ ನಗರ ಪ್ರದೇಶದ ರಾಜಪುರಿ ಮೂಲದ ಶುಭಂ ಉಪಾಧ್ಯಾಯ ಎಂಬಾತನಿಗೆ ಸೇರಿದ್ದು ಎಂಬುದು ತಿಳಿದುಬಂದಿತ್ತು. ಬಳಿಕ ಉಪಾಧ್ಯಾಯನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ʼಟಿವಿಯಲ್ಲಿ ಬೆದರಿಕೆ ಕರೆಗಳ ಬಗ್ಗೆ ವರದಿಗಳನ್ನು ನೋಡಿ ತಾನು ಕೂಡ ಪ್ರಚಾರಕ್ಕೆ ಬೆದರಿಕೆ ಹಾಕಿದ್ದಾಗಿ ಹೇಳಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ಐಜಿಐ ವಿಮಾನ ನಿಲ್ದಾಣ) ಉಷಾ ರಂಗ್ನಾನಿ ತಿಳಿಸಿದ್ದಾರೆ.

25 ವರ್ಷದ ಶುಭಂ ಉಪಾಧ್ಯಾಯ ನಿರುದ್ಯೋಗಿಯಾಗಿದ್ದು,12ನೇ ತರಗತಿವರೆಗೆ ವಿದ್ಯಾಭ್ಯಾಸವನ್ನು ಮಾಡಿದ್ದಾನೆ. ಎಲ್ಲಾ ಅಗತ್ಯ ಭದ್ರತಾ ಕ್ರಮಗಳು ಜಾರಿಯಲ್ಲಿವೆ ಎಂದು ನಾವು ಸಾರ್ವಜನಿಕರಿಗೆ ಭರವಸೆ ನೀಡುತ್ತೇವೆ ಮತ್ತು ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದರೆ ಅಧಿಕಾರಿಗಳಿಗೆ ತಿಳಿಸುವಂತೆ ನಾವು ಕೇಳಿಕೊಳ್ಳುತ್ತಿದ್ದೇವೆ ಎಂದು ರಂಗ್ನಾನಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT