ಹೈದರಾಬಾದ್ ಪಟಾಕಿ ದುರಂತ 
ದೇಶ

ಹೈದ್ರಾಬಾದ್ ಪಟಾಕಿ ಅಂಗಡಿಯಲ್ಲಿ ಬೆಂಕಿ ದುರಂತ; ಭೀಕರ Video ವೈರಲ್; ಮಾಲೀಕನಿಗೆ ಶಾಕ್!

ದೀಪಾವಳಿಗೆ ಮುನ್ನ ಮಾರಾಟಕ್ಕಾಗಿ ಅಂಗಡಿಯಲ್ಲಿ ಶೇಖರಿಸಿಡಲಾಗಿದ್ದ ಪಟಾಕಿಗಳಿಗೆ ಬೆಂಕಿ ತಗುಲಿ ಇಡೀ ಅಂಗಡಿ ಭಸ್ಮವಾಗಿದೆ.

ಹೈದರಾಬಾದ್: ತೆಲಂಗಾಣ ರಾಜದಾನಿ ಹೈದರಾಬಾದ್ ನಲ್ಲಿ ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಅಂಗಡಿ ಬೆಂಕಿಗಾಹುತಿಯಾದ ಭೀಕರ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ದೀಪಾವಳಿಗೆ ಮುನ್ನ ಮಾರಾಟಕ್ಕಾಗಿ ಅಂಗಡಿಯಲ್ಲಿ ಶೇಖರಿಸಿಡಲಾಗಿದ್ದ ಪಟಾಕಿಗಳಿಗೆ ಬೆಂಕಿ ತಗುಲಿ ಇಡೀ ಅಂಗಡಿ ಭಸ್ಮವಾಗಿದೆ.

ಭಾನುವಾರ ರಾತ್ರಿ ಹೈದರಾಬಾದ್‌ನ ರಾಮ್‌ಕೋಟೆಯಲ್ಲಿರುವ ಪಟಾಕಿ ಅಂಗಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಈ ಪ್ರದೇಶದ ಹಲವಾರು ವ್ಯಾಪಾರಿಗಳಲ್ಲಿ ಭೀತಿಯನ್ನು ಉಂಟುಮಾಡಿತ್ತು. ಪರಾಸ್ ಪಟಾಕಿಯ ಸಗಟು ಪಟಾಕಿ ಅಂಗಡಿಯಲ್ಲಿ ನಡೆದ ಈ ಘಟನೆಯ ವಿಡಿಯೋ ಇದೀಗ ಅಂತರ್ಜಾಲದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಅಂಗಡಿಯೊಳಗೆ ಪಟಾಕಿಗಳು ಬೆಂಕಿ ತಗುಲಿ ಸಿಡಿದಿದ್ದು, ಭಯಭೀತರಾದ ಗ್ರಾಹಕರು ಗಾಬರಿಯಿಂದ ಹೊರಗೆ ಓಡಿಹೋಗಿದ್ದಾರೆ. ಸ್ಫೋಟ ಪ್ರಾರಂಭವಾಗುತ್ತಿದ್ದಂತೆ, ಅನೇಕರು ಅಂಗಡಿಯಿಂದ ಹೊರಗೆ ಓಡಿಬಂದಿದ್ದು, ಆದರೆ ಕೆಲವರು ಬೆಂಕಿ ಜ್ವಾಲೆಯಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ವೀಡಿಯೊದ ಕೊನೆಯಲ್ಲಿ, ಅಂಗಡಿಯಿಂದ ದಟ್ಟವಾದ ಹೊಗೆ ಬರುತ್ತಿರುವ ಆತಂಕಕಾರಿ ದೃಶ್ಯ ಕಾಣುತ್ತದೆ.

ಇನ್ನು ವಿಚಾರ ತಿಳಿದ ಕೂಡಲೇ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಪಟಾಕಿಗಳು ಸಿಡಿಯುತ್ತಲೇ ಇದ್ದುದರಿಂದ ಪರಿಸ್ಥಿತಿ ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿಗೂ ಸವಾಲಾಗಿತ್ತು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಂತೆಯೇ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೆಲವರಿಗೆ ಸುಟ್ಟಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಲೀಕನಿಗೆ ಶಾಕ್

ಇನ್ನು ಈ ಅಂಗಡಿಯಲ್ಲಿ ಪಟಾಕಿ ಮಾರಾಟಕ್ಕೆ ಯಾವುದೇ ರೀತಿಯ ಪರವಾನಗಿ ಇರಲಿಲ್ಲ ಎಂದು ಹೇಳಲಾಗಿದೆ. ಪರವಾನಗಿ ಇಲ್ಲದೆ ಅಕ್ರಮವಾಗಿ ಅಂಗಡಿ ನಡೆಸಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಲ್ತಾನ್ ಬಜಾರ್‌ನ ಸಹಾಯಕ ಪೊಲೀಸ್ ಆಯುಕ್ತ ಕೆ ಶಂಕರ್, '“ಅಂಗಡಿಗೆ ಯಾವುದೇ ಪ್ರಮಾಣಪತ್ರವಿಲ್ಲ. ಅದೊಂದು ಅಕ್ರಮ ಅಂಗಡಿಯಾಗಿತ್ತು. ನಾವು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT