ಸಾಂದರ್ಭಿಕ ಚಿತ್ರ 
ದೇಶ

ರಸ್ತೆ ಅಪಘಾತ: ವಿಜಯ್ ದಳಪತಿಯ TVK ಪಕ್ಷದ ಇಬ್ಬರು ಕಾರ್ಯಕರ್ತರ ಸಾವು

ಕಲ್ಲಕುರಿಚಿ ಜಿಲ್ಲೆಯ ಉಲುಂದೂರ್‌ಪೇಟ್ ಬಳಿಯ ಶೇಕ್ ಹುಸೇನ್‌ಪೇಟ್‌ನಲ್ಲಿ ಎಸ್‌ಯುವಿ ಕಾರು ಪಲ್ಟಿಯಾದ ಪರಿಣಾಮ ಟಿವಿಕೆ ಪಕ್ಷದ ಇಬ್ಬರು ಕಾರ್ಯಕರ್ತರು ಸಾವು

ಚೆನ್ನೈ: ತಮಿಳು ನಟ ವಿಜಯ್ ದಳಪತಿ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮೊದಲ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಇಬ್ಬರು ಪಕ್ಷದ ಕಾರ್ಯಕರ್ತರು ರಸ್ತೆ ಅಪಘಾತದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಕಲ್ಲಕುರಿಚಿ ಜಿಲ್ಲೆಯ ಉಲುಂದೂರ್‌ಪೇಟ್ ಬಳಿಯ ಶೇಕ್ ಹುಸೇನ್‌ಪೇಟ್‌ನಲ್ಲಿ ಎಸ್‌ಯುವಿ ಕಾರು ಪಲ್ಟಿಯಾದ ಪರಿಣಾಮ ಟಿವಿಕೆ ಪಕ್ಷದ ಇಬ್ಬರು ಕಾರ್ಯಕರ್ತರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಪಘಾತಕ್ಕೀಡಾದ ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಉಳುಂದೂರುಪೇಟೆ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ತಿರುಚ್ಚಿಯ ಕಲೈ ಮತ್ತು ಶ್ರೀನಿವಾಸನ್ ಎಂದು ಗುರುತಿಸಲಾಗಿದೆ. ಅವರು TVK ಪಕ್ಷದ ಮೊದಲ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ವಿಕ್ರವಾಂಡಿಗೆ ತೆರಳುತ್ತಿದ್ದರು. ಕಾರು ಶೇಕ್ ಹುಸೇನ್‌ಪೇಟೆ ಬಳಿ ಬಂದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಕ್ರವಾಂಡಿಯಲ್ಲಿ 85 ಎಕರೆ ವಿಸ್ತೀರ್ಣದ ಸಮ್ಮೇಳನ ಸ್ಥಳವು ಚೆನ್ನೈನ ಐತಿಹಾಸಿಕ ಕೋಟೆ ಸೇಂಟ್ ಜಾರ್ಜ್ ಮಾದರಿಯ ಭವ್ಯವಾದ ಪ್ರವೇಶದ್ವಾರವನ್ನು ಹೊಂದಿದೆ. ಸುಮಾರು 2 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ಸಾಧ್ಯತೆಯಿದೆ. ಭದ್ರತೆಗಾಗಿ ಸುಮಾರು 6,000 ಪೊಲೀಸರನ್ನು ತಮಿಳುನಾಡು ಗೃಹ ಇಲಾಖೆ ನಿಯೋಜಿಸಿದೆ.

ವಿಚಾರವಾದಿ ದ್ರಾವಿಡ ಧೀಮಂತ 'ಪೆರಿಯಾರ್' ಇವಿ ರಾಮಸಾಮಿಯಿಂದ ಹಿಡಿದು ಡಾ ಬಿಆರ್ ಅಂಬೇಡ್ಕರ್ ಮತ್ತು ಕಾಂಗ್ರೆಸ್ ಹಿರಿಯ ಕೆ ಕಾಮರಾಜ್, ಹಿಂದಿನ ತಮಿಳು ರಾಜರು - ಚೇರ, ಚೋಳ ಮತ್ತು ಪಾಂಡ್ಯ - ಹಾಗೂ ಧೀರ ರಾಣಿ ವೇಲು ನಾಚಿಯಾರ್ ವರೆಗೆ ರಾಜಕೀಯ ದಿಗ್ಗಜರ ಬೃಹತ್ ಕಟೌಟ್ ಗಳಿಂದ ಸ್ಥಳವನ್ನು ಅಲಂಕರಿಸಲಾಗಿದೆ. ವಿಜಯ್ ಅವರ ಕಟೌಟ್ ಟಿವಿಕೆಗಳ ರಾಜಕೀಯ ದೃಷ್ಟಿಕೋನದ ಸೂಚನೆಯನ್ನು ನೀಡುವಂತೆ ಇವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT