ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ 
ದೇಶ

Jammu and Kashmir: ಸೇನಾ ವಾಹನದ ಮೇಲೆ ಮತ್ತೆ ಉಗ್ರರ ದಾಳಿ; ಶೋಧ ಕಾರ್ಯಾಚರಣೆ ಆರಂಭ!

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನ ಬತ್ತಲ್ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಕುಕೃತ್ಯ ಮುಂದುವರೆಸಿದ್ದು, ಸೇನಾವಾಹನದ ಮೇಲೆ ದಾಳಿ ಮಾಡಿದ್ದಾರೆ.

ಹೌದು.. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನ ಬತ್ತಲ್ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಆದರೆ ಕೂಡಲೇ ಸೈನಿಕರು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಸೇನಾ ಮೂಲಗಳ ಪ್ರಕಾರ ಘಟನಾ ಪ್ರದೇಶದಲ್ಲಿ ಮೂವರು ಉಗ್ರರು ಅವಿತಿರುವ ಶಂಕೆ ಇದ್ದು ಸೇನೆ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದೆ.

ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಉಪಸ್ಥಿತಿಯನ್ನು ಖೌರ್‌ನ ಭಟ್ಟಾಲ್ ಪ್ರದೇಶದ ಅಸ್ಸಾನ್ ದೇವಾಲಯದ ಬಳಿ ಗ್ರಾಮಸ್ಥರು ವರದಿ ಮಾಡಿದ್ದಾರೆ ಎನ್ನಲಾಗಿದೆ. ಸೇನೆಯ ಆಂಬ್ಯುಲೆನ್ಸ್ ಹಾದು ಹೋಗುತ್ತಿದ್ದಾಗ ಗ್ರಾಮದಲ್ಲಿ ಕೆಲವು ಗುಂಡಿನ ಶಬ್ದಗಳು ಕೇಳಿಬಂದವು.

ಕೂಡಲೇ ಪೊಲೀಸ್ ಜೊತೆಗೆ ಸೇನಾ ಪಡೆಗಳು ಗ್ರಾಮದ ಅಕ್ಕಪಕ್ಕದ ಪ್ರದೇಶಗಳನ್ನು ಸುತ್ತುವರೆದಿವೆ. ಉಗ್ರರು ಗಡಿಯಾಚೆಯಿಂದ ಒಳ ನುಸುಳಿದ್ದಾರೆ ಎಂದು ಹೇಳಲಾಗಿದ್ದು, ಇದೀಗ ಉಗ್ರರ ತಟಸ್ಥಗೊಳಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT