ಪ್ರತಿಪಕ್ಷಗಳ ಸಂಸದರು 
ದೇಶ

ವಕ್ಫ್ ತಿದ್ದುಪಡಿ ಮಸೂದೆಗೆ ಉತ್ತರಾಖಂಡ ವಕ್ಫ್ ಬೋರ್ಡ್ ಬೆಂಬಲ

ಪಂಜಾಬ್ ವಕ್ಫ್ ಬೋರ್ಡ್, ಹರಿಯಾಣ ವಕ್ಫ್ ಬೋರ್ಡ್ ಮತ್ತು ಉತ್ತರಾಖಂಡ್ ವಕ್ಫ್ ಬೋರ್ಡ್ ಸೇರಿದಂತೆ ಹಲವಾರು ರಾಜ್ಯ ವಕ್ಫ್ ಮಂಡಳಿಗಳು ತಮ್ಮ ಅಭಿಪ್ರಾಯಗಳನ್ನು ಮತ್ತು ಸಲಹೆಗಳನ್ನು ಜೆಪಿಸಿಗೆ ಸಲ್ಲಿಸಲು ಸಭೆಯಲ್ಲಿ ಭಾಗವಹಿಸಿದ್ದವು.

ನವದೆಹಲಿ: ಪ್ರಸ್ತಾವಿತ ವಕ್ಫ್(ತಿದ್ದುಪಡಿ) ಮಸೂದೆ, 2024ಕ್ಕೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಉತ್ತರಾಖಂಡ ವಕ್ಫ್ ಮಂಡಳಿಯು ಸಂಪೂರ್ಣ ಬೆಂಬಲ ಘೋಷಿಸಿದೆ.

ಪಂಜಾಬ್ ವಕ್ಫ್ ಬೋರ್ಡ್, ಹರಿಯಾಣ ವಕ್ಫ್ ಬೋರ್ಡ್ ಮತ್ತು ಉತ್ತರಾಖಂಡ್ ವಕ್ಫ್ ಬೋರ್ಡ್ ಸೇರಿದಂತೆ ಹಲವಾರು ರಾಜ್ಯ ವಕ್ಫ್ ಮಂಡಳಿಗಳು ತಮ್ಮ ಅಭಿಪ್ರಾಯಗಳನ್ನು ಮತ್ತು ಸಲಹೆಗಳನ್ನು ಜೆಪಿಸಿಗೆ ಸಲ್ಲಿಸಲು ಸಭೆಯಲ್ಲಿ ಭಾಗವಹಿಸಿದ್ದವು.

ಮೂಲಗಳ ಪ್ರಕಾರ, ಉತ್ತರಾಖಂಡ ವಕ್ಫ್ ಮಂಡಳಿಯ ಪ್ರತಿನಿಧಿಗಳು ಸಮಿತಿಗೆ, ವಿಶಿಷ್ಟವಾದ ವಿನಂತಿಯನ್ನು ಮಾಡಿದ್ದು, ವಕ್ಫ್ ಆಸ್ತಿಗಳಿಂದ ಕೆಲವು ಪ್ರಯೋಜನಗಳನ್ನು ಸೈನಿಕರಿಗೆ ಅಥವಾ ಅವರ ಕುಟುಂಬಗಳಿಗೆ ಹಂಚಿಕೆ ಮಾಡಲು ಕಾನೂನಿನಲ್ಲಿ ಅವಕಾಶ ನೀಡಬೇಕು ಎಂದು ಸಲಹೆ ನೀಡಿದೆ.

ಒಬ್ಬ ಸೈನಿಕನು ರಾಷ್ಟ್ರಕ್ಕಾಗಿ ಹೋರಾಡುವಾಗ, ಅವರು ಹಿಂದೂ, ಮುಸ್ಲಿಂ ಅಥವಾ ಇತರ ಯಾವುದೇ ಧರ್ಮಕ್ಕೆ ಸೇರಿರುವುದಿಲ್ಲ. ಅವರು ಒಬ್ಬ ದೇಶಭಕ್ತರಾಗಿ ಕೆಲಸ ಮಾಡುತ್ತಾರೆ ಎಂದು ಉತ್ತರಾಖಂಡ ವಕ್ಫ್ ಮಂಡಳಿ ಹೇಳಿದೆ. ಅಲ್ಲದೆ ಪ್ರಸ್ತಾವಿತ ವಕ್ಫ್(ತಿದ್ದುಪಡಿ) ಮಸೂದೆ 2024ಕ್ಕೆ ಬೆಂಬಲಿಸಿದೆ.

ಉತ್ತರಾಖಂಡದ ಈ ಪ್ರಸ್ತಾವನೆಗೆ ವಿರೋಧ ಪಕ್ಷಗಳ ಹಲವು ಸಂಸದರಿಂದ ವಿರೋಧ ವ್ಯಕ್ತವಾಗಿದೆ.

ವಕ್ಫ್ ತಿದ್ದುಪಡಿ ಕಾಯ್ದೆ, 2024ರ ಕುರಿತು ತಮ್ಮ ಮೌಖಿಕ ಪುರಾವೆಗಳನ್ನು ದಾಖಲಿಸಿಕೊಳ್ಳಲು ದೆಹಲಿ ವಕ್ಫ್ ಮಂಡಳಿ, ಹರ್ಯಾಣ ವಕ್ಫ್ ಮಂಡಳಿ, ಪಂಜಾಬ್ ವಕ್ಫ್ ಮಂಡಳಿ ಹಾಗೂ ಉತ್ತರಾಖಂಡ ವಕ್ಫ್ ಮಂಡಳಿಯ ಪ್ರತಿನಿಧಿಗಳನ್ನು ಜಂಟಿ ಸಂಸದೀಯ ಸಮಿತಿ ಸೋಮವಾರ ಸಭೆಗೆ ಆಹ್ವಾನಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT