ಪ್ರತಿಪಕ್ಷಗಳ ಸಂಸದರು 
ದೇಶ

ವಕ್ಫ್ ತಿದ್ದುಪಡಿ ಮಸೂದೆಗೆ ಉತ್ತರಾಖಂಡ ವಕ್ಫ್ ಬೋರ್ಡ್ ಬೆಂಬಲ

ಪಂಜಾಬ್ ವಕ್ಫ್ ಬೋರ್ಡ್, ಹರಿಯಾಣ ವಕ್ಫ್ ಬೋರ್ಡ್ ಮತ್ತು ಉತ್ತರಾಖಂಡ್ ವಕ್ಫ್ ಬೋರ್ಡ್ ಸೇರಿದಂತೆ ಹಲವಾರು ರಾಜ್ಯ ವಕ್ಫ್ ಮಂಡಳಿಗಳು ತಮ್ಮ ಅಭಿಪ್ರಾಯಗಳನ್ನು ಮತ್ತು ಸಲಹೆಗಳನ್ನು ಜೆಪಿಸಿಗೆ ಸಲ್ಲಿಸಲು ಸಭೆಯಲ್ಲಿ ಭಾಗವಹಿಸಿದ್ದವು.

ನವದೆಹಲಿ: ಪ್ರಸ್ತಾವಿತ ವಕ್ಫ್(ತಿದ್ದುಪಡಿ) ಮಸೂದೆ, 2024ಕ್ಕೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಉತ್ತರಾಖಂಡ ವಕ್ಫ್ ಮಂಡಳಿಯು ಸಂಪೂರ್ಣ ಬೆಂಬಲ ಘೋಷಿಸಿದೆ.

ಪಂಜಾಬ್ ವಕ್ಫ್ ಬೋರ್ಡ್, ಹರಿಯಾಣ ವಕ್ಫ್ ಬೋರ್ಡ್ ಮತ್ತು ಉತ್ತರಾಖಂಡ್ ವಕ್ಫ್ ಬೋರ್ಡ್ ಸೇರಿದಂತೆ ಹಲವಾರು ರಾಜ್ಯ ವಕ್ಫ್ ಮಂಡಳಿಗಳು ತಮ್ಮ ಅಭಿಪ್ರಾಯಗಳನ್ನು ಮತ್ತು ಸಲಹೆಗಳನ್ನು ಜೆಪಿಸಿಗೆ ಸಲ್ಲಿಸಲು ಸಭೆಯಲ್ಲಿ ಭಾಗವಹಿಸಿದ್ದವು.

ಮೂಲಗಳ ಪ್ರಕಾರ, ಉತ್ತರಾಖಂಡ ವಕ್ಫ್ ಮಂಡಳಿಯ ಪ್ರತಿನಿಧಿಗಳು ಸಮಿತಿಗೆ, ವಿಶಿಷ್ಟವಾದ ವಿನಂತಿಯನ್ನು ಮಾಡಿದ್ದು, ವಕ್ಫ್ ಆಸ್ತಿಗಳಿಂದ ಕೆಲವು ಪ್ರಯೋಜನಗಳನ್ನು ಸೈನಿಕರಿಗೆ ಅಥವಾ ಅವರ ಕುಟುಂಬಗಳಿಗೆ ಹಂಚಿಕೆ ಮಾಡಲು ಕಾನೂನಿನಲ್ಲಿ ಅವಕಾಶ ನೀಡಬೇಕು ಎಂದು ಸಲಹೆ ನೀಡಿದೆ.

ಒಬ್ಬ ಸೈನಿಕನು ರಾಷ್ಟ್ರಕ್ಕಾಗಿ ಹೋರಾಡುವಾಗ, ಅವರು ಹಿಂದೂ, ಮುಸ್ಲಿಂ ಅಥವಾ ಇತರ ಯಾವುದೇ ಧರ್ಮಕ್ಕೆ ಸೇರಿರುವುದಿಲ್ಲ. ಅವರು ಒಬ್ಬ ದೇಶಭಕ್ತರಾಗಿ ಕೆಲಸ ಮಾಡುತ್ತಾರೆ ಎಂದು ಉತ್ತರಾಖಂಡ ವಕ್ಫ್ ಮಂಡಳಿ ಹೇಳಿದೆ. ಅಲ್ಲದೆ ಪ್ರಸ್ತಾವಿತ ವಕ್ಫ್(ತಿದ್ದುಪಡಿ) ಮಸೂದೆ 2024ಕ್ಕೆ ಬೆಂಬಲಿಸಿದೆ.

ಉತ್ತರಾಖಂಡದ ಈ ಪ್ರಸ್ತಾವನೆಗೆ ವಿರೋಧ ಪಕ್ಷಗಳ ಹಲವು ಸಂಸದರಿಂದ ವಿರೋಧ ವ್ಯಕ್ತವಾಗಿದೆ.

ವಕ್ಫ್ ತಿದ್ದುಪಡಿ ಕಾಯ್ದೆ, 2024ರ ಕುರಿತು ತಮ್ಮ ಮೌಖಿಕ ಪುರಾವೆಗಳನ್ನು ದಾಖಲಿಸಿಕೊಳ್ಳಲು ದೆಹಲಿ ವಕ್ಫ್ ಮಂಡಳಿ, ಹರ್ಯಾಣ ವಕ್ಫ್ ಮಂಡಳಿ, ಪಂಜಾಬ್ ವಕ್ಫ್ ಮಂಡಳಿ ಹಾಗೂ ಉತ್ತರಾಖಂಡ ವಕ್ಫ್ ಮಂಡಳಿಯ ಪ್ರತಿನಿಧಿಗಳನ್ನು ಜಂಟಿ ಸಂಸದೀಯ ಸಮಿತಿ ಸೋಮವಾರ ಸಭೆಗೆ ಆಹ್ವಾನಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!